ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

Published : Aug 12, 2022, 02:52 PM IST

ಪತಿ ತನ್ನನ್ನು ಅಸಭ್ಯವಾಗಿ ನಡೆಸಿಕೊಂಡಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ಸ್‌ ಸೇವಿಸಿ ಆಕೆಯ ತಲೆಯ ಮೇಲೆ ಮೂತ್ರ ವಿಸರ್ಜನೆಯನ್ನೂ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 

ಬೆಂಗಳೂರು (ಆ.12): ಆಘಾತಕಾರಿ ಘಟನೆಯೊಂದರಲ್ಲಿ, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮಾದಕದ್ರವ್ಯದ ಅಮಲಿನಲ್ಲಿ ತನ್ನ ಹೆಂಡತಿಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆರೋಪಿ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಸಂದೀಪ್ ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿಯ ಪತ್ನಿ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ತೆಲಂಗಾಣದ ಪ್ರಸಿದ್ಧ ಗಾರ್ಮೆಂಟ್ಸ್‌ ಕಂಪನಿಯ ಮಾಲೀಕರ ಮಗಳಾದ ಮಹಿಳೆ ಕಳೆದ ಜನವರಿಯಲ್ಲಿ ಸಂದೀಪ್ ಅವರನ್ನು ವಿವಾಹವಾಗಿದ್ದರು. ಹೈದರಾಬಾದ್‌ನ ರಾಮೋಜಿ ರಾವ್‌ ಫಿಲ್ಮ್‌ ಸಿಟಿಯಲ್ಲಿ ಅದ್ದೂರಿಯಾಗಿ ವಿವಾಹ ನಡೆದಿತ್ತು. ವರದಕ್ಷಿಣೆ ರೂಪದಲ್ಲಿ 4 ಕೆಜಿ ಚಿನ್ನ ಹಾಗೂ ಕೂಪರ್‌ ಕಾರ್‌ಅನ್ನು ನೀಡಲಾಗಿತ್ತು. ಅದಲ್ಲದೆ, ತೆಲಂಗಾಣದಲ್ಲಿ ಎರಡು ಬಟ್ಟೆ ಮಳಿಗೆಯನ್ನೂ ಆರೋಪಿಗೆ ನೀಡಲಾಗಿತ್ತು ಎಂದು ತಿಳಿಸಲಾಗಿದೆ.

Crime News: ವರದಕ್ಷಿಣೆಗಾಗಿ ಸೊಸೆಯನ್ನು ವಿದ್ಯುತ್‌ ತಂತಿಗೆ ಕಟ್ಟಿ ಕೊಂದ ಅತ್ತೆ-ಮಾವ

ಮದುವೆಗಾಗಿ ಮಹಿಳೆಯ ಪಾಲಕರು 6 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಆರೋಪಿ ಮಾದಕ ವ್ಯಸನಿ ಎಂಬುದು ಪತ್ತೆಯಾಗಿದೆ. ಮನೆಯಲ್ಲಿ, ಅವರು ತಮ್ಮ ಸಹಚರರೊಂದಿಗೆ ಪಾರ್ಟಿಯನ್ನು ಕೂಡ ಮಾಡಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಸ್ನೇಹಿತರನ್ನು ಮನೆಗೆ ಕರೆದಿದ್ದನ್ನು ವಿರೋಧಿಸಿದರೆ, ಆರೋಪಿಯು ತನ್ನ ಸಹಚರರ ಮುಂದೆ ಅವಳನ್ನು ಥಳಿಸಿದ ಎಂದು ವರದಿಯಾಗಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more