ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

ಕವಾಡಿಗಾರಹಟ್ಟಿಗೆ ದಿನೇಶ್ ಗುಂಡೂರಾವ್ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಚೆಕ್ ವಿತರಣೆ

Published : Aug 06, 2023, 11:38 AM IST

ಚಿತ್ರದುರ್ಗ ಕವಾಡಿಗಾರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಜನರ ಜೀವವನ್ನೇ ಹಿಂಡುತ್ತಿದೆ. ಪ್ರತಿದಿನ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಡೀ ಬಡಾವಣೆಯಲ್ಲಿ ಆತಂಕದ ವಾತಾವಾರಣ ನಿರ್ಮಾಣವಾಗಿದೆ. ಇದರ ನಡುವೆ ಗ್ರಾಮಕ್ಕೆ ಭೇಟಿ ಕೊಟ್ಟ ಆರೋಗ್ಯ ಸಚಿವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ, 10 ಲಕ್ಷ ಪರಿಹಾರದ ಚೆಕ್ ವಿತರಿಸಿದ್ರು.
 

ಚಿತ್ರದುರ್ಗ ಕವಾಡಿಗಾರಹಟ್ಟಿ(Kavadigarahatti) ಬಡಾವಣೆಯಲ್ಲಿ ವಿಷ ಜಲ ಜನರ ಜೀವ ಹಿಂಡುತ್ತಲೇ ಇದೆ. ಕಳೆದ 6 ದಿನಗಳಿಂದ ನೀರು ಕೂಡಿದು ಅಸ್ವಸ್ಥರಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಗ್ರಾಮದಲ್ಲಿ ಆ್ಯಂಬುಲೆನ್ಸ್ ಸೈರನ್ ಕೇಳಿದ್ರೆ ಜನ ಬೆಚ್ಚಿಬೀಳುವಂತಾಗಿದೆ. ವಿಷ ಜಲಕ್ಕೆ ಐವರು ಬಲಿಯಾಗಿದ್ದು ಇಡೀ ಬಡಾವಣೆಯಲ್ಲಿ ನೀರವ ಮೌನ ಆವರಿಸಿದೆ. ಜತೆಗೆ ಅಸ್ವಸ್ಥರ ಸಂಖ್ಯೆ 158ಕ್ಕೆ ಏರಿಕೆಯಾಗಿದ್ದು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕವಾಡಿಗಾರಹಟ್ಟಿ ಗ್ರಾಮಕ್ಕೆ ಆರೋಗ್ಯ ಸಚಿವರು ಬರ್ತಾರೆ ಆಂತಾ ಸುದ್ದಿಬೆನ್ನಲ್ಲೇ ನಗರಸಭೆ ಅಲರ್ಟ್ ಆಗಿತ್ತು. ಗ್ರಾಮವನ್ನ ಶುಚಿಗೊಳಿಸಿದ ಸಿಬ್ಬಂದಿ  ಇಡೀ  ಬಡವಾಣೆಗೆ ಔಷಧಿ ಸಿಂಪಡಿಸಿದ್ರು. ಬಳಿಕ ದಿನೇಶ್ ಗುಂಡೂರಾವ್(Dinesh Gundu Rao) ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರದ ಚೆಕ್(Compensation check) ವಿತರಿಸಿದ್ರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವರು ಸಂತ್ರಸ್ಥರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ರು. ಈ ವೇಳೆ ಕೆಲ ರೋಗಿಯ ಸಂಬಂಧಿಕರು ಆಸ್ಪತ್ರೆಯಲ್ಲಿ ಎಕ್ಸ್ ರೇ, ಹೆರಿಗೆ ವಾರ್ಡ್‌ನ ಸಿಬ್ಬಂದಿಗಳು ಹಣ ವಸೂಲಿ ಮಾಡ್ತಿದ್ದಾರೆ ಅಂತಾ ದೂರು ಕೊಟ್ರು. ತಕ್ಷಣ ಡಿಎಸ್ ವಿರುದ್ಧ ಗರಂ ಆಗಿ ಜಿಲ್ಲಾ ಸರ್ಜನ್ ಬಸವರಾಜ್‌ನ ಅಮಾನತು ಮಾಡಿದ್ರು.

ಇದನ್ನೂ ವೀಕ್ಷಿಸಿ: ವಿಶ್ವದಾಖಲೆ ವೀರನಿಗೆ ಜೈಲು ಫಿಕ್ಸ್‌!: ಏನದು ತೋಷಖಾನಾ ಪ್ರಕರಣ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!