ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

ವರದಕ್ಷಿಣೆಗಾಗಿ ವಿಕೃತಿ, ಪತ್ನಿಯ ತಲೆಮೇಲೆ ಮೂತ್ರ ವಿಸರ್ಜಿಸಿ ಕಿರುಕುಳ!

Published : Aug 12, 2022, 02:52 PM IST

ಪತಿ ತನ್ನನ್ನು ಅಸಭ್ಯವಾಗಿ ನಡೆಸಿಕೊಂಡಿದ್ದಾನೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ಸ್‌ ಸೇವಿಸಿ ಆಕೆಯ ತಲೆಯ ಮೇಲೆ ಮೂತ್ರ ವಿಸರ್ಜನೆಯನ್ನೂ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
 

ಬೆಂಗಳೂರು (ಆ.12): ಆಘಾತಕಾರಿ ಘಟನೆಯೊಂದರಲ್ಲಿ, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮಾದಕದ್ರವ್ಯದ ಅಮಲಿನಲ್ಲಿ ತನ್ನ ಹೆಂಡತಿಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆರೋಪಿ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿಯನ್ನು ಸಂದೀಪ್ ಎಂದು ಪೊಲೀಸರು ಗುರುತಿಸಿದ್ದಾರೆ.

ಆರೋಪಿಯ ಪತ್ನಿ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ತೆಲಂಗಾಣದ ಪ್ರಸಿದ್ಧ ಗಾರ್ಮೆಂಟ್ಸ್‌ ಕಂಪನಿಯ ಮಾಲೀಕರ ಮಗಳಾದ ಮಹಿಳೆ ಕಳೆದ ಜನವರಿಯಲ್ಲಿ ಸಂದೀಪ್ ಅವರನ್ನು ವಿವಾಹವಾಗಿದ್ದರು. ಹೈದರಾಬಾದ್‌ನ ರಾಮೋಜಿ ರಾವ್‌ ಫಿಲ್ಮ್‌ ಸಿಟಿಯಲ್ಲಿ ಅದ್ದೂರಿಯಾಗಿ ವಿವಾಹ ನಡೆದಿತ್ತು. ವರದಕ್ಷಿಣೆ ರೂಪದಲ್ಲಿ 4 ಕೆಜಿ ಚಿನ್ನ ಹಾಗೂ ಕೂಪರ್‌ ಕಾರ್‌ಅನ್ನು ನೀಡಲಾಗಿತ್ತು. ಅದಲ್ಲದೆ, ತೆಲಂಗಾಣದಲ್ಲಿ ಎರಡು ಬಟ್ಟೆ ಮಳಿಗೆಯನ್ನೂ ಆರೋಪಿಗೆ ನೀಡಲಾಗಿತ್ತು ಎಂದು ತಿಳಿಸಲಾಗಿದೆ.

Crime News: ವರದಕ್ಷಿಣೆಗಾಗಿ ಸೊಸೆಯನ್ನು ವಿದ್ಯುತ್‌ ತಂತಿಗೆ ಕಟ್ಟಿ ಕೊಂದ ಅತ್ತೆ-ಮಾವ

ಮದುವೆಗಾಗಿ ಮಹಿಳೆಯ ಪಾಲಕರು 6 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಆರೋಪಿ ಮಾದಕ ವ್ಯಸನಿ ಎಂಬುದು ಪತ್ತೆಯಾಗಿದೆ. ಮನೆಯಲ್ಲಿ, ಅವರು ತಮ್ಮ ಸಹಚರರೊಂದಿಗೆ ಪಾರ್ಟಿಯನ್ನು ಕೂಡ ಮಾಡಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಸ್ನೇಹಿತರನ್ನು ಮನೆಗೆ ಕರೆದಿದ್ದನ್ನು ವಿರೋಧಿಸಿದರೆ, ಆರೋಪಿಯು ತನ್ನ ಸಹಚರರ ಮುಂದೆ ಅವಳನ್ನು ಥಳಿಸಿದ ಎಂದು ವರದಿಯಾಗಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more