ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್​​: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!

ಬಾವನ ಜತೆ ಲವ್ವಿ ಡವ್ವಿ, ಗಂಡನ ಹತ್ಯೆಗೆ ಪತ್ನಿ ಸ್ಕೆಚ್​​: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಬಿತ್ತು ಹೆಣ!

Published : Jan 12, 2025, 12:29 PM IST

ಸೋಮಶೇಖರ್​ ಹಾಗೂ ಅರ್ಚಿತಾ ಅಕ್ರಮ ಸಂಬಂಧದ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಸದ್ಯ ಅರ್ಚಿತಾ ಹಾಗೂ ಸೋಮಶೇಖರ್​ನನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹಾಸನ(ಜ.12): ಇದು ಹಾಸನದ ಸ್ಟೋರಿ. ಆತ ತಾನಾಯ್ತು ತನ್ನ ಸಂಸಾರವಾಯ್ತು ಅಂತಾ ಬದುಕುತ್ತಿದ್ದ. ಆದ್ರೆ ತನ್ನ ಅಣ್ಣನಿಗೆ ತೋರಿದ ಪ್ರೀತಿ, ಕಾಳಜಿಯೇ ಆತನ ಬದುಕಿಗೆ ಮುಳುವಾಗಿದೆ. ನಾದಿನಿ ಮೇಲೆ ಮೇಲೆ ಕಣ್ಣು ಹಾಕಿದ ಕಿರಾತಕ ಅಣ್ಣ ತನ್ನ ತಮ್ಮನ ಹೆಣ ಬೀಳಿಸಿದ್ದಾನೆ. 

ಗುರುತೇ ಸಿಗದ ರೀತಿಯಲ್ಲಿ ನೀರಲ್ಲಿ ಶವವಾಗಿ ಪತ್ತೆಯಾದ ಈತನ ಹೆಸರು ಆನಂದ್​.. ಹಾಸನದ ಮುಕುಂದೂರು ಹೊಸಳ್ಳಿ ಗ್ರಾಮದವನು. 10 ವರ್ಷಗಳ ಹಿಂದೆ ಅರ್ಚಿತಾ ಎಂಬಾಕೆ ಜತೆ ಮದುವೆಯಾಗಿತ್ತು. ಕೂಲಿ ಕೆಲಸ ಮಾಡ್ತಿದ್ರೂ ತನ್ನ ಹೆಂಡತಿಯನ್ನ ಚೆನ್ನಾಗಿ ನೋಡಿಕೊಳ್ತಿದ್ದ. ಈ ಸುಂದರ ದಾಂಪತ್ಯಕ್ಕೆ ಕೊಳ್ಳಿ ಇಟ್ಟಿದ್ದು ಇವನ ಸೋದರ ಸಂಬಂಧಿ ಸೋಮಶೇಖರ್​. 

Deadly Danger: ಮಂಗನಂತೆ ಜಿಗಿಯಲು ಹೋಗಿ ಮೂಳೆ ಮುರಿದುಕೊಂಡ ಭೂಪ!

ಮೂರು ವರ್ಷಗಳ ಹಿಂದೆ ಸೋಮಶೇಖರ್​ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದಳು. ಹೀಗಾಗಿ ಊಟ, ತಿಂಡಿಗೆ ನಮ್ಮಮನೆಗೆ ಬರುವಂತೆ ಆನಂದ ಹೇಳಿದ್ದ. ಆದ್ರೆ ಊಟ, ತಿಂಡಿಗೆ ಕರೆದು ಉಪಚಾರ ಮಾಡಿದ್ದ ಆನಂದನ ಹೆಂಡತಿ ಮೇಲೆಯೇ ಕಿರಾತಕ ಸೋಮಶೇಖರ ಕಣ್ಣು ಹಾಕಿದ್ದ. ಆನಂದನ ಪತ್ನಿ ಅರ್ಚಿತಾ ಜತೆಗೆ ಅನೈತಿಕ ಸಂಬಂಧವನ್ನೂ ಬೆಳೆಸಿದ್ದ. ಈ ವಿಷಯ ಗೊತ್ತಾಗಿ ಆನಂದ, ಪತ್ನಿಗೆ ಬುದ್ಧಿಮಾತು ಹೇಳಿದ್ದ. ಆದ್ರೆ ಪತ್ನಿ ಅರ್ಚಿತಾ ಬುದ್ಧಿಮಾತಿಗೆ ಬಗ್ಗುವ ಮನಸ್ಥಿತಿಯಲ್ಲಿರಲಿಲ್ಲ. ಬದಲಿಗೆ ಸಂಬಂಧದಲ್ಲಿ ಬಾವನಾದ ಸೋಮಶೇಖರನ ಜತೆಗೂಡಿ ಗಂಡನ ಕಥೆ ಮುಗಿಸಲು ಸ್ಕೆಚ್​ ರೆಡಿ ಮಾಡಿದ್ದಳು. 

ಪುರಾತನ ಸಿಟಿಯಲ್ಲಿ ಹಬ್ಬದ ಸಂಭ್ರಮ: 144 ವರ್ಷಗಳ ಬಳಿಕ ಮಹಾಕುಂಭಕ್ಕೆ ಸಜ್ಜಾದ

ಡಿ.26 ಆನಂದನಿಗೆ ಕರೆ ಮಾಡಿದ್ದ ಸೋಮಶೇಖರ ಹೇಮಾವತಿ ನಾಲೆಯ ದಡದಲ್ಲಿ ಆನಂದನಿಗೆ ಕಂಠಪೂರ್ತಿ ಕುಡಿಸಿ, ಆನಂದನನ್ನು ನಾಲೆಗೆ ತಳ್ಳಿ ಮನೆಗೆ ತೆರಳಿದ್ದ. ಆನಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಲು ಸೋಮಶೇಖರ ಪ್ಲಾನ್​ ಮಾಡಿದ್ದ. ಇತ್ತ ಆನಂದನ ಪತ್ನಿ ಅರ್ಚಿತಾ ತನಗೇನೂ ಗೊತ್ತೆ ಇಲ್ಲ ಎನ್ನುವಂತೆ ಪೊಲೀಸರಿಗೆ ಮಿಸ್ಸಿಂಗ್​ ಕಂಪ್ಲೇಂಟ್​ ನೀಡಿದ್ದಳು. ಸೋಮಶೇಖರ ಕೂಡ ಆನಂದನನ್ನ ಹುಡುಕುತ್ತಿರುವಂತೆ ನಾಟಕವಾಡಿದ್ದ. ಡಿ.28ರಂದು ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೆವು ಗ್ರಾಮದ ಕೆರೆಯಲ್ಲಿ ಆನಂದನ ಮೃತದೇಹ ಪತ್ತೆಯಾಗಿತ್ತು. 

ಸೋಮಶೇಖರ್​ ಹಾಗೂ ಅರ್ಚಿತಾ ಅಕ್ರಮ ಸಂಬಂಧದ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಸದ್ಯ ಅರ್ಚಿತಾ ಹಾಗೂ ಸೋಮಶೇಖರ್​ನನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಕಾಮದಾಸೆಗೆ ಅಕ್ಕರೆ ತೋರಿ ಅನ್ನ ಹಾಕಿದ ತಮ್ಮನನ್ನೇ ಕೊಂದು ಮುಗಿಸಿದ ಪಾಪಿ ಅಣ್ಣನಿಗೆ ಯಾವ ಶಿಕ್ಷೆ ನೀಡಿದರೂ ಕಡಿಮೆಯೇ. 

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more