ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

Published : May 21, 2024, 01:35 PM ISTUpdated : May 21, 2024, 01:36 PM IST

ಭೀಕರ ಬರಕ್ಕೆ ಕೈಕೊಟ್ಟ ಬೆಳೆ,ಜೀವನಕ್ಕೆ ಸಾಲದ ಮೊರೆ ಹೋದ ರೈತ
ಸಾಲ ಮರುಪಾವತಿ ವಿಳಂಬ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ
ಬಡ್ಡಿ ಮೇಲೆ ಸಾಲ ನೀಡಿದ್ದ ಮಹಿಳೆಯಿಂದಲೇ ಇಬ್ಬರಿಗೆ ಗೃಹಬಂಧನ

ಭೀಕರ ಬರಕ್ಕೆ(Drought) ಬೆಳೆ ಕೈಕೊಟ್ಟಿದ್ದರಿಂದ ಜೀವನಕ್ಕೆ ರೈತನೋರ್ವ ಸಾಲದ(Debt) ಮೊರೆ ಹೋಗಿದ್ದ, ಇದರ ಮರುಪಾವತಿ ವಿಳಂಬ ಮಾಡಿದಕ್ಕೆ ರೈತನ ಪತ್ನಿ, ಮಗನನ್ನು ಗೃಹಬಂಧನದಲ್ಲಿ(House Arrest) ಇಡಲಾಗಿದೆ. ಬಡ್ಡಿ ಮೇಲೆ ಸಾಲ ನೀಡಿದ್ದ ಮಹಿಳೆಯಿಂದಲೇ ಗೃಹಬಂಧನದಲ್ಲಿ ಇರಿಸಲಾಗಿದೆ. ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬಾಕೆಯಿಂದ ಗೃಹಬಂಧನ ಇಡಲಾಗಿದೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿಟ್ಟಿದಕ್ಕೆ ವಿಷ ಸೇವಿಸಿ ರೈತ ಆತ್ಮಹತ್ಯೆ(suicide) ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಇಂತಹ ಅಮಾನವೀಯ ಕೃತ್ಯ ನಡೆದಿದೆ. ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಒಂದೂವರೆ ಲಕ್ಷ ಸಾಲ ಪಡೆಯಲಾಗಿತ್ತು. ಐದು ತಿಂಗಳ ಹಿಂದೆ  ಸಾಲ ಪಡೆದಿದ್ದ ರಾಜು ಖೋತಗಿ, ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಕಟ್ಟುತ್ತಿದ್ದ.  ಎರಡು ದಿನಗಳ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದು, ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶವನ್ನು ರಾಜು ಕೇಳಿದ್ದ. ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ  ಮೃತ ರಾಜುಗೆ ಸೂಚನೆ. ಪುತ್ರನನ್ನು ಬಿಡದಿದ್ದಾಗ ಸಿದ್ದವ್ವಳ ಮನೆಗೆ ಹೋಗಿದ್ದ ರಾಜು-ದುರ್ಗವ್ವ. ಪುತ್ರನನ್ನು ಕಳುಹಿಸಿ ರಾಜು , ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ನೀಡಲಾಗಿತ್ತು.  ಮರುದಿನ‌ ಮತ್ತೆ ರಾಜುನನ್ನು ಬಿಟ್ಟು ಬಸವರಾಜ್‌, ದುರ್ಗವ್ವಗೆ  ಗೃಹಬಂಧನದಲ್ಲಿ ಇಡಲಾಗಿತ್ತು. ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದವ್ವಳ ವಿರುದ್ಧ  ದೂರು ದಾಖಲಿಸಿಕೊಳ್ಳದೇ ಪೊಲೀಸರು ಸತಾಯಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more