ದರ್ಶನ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ: 12 ವರ್ಷದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ನಟ

Jun 22, 2024, 5:58 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Murder case) ನಟ ದರ್ಶನ್‌(Darshan) ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದ್ದಾರೆ. ದರ್ಶನ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ(Judicial custody) ವಿಧಿಸಲಾಗಿದೆ. A2- ದರ್ಶನ್, A9-  ಧನರಾಜ್, A10- ವಿನಯ್, A14-ಪ್ರದೂಷ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. 12 ವರ್ಷದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲನ್ನು ನಟ ದರ್ಶನ್ ಸೇರಿದ್ದಾರೆ. ಪತ್ನಿ ಮೇಲಿನ ಹಲ್ಲೆ ಕೇಸ್‌ನಲ್ಲಿ ನಟ ದರ್ಶನ್‌ ಜೈಲಿನಲ್ಲಿದ್ದರು. 28 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದರು.

ಇದನ್ನೂ ವೀಕ್ಷಿಸಿ:  ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ