ಮದುವೆ ಸಂದರ್ಭದಲ್ಲಿ ಆದರ್ಶ ಮೆರೆದಿದ್ದ ಪೊಲೀಸಪ್ಪ: ಬಳಿಕ ಶುರುವಾಯ್ತು ವರದಕ್ಷಿಣೆ ಕಾಟ !

ಮದುವೆ ಸಂದರ್ಭದಲ್ಲಿ ಆದರ್ಶ ಮೆರೆದಿದ್ದ ಪೊಲೀಸಪ್ಪ: ಬಳಿಕ ಶುರುವಾಯ್ತು ವರದಕ್ಷಿಣೆ ಕಾಟ !

Published : Sep 02, 2023, 11:19 AM IST

ಆತ ಸಾರ್ವಜನಿಕ ರಕ್ಷಣೆಯ ಜವಬ್ದಾರಿ ಹೊತ್ತ ಪೊಲೀಸ್‌ ಇಲಾಖೆಯ ನೌಕರ. ಬ್ರೈನ್‌ ಟ್ಯೂಮರ್‌ ಕಾಯಿಲೆಗೆ ತುತ್ತಾದ ಯುವತಿಗೆ ಮದುವೆಯಾಗುವ ಮೂಲಕ ಜೀವನಕೊಟ್ಟು ಎಲ್ಲರ ಕಣ್ಣಲ್ಲಿ ಹೀರೋ ಆಗಿದ್ದ. ಆದರೆ ದಿನ ಕಳೆದಂತೆ ತನ್ನ ವರಸೆ ಬದಲಿಸಿ ವಿಲನ್ ಆಗಿದ್ದಾನೆ. ವರದಕ್ಷಿಣೆ ತರುವಂತೆ ಅನಾರೋಗ್ಯ ಪೀಡಿತ ಹೆಂಡತಿಗೆ ಕಿರುಕುಳು ನೀಡುತ್ತಿದ್ದು, ಟಾರ್ಚರ್ ತಾಳಲಾರದೇ ಆಕೆ ಎಸ್ಪಿ ಕಚೇರಿ ಮೆಟ್ಟಿಲೇರಿದ್ದಾಳೆ.

ನ್ಯಾಯಕ್ಕಾಗಿ ತುಮಕೂರು ಎಸ್ಪಿ ಕಚೇರಿ ಬಳಿ ನಿಂತಿರುವ ಈಕೆಯ ಹೆಸರು ಸಹನಾ. ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ನಿವಾಸಿಗಳಾದ ಜಯಕುಮಾರ್‌-ರುಕ್ಮಿಣಿ ದಂಪತಿಯ ಪುತ್ರಿ. ಡಿಪ್ಲೋಮ ಓದಿರುವ ಈಕೆಗೆ ಒಂದು ವರ್ಷದ ಹಿಂದೆ ಕುಟುಂಬದ  ಸಂಬಂಧಿ ತುಮಕೂರು(Tumakur)ನಗರ ಠಾಣೆಯ ಕಾನ್ಸ್‌ಸ್ಟೇಬಲ್ ಸುನಿಲ್‌ ಕುಮಾರ್‌ ಎಂಬಾತನೊಂದಿಗೆ ವಿವಾಹವಾಗಿದೆ. ಮದುವೆ ಇನ್ನೆರಡು ದಿನ ಇದೆ ಅನ್ನೋ ಸಂದರ್ಭದಲ್ಲಿ ಸಹನಾಳಿಗೆ ತಲೆನೋವು ಕಾಣಿಸಿಕೊಂಡಿತ್ತು. ಮನೆಯವರು ಈಕೆಗೆ ಎಂಆರ್‌ಐ ಸ್ಕ್ಯಾನ್‌ ಮಾಡಿಸಿದಾಗ ಬ್ರೈನ್‌ ಟ್ಯೂಮರ್‌(Brain tumor) ಇರೋದು ಗೊತ್ತಾಗಿದೆ.  ಸಹನ ಬದುಕುವುದು ಒಂದು ತಿಂಗಳು ಮಾತ್ರ  ಅಂತ ವೈದ್ಯರು ತಿಳಿಸಿದ್ದಾರೆ. ಆಗ ಸಹನಾ ಪೋಷಕರು ಮಗಳಿಗೆ ಮದುವೆ ಮಾಡೋದೇ ಬೇಡ ಅನ್ನೋ ನಿರ್ಧಾರಕ್ಕೆ ಬಂದಿದ್ರು. ಆದ್ರೆ ಹಠ ಬಿಡದ ಸುನೀಲ್‌ ನಾನು ಈಕೆಯನ್ನೇ ಮದುವೆಯಾಗುತ್ತೇನೆಂದು ಹೇಳಿ ಆದರ್ಶ ಮರೆದಿದ್ದ. ಪ್ರಾರಂಭದಲ್ಲಿ ಹೆಂಡತಿಯನ್ನು ಚೆನ್ನಾಗಿಯೇ ನೋಡಿಕೊಂಡಿದ್ದ. ಆದ್ರೆ, ಮದುವೆ ನಡೆದು ಒಂದು ವರ್ಷವಾದ ಬಳಿಕ ಅಸಲಿ ಆಟ ಶುರುಮಾಡಿದ್ದಾನಂತೆ. ವರದಕ್ಷಿಣೆ (Dowry harassment) ತರುವಂತೆ ಲಾಠಿ ಹಾಗೂ ಬೂಟಿನಿಂದ ಸಹನಾಗೆ ಮನ ಬಂದಂತೆ ಥಳಿಸಿ ಹಿಂಸೆ ನೀಡುತ್ತಿದ್ದಾನಂತೆ. 

ಇದನ್ನೂ ವೀಕ್ಷಿಸಿ:  KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more