ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್​​: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!

ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್​​: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!

Published : Jan 12, 2025, 12:29 PM IST

ಸೋಮಶೇಖರ್​ ಹಾಗೂ ಅರ್ಚಿತಾ ಅಕ್ರಮ ಸಂಬಂಧದ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಸದ್ಯ ಅರ್ಚಿತಾ ಹಾಗೂ ಸೋಮಶೇಖರ್​ನನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹಾಸನ(ಜ.12): ಇದು ಹಾಸನದ ಸ್ಟೋರಿ. ಆತ ತಾನಾಯ್ತು ತನ್ನ ಸಂಸಾರವಾಯ್ತು ಅಂತಾ ಬದುಕುತ್ತಿದ್ದ. ಆದ್ರೆ ತನ್ನ ಅಣ್ಣನಿಗೆ ತೋರಿದ ಪ್ರೀತಿ, ಕಾಳಜಿಯೇ ಆತನ ಬದುಕಿಗೆ ಮುಳುವಾಗಿದೆ. ನಾದಿನಿ ಮೇಲೆ ಮೇಲೆ ಕಣ್ಣು ಹಾಕಿದ ಕಿರಾತಕ ಅಣ್ಣ ತನ್ನ ತಮ್ಮನ ಹೆಣ ಬೀಳಿಸಿದ್ದಾನೆ. 

ಗುರುತೇ ಸಿಗದ ರೀತಿಯಲ್ಲಿ ನೀರಲ್ಲಿ ಶವವಾಗಿ ಪತ್ತೆಯಾದ ಈತನ ಹೆಸರು ಆನಂದ್​.. ಹಾಸನದ ಮುಕುಂದೂರು ಹೊಸಳ್ಳಿ ಗ್ರಾಮದವನು. 10 ವರ್ಷಗಳ ಹಿಂದೆ ಅರ್ಚಿತಾ ಎಂಬಾಕೆ ಜತೆ ಮದುವೆಯಾಗಿತ್ತು. ಕೂಲಿ ಕೆಲಸ ಮಾಡ್ತಿದ್ರೂ ತನ್ನ ಹೆಂಡತಿಯನ್ನ ಚೆನ್ನಾಗಿ ನೋಡಿಕೊಳ್ತಿದ್ದ. ಈ ಸುಂದರ ದಾಂಪತ್ಯಕ್ಕೆ ಕೊಳ್ಳಿ ಇಟ್ಟಿದ್ದು ಇವನ ಸೋದರ ಸಂಬಂಧಿ ಸೋಮಶೇಖರ್​. 

Deadly Danger: ಮಂಗನಂತೆ ಜಿಗಿಯಲು ಹೋಗಿ ಮೂಳೆ ಮುರಿದುಕೊಂಡ ಭೂಪ!

ಮೂರು ವರ್ಷಗಳ ಹಿಂದೆ ಸೋಮಶೇಖರ್​ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದಳು. ಹೀಗಾಗಿ ಊಟ, ತಿಂಡಿಗೆ ನಮ್ಮಮನೆಗೆ ಬರುವಂತೆ ಆನಂದ ಹೇಳಿದ್ದ. ಆದ್ರೆ ಊಟ, ತಿಂಡಿಗೆ ಕರೆದು ಉಪಚಾರ ಮಾಡಿದ್ದ ಆನಂದನ ಹೆಂಡತಿ ಮೇಲೆಯೇ ಕಿರಾತಕ ಸೋಮಶೇಖರ ಕಣ್ಣು ಹಾಕಿದ್ದ. ಆನಂದನ ಪತ್ನಿ ಅರ್ಚಿತಾ ಜತೆಗೆ ಅನೈತಿಕ ಸಂಬಂಧವನ್ನೂ ಬೆಳೆಸಿದ್ದ. ಈ ವಿಷಯ ಗೊತ್ತಾಗಿ ಆನಂದ, ಪತ್ನಿಗೆ ಬುದ್ಧಿಮಾತು ಹೇಳಿದ್ದ. ಆದ್ರೆ ಪತ್ನಿ ಅರ್ಚಿತಾ ಬುದ್ಧಿಮಾತಿಗೆ ಬಗ್ಗುವ ಮನಸ್ಥಿತಿಯಲ್ಲಿರಲಿಲ್ಲ. ಬದಲಿಗೆ ಸಂಬಂಧದಲ್ಲಿ ಬಾವನಾದ ಸೋಮಶೇಖರನ ಜತೆಗೂಡಿ ಗಂಡನ ಕಥೆ ಮುಗಿಸಲು ಸ್ಕೆಚ್​ ರೆಡಿ ಮಾಡಿದ್ದಳು. 

ಪುರಾತನ ಸಿಟಿಯಲ್ಲಿ ಹಬ್ಬದ ಸಂಭ್ರಮ: 144 ವರ್ಷಗಳ ಬಳಿಕ ಮಹಾಕುಂಭಕ್ಕೆ ಸಜ್ಜಾದ

ಡಿ.26 ಆನಂದನಿಗೆ ಕರೆ ಮಾಡಿದ್ದ ಸೋಮಶೇಖರ ಹೇಮಾವತಿ ನಾಲೆಯ ದಡದಲ್ಲಿ ಆನಂದನಿಗೆ ಕಂಠಪೂರ್ತಿ ಕುಡಿಸಿ, ಆನಂದನನ್ನು ನಾಲೆಗೆ ತಳ್ಳಿ ಮನೆಗೆ ತೆರಳಿದ್ದ. ಆನಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಲು ಸೋಮಶೇಖರ ಪ್ಲಾನ್​ ಮಾಡಿದ್ದ. ಇತ್ತ ಆನಂದನ ಪತ್ನಿ ಅರ್ಚಿತಾ ತನಗೇನೂ ಗೊತ್ತೆ ಇಲ್ಲ ಎನ್ನುವಂತೆ ಪೊಲೀಸರಿಗೆ ಮಿಸ್ಸಿಂಗ್​ ಕಂಪ್ಲೇಂಟ್​ ನೀಡಿದ್ದಳು. ಸೋಮಶೇಖರ ಕೂಡ ಆನಂದನನ್ನ ಹುಡುಕುತ್ತಿರುವಂತೆ ನಾಟಕವಾಡಿದ್ದ. ಡಿ.28ರಂದು ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೆವು ಗ್ರಾಮದ ಕೆರೆಯಲ್ಲಿ ಆನಂದನ ಮೃತದೇಹ ಪತ್ತೆಯಾಗಿತ್ತು. 

ಸೋಮಶೇಖರ್​ ಹಾಗೂ ಅರ್ಚಿತಾ ಅಕ್ರಮ ಸಂಬಂಧದ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಸದ್ಯ ಅರ್ಚಿತಾ ಹಾಗೂ ಸೋಮಶೇಖರ್​ನನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಕಾಮದಾಸೆಗೆ ಅಕ್ಕರೆ ತೋರಿ ಅನ್ನ ಹಾಕಿದ ತಮ್ಮನನ್ನೇ ಕೊಂದು ಮುಗಿಸಿದ ಪಾಪಿ ಅಣ್ಣನಿಗೆ ಯಾವ ಶಿಕ್ಷೆ ನೀಡಿದರೂ ಕಡಿಮೆಯೇ. 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more