ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ದೆವ್ವ-ಭೂತ!  ಪೊಲೀಸರ ಮೊರೆ ಹೋದ ಜನ!

ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ದೆವ್ವ-ಭೂತ! ಪೊಲೀಸರ ಮೊರೆ ಹೋದ ಜನ!

Published : Dec 04, 2024, 11:54 PM IST

ಬೆಳಗಾವಿ ತಾಲೂಕಿನ ತುಮರಗುದ್ದಿಯಲ್ಲಿ ಎಡಿಟ್ ಮಾಡಿದ ಫೋಟೋವನ್ನು ಬಳಸಿ ದೆವ್ವ ಇದೆ ಎಂಬ ವದಂತಿ ಹಬ್ಬಿಸಲಾಗಿದೆ. ಈ ವೈರಲ್ ಫೋಟೋದಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಬೆಳಗಾವಿ ತಾಲೂಕಿನ ತುಮರಗುದ್ದಿಯಲ್ಲಿ ಆತಂಕದ  ದೆವ್ವ ಭೂತ. ಎಡಿಟೆಡ್ ಫೋಟೋ ಬಳಸಿ ಊರಲ್ಲಿ ದೆವ್ವ ಇದೆ ಎಂದು ವೈರಲ್ ಮಾಡಲಾಗಿದೆ. ತುಮರಗುದ್ದಿ - ಮಾರಿಹಾಳ ರಸ್ತೆಯ ದೃಶ್ಯ ಎಂದು ಎಡಿಟೆಡ್ ಫೋಟೋ, ವಿಡಿಯೋ ವೈರಲ್ ಫೋಟೋ, ವಿಡಿಯೋ ವೈರಲ್ ಬೆನ್ನಲ್ಲೇ ಗ್ರಾಮದ ಮಹಿಳೆಯರು, ಮಕ್ಕಳಲ್ಲಿ ಆತಂಕ ರಾತ್ರಿಯಾದರೆ ಈ ರಸ್ತೆಯಲ್ಲಿ ಓಡಾಡಲು ಅನ್ಯ ಊರಿನ ಜನ  ಹಿಂದೇಟು ಹಾಕುತ್ತಿದ್ದಾರೆ. ಬೇರೆ ಊರಿಗೆ  ಕೆಲಸಕ್ಕೆ ಹೋಗುವ ಜನ ಬೇಗ ಬೇಗ ಮನೆ ಸೇರುತ್ತಿದ್ದಾರೆ. ಈ ರಸ್ತೆಯಲ್ಲಿರುವ ಮನೆಗಳಿಗೆ ಸಂಜೆ ಆಗ್ತಿದ್ದಂತೆ ನಿವಾಸಿಗಳು ಬೀಗ ಜಡಿದು ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡುತ್ತಿದ್ದಾರೆ.

ವಾಟ್ಸಪ್ ಸ್ಟೇಟಸ್, ಫೆಸ್ಬುಕ್‌ಗಳಲ್ಲಿ ವೈರಲ್ ಆಗ್ತಿರುವ ಫೋಟೊ ಕಂಡು ಬೆಚ್ಚಿ ಬಿದ್ದಿರುವ ಜನ. ನೆರೆಯ ಊರುಗಳಿಗೂ ದೆವ್ವ ಇದೆ ಎಂಬ ವಿಷಯ ಮುಟ್ಟಿದೆ. ಗ್ರಾಮಸ್ಥರಿಗೆ ಫೋನ್ ಮಾಡಿ ದೆವ್ವ ಇದೆಯೇ ಎಂದು ನೆರೆಯ ಗ್ರಾಮಗಳ ಜನ ತಲೆ ತಿನ್ನುತ್ತಿದ್ದಾರೆ.  ಫೇಕ್ ಫೋಟೋ ವೈರಲ್ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈಯಲ್ಲಿ ಮಶಾಲ್ ಹಿಡಿದು ಅದೇ ರಸ್ತೆಯಲ್ಲಿ ಓಡಾಡಿ ಜನರ ಆತಂಕ ದೂರ ಮಾಡಲು ಯತ್ನಿಸಲಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಫೋಟೋ‌ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಸಿಇಎನ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಿಸಿ ಕ್ರಮಕ್ಕೆ ಒತ್ತಾಯಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಗೆ ಊರಿನ ಮುಖಂಡರು ಮೌಖಿಕವಾಗಿ ದೂರು ನೀಡಿದ್ದಾರೆ.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more