ದಾಂಪತ್ಯ ಕಲಹಕ್ಕೆ ಎರಡು ಜೀವಗಳು ಬಲಿ: ಹೆಂಡತಿ ಕರೆಯಲು ಬಂದವ ಮಾವನನ್ನೇ ಕೊಂದ !

ದಾಂಪತ್ಯ ಕಲಹಕ್ಕೆ ಎರಡು ಜೀವಗಳು ಬಲಿ: ಹೆಂಡತಿ ಕರೆಯಲು ಬಂದವ ಮಾವನನ್ನೇ ಕೊಂದ !

Published : Nov 02, 2023, 09:58 AM IST

ಗಂಡ, ಹೆಂಡತಿಯಿಂದ ಶುರುವಾದ ಜಗಳದಲ್ಲಿ ಎರಡು ಹೆಣ ಬಿದ್ದಿವೆ. ಒಂದು ಕೊಲೆ, ಇನ್ನೊಂದು ಆತ್ಮಹತ್ಯೆ. ಇಬ್ಬರ ಬಲಿ ಪಡಿಯುವ ಮಟ್ಟಿಗೆ ನಡೆದ ಆ ಜಗಳವಾದ್ರೂ ಏನು ಗೊತ್ತಾ..? 
 

ಹೊಲದಲ್ಲಿ ರಕ್ತದ ಮಡುವಿನಲ್ಲಿ ಬಿದದ್ದಿರುವ ಶವ.ಮತ್ತೊಂದೆಡೆ ಶವದ ಮುಂದೆ ಮಕ್ಕಳ ಆಕ್ರಂದನ. ಈ ದೃಶ್ಯ ಕಂಡು ಬಂದಿದ್ದು ಕಲಬುರಗಿ(Kalaburagi) ಚಿಂಚೋಳಿಯ ಚಿಂತಾಪಲ್ಲಿ ಗ್ರಾಮದಲ್ಲಿ. ಹಬ್ಬಕ್ಕೆ ಅಂತಾ ಮಾವನ ಮನೆಗೆ ಬಂದ ಅಳಿಯ ಮಾವನನ್ನೇ ಕೊಂದು(Murder) ಹಾಕಿದ್ದಾನೆ. ಸೊಲ್ಲಾಪುರ ಮೂಲದ ರಾಜು ಎಂಬಾತನಿಗೆ ಈರಪ್ಪ ಎಂಬಾತ ತನ್ನ ಮಗಳನ್ನ ಮದುವೆ(Marriage) ಮಾಡಿಕೊಟ್ಟಿದ್ದ. ಆದ್ರೆ ಎರಡೇ ತಿಂಗಳಲ್ಲಿ ಗಂಡ ರಾಜು ಜೊತೆ ಜಗಳವಾಡಿಕೊಂಡ ಹೆಂಡತಿ ವೈಶಾಲಿ ತವರು ಮನೆ ಸೇರಿದ್ಳು. ಹೀಗೆ ತವರಿಗೆ ಬಂದ ಹೆಂಡತಿಯನ್ನ ಕರೆಯಲು ಅಂತಾ ರಾಜು ಮಾವನ ಮನೆಗೆ ಬಂದಿದ್ದ. ದಸರಾ ಹಬ್ಬ ಮುಗಿಯವರೆಗೂ ಇಲ್ಲೇ ಇದ್ದ ರಾಜು ಹೆಂಡತಿಯನ್ನ ಕರೆದುಕೊಂಡು ಹೋಗಲು ಪ್ರಯತ್ನಿಸಿದ್ದಾನೆ.ಆದ್ರೆ ವೈಶಾಲಿ ಮಾತ್ರ ಬರೋಲ್ಲ ಅಂತಾ ಹಠ ಹಿಡಿದಿದ್ದಾಳೆ ಈ ವೇಳೆ ರೊಚ್ಚುಗೆದ್ದ ರಾಜು ಆಕೆಯ ತಲೆಗೆ ಕಲ್ಲಿನಿಂದ ಹೊಡೆದಿದ್ದಾನೆ. ಇದಾದ ಬಳಿಕ ಹೊಲದಲ್ಲಿ ಕೆಲಸ ಮಾಡ್ತಿದ್ದ ಮಾವ ಈರಪ್ಪನ ಬಳಿ ರಾಜು ಹೋಗಿದ್ದಾನೆ. ಆದ್ರೆ ಅಲ್ಲಿ ಏನಾಯ್ತೋ ಗೊತ್ತಿಲ್ಲ ಏಕಾಏಕಿ ಕಲ್ಲು ಎತ್ತಿಹಾಕಿ ಮಾವ ಈರಪ್ಪನ ಹತ್ಯೆ ಮಾಡಿದ್ದಾನೆ. ಅಷ್ಟೇ ಅಲ್ಲ ರಕ್ತಸಿಕ್ತ ಬಟ್ಟೆಯಲ್ಲಿ ಮನೆಗೆ ಆಗಮಿಸಿದ್ದಾನೆ. ಇದನ್ನು ನೋಡಿದ ಹೆಂಡತಿ ವೈಶಾಲಿ ಚೀರಿಕೊಂಡು ಹೊಲದತ್ತ ಓಡಿದ್ದಾಳೆ. ಇಷ್ಟೆಲ್ಲ ಘಟನೆ ಬಳಿಕ ಭಯವಾಯ್ತೋ ಏನೋ  ಮಾವನನ್ನು ಕೊಂದ ಅಳಿಯ ರಾಜು ಕೂಡ ಮನೆಯ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹತ್ತಿ ಕರೆಂಟ್ ಹೊಡೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ವೀಕ್ಷಿಸಿ:  ಟಗರು ಕಾಳಗ ಏಕಾಏಕಿ ರದ್ದುಗೊಳಿಸಿದ ಪೊಲೀಸರು: ಗ್ರಾಮಸ್ಥರ ಮೇಲೆ ಕೇಸ್‌ ಹಾಕಿಸಿದ ಶಾಸಕ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more