ನಡುರಸ್ತೆಯಲ್ಲೇ ಹೆಣವಾದ ಫೇಮಸ್ ಟೈಲರ್‌  : ಶಿಷ್ಯನೇ ಅವನ ಕಥೆ ಮುಗಿಸಿದ್ಯಾಕೆ ?

ನಡುರಸ್ತೆಯಲ್ಲೇ ಹೆಣವಾದ ಫೇಮಸ್ ಟೈಲರ್‌ : ಶಿಷ್ಯನೇ ಅವನ ಕಥೆ ಮುಗಿಸಿದ್ಯಾಕೆ ?

Published : Oct 06, 2023, 02:26 PM ISTUpdated : Oct 06, 2023, 03:03 PM IST

ಅನ್ನ ಹಾಕಿದವನನ್ನೇ ಅವನು ಮುಗಿಸಿದ್ದೇಕೆ..?
ಸಂಬಳ ಜಾಸ್ತಿ ಕೇಳಿದಕ್ಕೆ ಕೆಲಸದಿಂದಲೇ ತೆಗೆದ..!
ಕೆಲಸದಿಂದ ತೆಗೆದಿದಕ್ಕೆ ಕೊಲೆ ಮಾಡಿಬಿಟ್ಟ..!

ಅವನು ಆ ನಗರದ ಪ್ರತಿಷ್ಠಿತ ಟೇಲರ್.. ಸೆಲಬ್ರಿಟಿಗಳು, ಪೊಲೀಸರಿಂದ ಹಿಡಿದು ಎಲ್ಲರೂ ಅವನ ಬಳಿ ಬಟ್ಟೆ ಹೊಲಿಸಿಕೊಳ್ತಿದ್ರು. ಹೀಗೆ ಫುಲ್ ಫೇಮಸ್ ಆಗಿದ್ದ ಆ ಟೇಲರ್(Tailor) ಆವತ್ತೊಂದು ದಿನ ಹಾಡಹಗಲಲ್ಲೇ ನಡುರಸ್ತೆಯಲ್ಲಿ ಹೆಣವಾಗಿ ಹೋಗಿದ್ದ. ಅವನನ್ನ ಹಂತಕರು ಕಲ್ಲು ಎತ್ತಿಹಾಕಿ ಕೊಂದುಬಿಟ್ಟಿದ್ರು. ಆದ್ರೆ ಇದೇ ಕೊಲೆ(Murder) ಕೇಸ್‌ನ ಬೆನ್ನುಬಿದ್ದ ಪೊಲೀಸರಿಗೆ ಕೊಲೆಗಾರನನ್ನ ಕಂಡುಹಿಡಿಯೋದು ಸುಲಭದ ಕೆಲಸವಾಗಿರಲಿಲ್ಲ. ಕಾರಣ ಆ ಟೇಲರ್ ಅಷ್ಟು ಫೇಮಸ್ ಆಗಿದ್ರೂ ಯಾರೊಂದಿಗೂ ಒರಟಾಗಿ ಮಾತನ್ನಾಡಿವನಲ್ಲ. ಶತೃಗಳಂತೂ ಇಲ್ವೇ ಇಲ್ಲ. ನಿಜಕ್ಕೂ ಈಕೆಯ ಮಾತು ಕೇಳಿದ್ರೆ ಬೇಸರವಾಗುತ್ತೆ. ಇಷ್ಟು ಚಿಕ್ಕ ವಯಸಿನಲ್ಲೇ ಆತನಿಗೆ ಬಂದ ಸಾವು ಹೆಂಡತಿ ಮಕ್ಕಳನ್ನ ದಿಕ್ಕಿಲ್ಲದಂತೆ ಮಾಡಿದೆ. ಆದ್ರೆ ಅಷ್ಟು ಒಳ್ಳೆಯ ವ್ಯಕ್ತಿಯಾಗಿದ್ದ ಸುರೇಶ್‌ನನ್ನ ಕೊಂದಿದ್ಯಾರು ಅನ್ನೋದು ಮಾತ್ರ ಅಲ್ಲಿದ್ದ ಯಾರಿಗೂ ಗೊತ್ತಿರಲಿಲ್ಲ. ಇದೇ ಕೇಸ್‌ನ ತನಿಖೆ ನಡೆಸಿದ ಪೊಲೀಸರು(Police) ಕೊಲೆಯಾದ 24 ಗಂಟೆಗಳಲ್ಲೇ ಕೊಲೆಗಾರನನ್ನ ಪತ್ತೆ ಹಚ್ಚಿದ್ರು. ಅಷ್ಟೇ ಅಲ್ಲ ಅರೆಸ್ಟ್ ಕೂಡ ಮಾಡಿಬಿಟ್ಟಿದ್ರು. ಊರಲ್ಲೆಲ್ಲಾ ಒಳ್ಳೆಯವನ್ನಹಾಗಿದ್ರೂ ತನ್ನ ಅಂಗಡಿಯಲ್ಲಿ ಕೆಲಸ ಮಾಡುವವರ ಪಾಲಿಗೆ ಮಾತ್ರ ಆತ ವಿಲನ್ ಆಗಿದ್ದ. 12 ವರ್ಷದಿಂದ ಅವನ ಬಳಿ ಕೆಲಸ ಮಾಡ್ತಿದ್ದವನು ಸಂಬಳ ಜಾಸ್ತಿ ಮಾಡಿ ಅಂತ ಕೇಳಿದ ಅಷ್ಟೇ. ಅಷ್ಟಕ್ಕೇ ಕೆಲಸದಿಂದ ತೆಗದು ಹಾಕಿದಲ್ಲದೇ ಸಂಬಳವನ್ನೂ ಕೊಡಲಿಲ್ಲ. ಫೇಮಸ್ ಅಂಗಡಿಯಲ್ಲಿ ಕೆಲಸದಿಂದ ತೆಗೆದು ಹಾಕಿದ್ರಿಂದ ಬೇರೆ ಎಲ್ಲೂ ಕೆಲಸ ಸಿಗದಂತೆ ಆಗಿಬಿಡ್ತು. ಇದ್ರಿಂದ ಕುಪಿತನಾದ ಆತ ಅನ್ನ ಹಾಕಿದ್ದ ಧಣಿಯನ್ನೇ ಕೊಲ್ಲೋ ನಿರ್ಧಾರ ಮಾಡಿಬಿಟ್ಟ. ಸಂಬಳ ಜಾಸ್ತಿ ಮಾಡಲಿಲ್ಲ ಅನ್ನೋ ಒಂದೇ ಕಾರಣಕ್ಕೆ ಅನ್ನ ಹಾಕಿದವನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿಕೊಂದಿದ್ದಾನೆ . 

ಇದನ್ನೂ ವೀಕ್ಷಿಸಿ: ಅಕ್ರಮ ಸಂಬಂಧ : ಪತ್ನಿ-ಮಕ್ಕಳನ್ನ ತವರಿಗಟ್ಟಿ, ಮತ್ತೊಬ್ಬಳ ಜತೆ ಚೆಲ್ಲಾಟ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more