ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!

ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!

Published : Dec 17, 2025, 04:57 PM IST

ಪ್ರೇಮಿಗಳಿಗೆ ಸಹಾಯ ಮಾಡಲು ಹೋದ ಇಬ್ಬರು ಸ್ನೇಹಿತರನ್ನು ಹತ್ಯೆ ಮಾಡಲಾಗಿದೆ. ಮನೆಯವರ ವಿರೋಧದ ನಡುವೆ ಮದುವೆಯಾದ ಜೋಡಿಗೆ ರಕ್ಷಣೆ ನೀಡಲು ಮುಂದಾದ ಕಿರಣ್ ಮತ್ತು ಮಂಜುನಾಥ್, ಯುವತಿಯ ಅಣ್ಣನ ಗ್ಯಾಂಗ್‌ನಿಂದ ಕೊಲೆಯಾಗಿದ್ದಾರೆ.

ಬೆಂಗಳೂರು (ಡಿ.17): 'ನಾವಿದ್ದೇವೆ ಬಾ ಗೆಳೆಯ' ಎಂದು ಪ್ರೇಮಿಗಳ ರಕ್ಷಣೆಗೆ ನಿಂತ ಇಬ್ಬರು ಸ್ನೇಹಿತರು, ಇಂದು ಕ್ರೂರ ಹಂತಕರ ಮಚ್ಚಿಗೆ ಬಲಿಯಾಗಿ ಹೆಣವಾಗಿ ಬಿದ್ದಿದ್ದಾರೆ. ಯಾರದ್ದೋ ಪ್ರೇಮ ಪುರಾಣಕ್ಕೆ ಇನ್ನಾರೋ ಬಲಿಯಾದ ಈ ಭೀಕರ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಪ್ರೇಮಿಗಳನ್ನು ರಕ್ಷಿಸಲು ಹೋದ ಕಿರಣ್ ಮತ್ತು ಮಂಜುನಾಥ್ ಎಂಬುವವರೇ ಕೊಲೆಯಾದ ದುರ್ದೈವಿಗಳು.

ಘಟನೆಯ ಹಿನ್ನೆಲೆ

ಒಂದೇ ಏರಿಯಾದ ಯುವಕ ಮತ್ತು ಯುವತಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಮನೆಯವರ ವಿರೋಧದ ನಡುವೆಯೂ ಈ ಜೋಡಿ ಮದುವೆಯಾಗಿ ಊರು ಬಿಟ್ಟು ಪರಾರಿಯಾಗಿತ್ತು. ಎರಡು ದಿನಗಳ ಕಾಲ ದೂರದ ಊರಿನಲ್ಲಿದ್ದ ಪ್ರೇಮಿಗಳಿಗೆ ಧೈರ್ಯ ತುಂಬಿದ ಹುಡುಗನ ಸ್ನೇಹಿತರು, 'ಭಯಪಡಬೇಡಿ, ನಾವು ನಿಮ್ಮ ಜೊತೆಗಿದ್ದೇವೆ. ಪೊಲೀಸ್ ಠಾಣೆಗೆ ಹೋಗಿ ರಕ್ಷಣೆ ಪಡೆಯೋಣ' ಎಂದು ಕರೆಸಿಕೊಂಡಿದ್ದರು.

ಠಾಣೆಯ ಮುಂದೆ ಶುರುವಾದ ಕಿಡಿ

ಪೊಲೀಸ್ ಠಾಣೆಯಲ್ಲಿ ಪ್ರೇಮಿಗಳ ರಾಜೀ ಸಂಧಾನ ನಡೆಯುತ್ತಿದ್ದಾಗ, ಹುಡುಗನ ಸ್ನೇಹಿತರಾದ ಸುರೇಶ ಮತ್ತು ಕಿರಣ್ ಹೊರಗೆ ಕಾಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಹುಡುಗಿಯ ಅಣ್ಣ ಮತ್ತು ಆತನ ತಂಡ, ಈ ಪ್ರೇಮಿಗಳು ಓಡಿಹೋಗಲು ಸುರೇಶನೇ ಮುಖ್ಯ ಕಾರಣ ಎಂದು ಭಾವಿಸಿ ಆವಾಜ್ ಹಾಕಿದ್ದರು. ಅಲ್ಲಿ ಶುರುವಾದ ಜಗಳ ಸಂಜೆ ವೇಳೆಗೆ ರಕ್ತಪಾತಕ್ಕೆ ತಿರುಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಸಿನಿಮಾ ಶೈಲಿಯ ಅಟ್ಯಾಕ್ 

ರಾತ್ರಿ ವೇಳೆ ಸುರೇಶ ಮತ್ತು ಕಿರಣ್ ತಮ್ಮ ಏರಿಯಾದಲ್ಲಿ ಕುಳಿತು ಮಾತನಾಡುತ್ತಿದ್ದಾಗ, ಮಾರಕಾಸ್ತ್ರಗಳೊಂದಿಗೆ ನುಗ್ಗಿದ ಹುಡುಗಿಯ ಅಣ್ಣನ ಗ್ಯಾಂಗ್ ಏಕಾಏಕಿ ದಾಳಿ ನಡೆಸಿದೆ. ಟಾರ್ಗೆಟ್ ಆಗಿದ್ದ ಸುರೇಶ ಹೇಗೋ ತಪ್ಪಿಸಿಕೊಂಡು ಓಡಿ ಬಚಾವ್ ಆಗಿದ್ದಾನೆ. ಆದರೆ, ಹಂತಕರ ಕೈಗೆ ಸಿಕ್ಕ ಕಿರಣ್ ಮೇಲೆ ಮಚ್ಚಿನಿಂದ ಮನಬಂದಂತೆ ಇರಿಯಲಾಗಿದೆ. ಇದೇ ವೇಳೆ ಗಲಾಟೆ ಬಿಡಿಸಲು ಬಂದ ಸಂಬಂಧಿಕ ಮಂಜುನಾಥ್ (ಮಂಜಣ್ಣ) ಮೇಲೂ ಹಂತಕರು ಅಟ್ಯಾಕ್ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಕಿರಣ್ ಮತ್ತು ಮಂಜುನಾಥ್ ಇಬ್ಬರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಪರಾರಿಯಾದ ಹಂತಕರು 

ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಂದ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಲು ಹೋದ ಅಮಾಯಕರು ಇಂದು ಮಸಣ ಸೇರುವಂತಾಗಿದೆ. 'ಗೆಳೆಯನ ಸಂಸಾರ ಉಳಿಸಲು ಹೋದವರು ತಮ್ಮ ಸಂಸಾರವನ್ನೇ ಬೀದಿಗೆ ತಂದಿದ್ದಾರೆ' ಎಂದು ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more