ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

Published : Aug 12, 2022, 02:52 PM IST

ಪತಿ ತನ್ನನ್ನು ಅಸಭ್ಯವಾಗಿ ನಡೆಸಿಕೊಂಡಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ಸ್‌ ಸೇವಿಸಿ ಆಕೆಯ ತಲೆಯ ಮೇಲೆ ಮೂತ್ರ ವಿಸರ್ಜನೆಯನ್ನೂ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 

ಬೆಂಗಳೂರು (ಆ.12): ಆಘಾತಕಾರಿ ಘಟನೆಯೊಂದರಲ್ಲಿ, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮಾದಕದ್ರವ್ಯದ ಅಮಲಿನಲ್ಲಿ ತನ್ನ ಹೆಂಡತಿಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆರೋಪಿ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಸಂದೀಪ್ ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿಯ ಪತ್ನಿ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ತೆಲಂಗಾಣದ ಪ್ರಸಿದ್ಧ ಗಾರ್ಮೆಂಟ್ಸ್‌ ಕಂಪನಿಯ ಮಾಲೀಕರ ಮಗಳಾದ ಮಹಿಳೆ ಕಳೆದ ಜನವರಿಯಲ್ಲಿ ಸಂದೀಪ್ ಅವರನ್ನು ವಿವಾಹವಾಗಿದ್ದರು. ಹೈದರಾಬಾದ್‌ನ ರಾಮೋಜಿ ರಾವ್‌ ಫಿಲ್ಮ್‌ ಸಿಟಿಯಲ್ಲಿ ಅದ್ದೂರಿಯಾಗಿ ವಿವಾಹ ನಡೆದಿತ್ತು. ವರದಕ್ಷಿಣೆ ರೂಪದಲ್ಲಿ 4 ಕೆಜಿ ಚಿನ್ನ ಹಾಗೂ ಕೂಪರ್‌ ಕಾರ್‌ಅನ್ನು ನೀಡಲಾಗಿತ್ತು. ಅದಲ್ಲದೆ, ತೆಲಂಗಾಣದಲ್ಲಿ ಎರಡು ಬಟ್ಟೆ ಮಳಿಗೆಯನ್ನೂ ಆರೋಪಿಗೆ ನೀಡಲಾಗಿತ್ತು ಎಂದು ತಿಳಿಸಲಾಗಿದೆ.

Crime News: ವರದಕ್ಷಿಣೆಗಾಗಿ ಸೊಸೆಯನ್ನು ವಿದ್ಯುತ್‌ ತಂತಿಗೆ ಕಟ್ಟಿ ಕೊಂದ ಅತ್ತೆ-ಮಾವ

ಮದುವೆಗಾಗಿ ಮಹಿಳೆಯ ಪಾಲಕರು 6 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಆರೋಪಿ ಮಾದಕ ವ್ಯಸನಿ ಎಂಬುದು ಪತ್ತೆಯಾಗಿದೆ. ಮನೆಯಲ್ಲಿ, ಅವರು ತಮ್ಮ ಸಹಚರರೊಂದಿಗೆ ಪಾರ್ಟಿಯನ್ನು ಕೂಡ ಮಾಡಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಸ್ನೇಹಿತರನ್ನು ಮನೆಗೆ ಕರೆದಿದ್ದನ್ನು ವಿರೋಧಿಸಿದರೆ, ಆರೋಪಿಯು ತನ್ನ ಸಹಚರರ ಮುಂದೆ ಅವಳನ್ನು ಥಳಿಸಿದ ಎಂದು ವರದಿಯಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more