ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

Published : Aug 06, 2023, 11:38 AM IST

ಚಿತ್ರದುರ್ಗ ಕವಾಡಿಗಾರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಜನರ ಜೀವವನ್ನೇ ಹಿಂಡುತ್ತಿದೆ. ಪ್ರತಿದಿನ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಡೀ ಬಡಾವಣೆಯಲ್ಲಿ ಆತಂಕದ ವಾತಾವಾರಣ ನಿರ್ಮಾಣವಾಗಿದೆ. ಇದರ ನಡುವೆ ಗ್ರಾಮಕ್ಕೆ ಭೇಟಿ ಕೊಟ್ಟ ಆರೋಗ್ಯ ಸಚಿವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ, 10 ಲಕ್ಷ ಪರಿಹಾರದ ಚೆಕ್ ವಿತರಿಸಿದ್ರು.
 

ಚಿತ್ರದುರ್ಗ ಕವಾಡಿಗಾರಹಟ್ಟಿ(Kavadigarahatti) ಬಡಾವಣೆಯಲ್ಲಿ ವಿಷ ಜಲ ಜನರ ಜೀವ ಹಿಂಡುತ್ತಲೇ ಇದೆ. ಕಳೆದ 6 ದಿನಗಳಿಂದ ನೀರು ಕೂಡಿದು ಅಸ್ವಸ್ಥರಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಗ್ರಾಮದಲ್ಲಿ ಆ್ಯಂಬುಲೆನ್ಸ್ ಸೈರನ್ ಕೇಳಿದ್ರೆ ಜನ ಬೆಚ್ಚಿಬೀಳುವಂತಾಗಿದೆ. ವಿಷ ಜಲಕ್ಕೆ ಐವರು ಬಲಿಯಾಗಿದ್ದು ಇಡೀ ಬಡಾವಣೆಯಲ್ಲಿ ನೀರವ ಮೌನ ಆವರಿಸಿದೆ. ಜತೆಗೆ ಅಸ್ವಸ್ಥರ ಸಂಖ್ಯೆ 158ಕ್ಕೆ ಏರಿಕೆಯಾಗಿದ್ದು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕವಾಡಿಗಾರಹಟ್ಟಿ ಗ್ರಾಮಕ್ಕೆ ಆರೋಗ್ಯ ಸಚಿವರು ಬರ್ತಾರೆ ಆಂತಾ ಸುದ್ದಿಬೆನ್ನಲ್ಲೇ ನಗರಸಭೆ ಅಲರ್ಟ್ ಆಗಿತ್ತು. ಗ್ರಾಮವನ್ನ ಶುಚಿಗೊಳಿಸಿದ ಸಿಬ್ಬಂದಿ  ಇಡೀ  ಬಡವಾಣೆಗೆ ಔಷಧಿ ಸಿಂಪಡಿಸಿದ್ರು. ಬಳಿಕ ದಿನೇಶ್ ಗುಂಡೂರಾವ್(Dinesh Gundu Rao) ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರದ ಚೆಕ್(Compensation check) ವಿತರಿಸಿದ್ರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸಂತ್ರಸ್ಥರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ರು. ಈ ವೇಳೆ ಕೆಲ ರೋಗಿಯ ಸಂಬಂಧಿಕರು ಆಸ್ಪತ್ರೆಯಲ್ಲಿ ಎಕ್ಸ್ ರೇ, ಹೆರಿಗೆ ವಾರ್ಡ್‌ನ ಸಿಬ್ಬಂದಿಗಳು ಹಣ ವಸೂಲಿ ಮಾಡ್ತಿದ್ದಾರೆ ಅಂತಾ ದೂರು ಕೊಟ್ರು. ತಕ್ಷಣ ಡಿಎಸ್ ವಿರುದ್ಧ ಗರಂ ಆಗಿ ಜಿಲ್ಲಾ ಸರ್ಜನ್ ಬಸವರಾಜ್‌ನ ಅಮಾನತು ಮಾಡಿದ್ರು.

ಇದನ್ನೂ ವೀಕ್ಷಿಸಿ: ವಿಶ್ವದಾಖಲೆ ವೀರನಿಗೆ ಜೈಲು ಫಿಕ್ಸ್‌!: ಏನದು ತೋಷಖಾನಾ ಪ್ರಕರಣ..?

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ