ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

Published : Aug 06, 2023, 11:38 AM IST

ಚಿತ್ರದುರ್ಗ ಕವಾಡಿಗಾರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಜನರ ಜೀವವನ್ನೇ ಹಿಂಡುತ್ತಿದೆ. ಪ್ರತಿದಿನ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಡೀ ಬಡಾವಣೆಯಲ್ಲಿ ಆತಂಕದ ವಾತಾವಾರಣ ನಿರ್ಮಾಣವಾಗಿದೆ. ಇದರ ನಡುವೆ ಗ್ರಾಮಕ್ಕೆ ಭೇಟಿ ಕೊಟ್ಟ ಆರೋಗ್ಯ ಸಚಿವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ, 10 ಲಕ್ಷ ಪರಿಹಾರದ ಚೆಕ್ ವಿತರಿಸಿದ್ರು.
 

ಚಿತ್ರದುರ್ಗ ಕವಾಡಿಗಾರಹಟ್ಟಿ(Kavadigarahatti) ಬಡಾವಣೆಯಲ್ಲಿ ವಿಷ ಜಲ ಜನರ ಜೀವ ಹಿಂಡುತ್ತಲೇ ಇದೆ. ಕಳೆದ 6 ದಿನಗಳಿಂದ ನೀರು ಕೂಡಿದು ಅಸ್ವಸ್ಥರಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಗ್ರಾಮದಲ್ಲಿ ಆ್ಯಂಬುಲೆನ್ಸ್ ಸೈರನ್ ಕೇಳಿದ್ರೆ ಜನ ಬೆಚ್ಚಿಬೀಳುವಂತಾಗಿದೆ. ವಿಷ ಜಲಕ್ಕೆ ಐವರು ಬಲಿಯಾಗಿದ್ದು ಇಡೀ ಬಡಾವಣೆಯಲ್ಲಿ ನೀರವ ಮೌನ ಆವರಿಸಿದೆ. ಜತೆಗೆ ಅಸ್ವಸ್ಥರ ಸಂಖ್ಯೆ 158ಕ್ಕೆ ಏರಿಕೆಯಾಗಿದ್ದು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕವಾಡಿಗಾರಹಟ್ಟಿ ಗ್ರಾಮಕ್ಕೆ ಆರೋಗ್ಯ ಸಚಿವರು ಬರ್ತಾರೆ ಆಂತಾ ಸುದ್ದಿಬೆನ್ನಲ್ಲೇ ನಗರಸಭೆ ಅಲರ್ಟ್ ಆಗಿತ್ತು. ಗ್ರಾಮವನ್ನ ಶುಚಿಗೊಳಿಸಿದ ಸಿಬ್ಬಂದಿ  ಇಡೀ  ಬಡವಾಣೆಗೆ ಔಷಧಿ ಸಿಂಪಡಿಸಿದ್ರು. ಬಳಿಕ ದಿನೇಶ್ ಗುಂಡೂರಾವ್(Dinesh Gundu Rao) ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರದ ಚೆಕ್(Compensation check) ವಿತರಿಸಿದ್ರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸಂತ್ರಸ್ಥರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ರು. ಈ ವೇಳೆ ಕೆಲ ರೋಗಿಯ ಸಂಬಂಧಿಕರು ಆಸ್ಪತ್ರೆಯಲ್ಲಿ ಎಕ್ಸ್ ರೇ, ಹೆರಿಗೆ ವಾರ್ಡ್‌ನ ಸಿಬ್ಬಂದಿಗಳು ಹಣ ವಸೂಲಿ ಮಾಡ್ತಿದ್ದಾರೆ ಅಂತಾ ದೂರು ಕೊಟ್ರು. ತಕ್ಷಣ ಡಿಎಸ್ ವಿರುದ್ಧ ಗರಂ ಆಗಿ ಜಿಲ್ಲಾ ಸರ್ಜನ್ ಬಸವರಾಜ್‌ನ ಅಮಾನತು ಮಾಡಿದ್ರು.

ಇದನ್ನೂ ವೀಕ್ಷಿಸಿ: ವಿಶ್ವದಾಖಲೆ ವೀರನಿಗೆ ಜೈಲು ಫಿಕ್ಸ್‌!: ಏನದು ತೋಷಖಾನಾ ಪ್ರಕರಣ..?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!