ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

Published : May 21, 2024, 01:35 PM ISTUpdated : May 21, 2024, 01:36 PM IST

ಭೀಕರ ಬರಕ್ಕೆ ಕೈಕೊಟ್ಟ ಬೆಳೆ,ಜೀವನಕ್ಕೆ ಸಾಲದ ಮೊರೆ ಹೋದ ರೈತ
ಸಾಲ ಮರುಪಾವತಿ ವಿಳಂಬ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ
ಬಡ್ಡಿ ಮೇಲೆ ಸಾಲ ನೀಡಿದ್ದ ಮಹಿಳೆಯಿಂದಲೇ ಇಬ್ಬರಿಗೆ ಗೃಹಬಂಧನ

ಭೀಕರ ಬರಕ್ಕೆ(Drought) ಬೆಳೆ ಕೈಕೊಟ್ಟಿದ್ದರಿಂದ ಜೀವನಕ್ಕೆ ರೈತನೋರ್ವ ಸಾಲದ(Debt) ಮೊರೆ ಹೋಗಿದ್ದ, ಇದರ ಮರುಪಾವತಿ ವಿಳಂಬ ಮಾಡಿದಕ್ಕೆ ರೈತನ ಪತ್ನಿ, ಮಗನನ್ನು ಗೃಹಬಂಧನದಲ್ಲಿ(House Arrest) ಇಡಲಾಗಿದೆ. ಬಡ್ಡಿ ಮೇಲೆ ಸಾಲ ನೀಡಿದ್ದ ಮಹಿಳೆಯಿಂದಲೇ ಗೃಹಬಂಧನದಲ್ಲಿ ಇರಿಸಲಾಗಿದೆ. ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬಾಕೆಯಿಂದ ಗೃಹಬಂಧನ ಇಡಲಾಗಿದೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿಟ್ಟಿದಕ್ಕೆ ವಿಷ ಸೇವಿಸಿ ರೈತ ಆತ್ಮಹತ್ಯೆ(suicide) ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಇಂತಹ ಅಮಾನವೀಯ ಕೃತ್ಯ ನಡೆದಿದೆ. ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಒಂದೂವರೆ ಲಕ್ಷ ಸಾಲ ಪಡೆಯಲಾಗಿತ್ತು. ಐದು ತಿಂಗಳ ಹಿಂದೆ  ಸಾಲ ಪಡೆದಿದ್ದ ರಾಜು ಖೋತಗಿ, ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಕಟ್ಟುತ್ತಿದ್ದ.  ಎರಡು ದಿನಗಳ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದು, ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶವನ್ನು ರಾಜು ಕೇಳಿದ್ದ. ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ  ಮೃತ ರಾಜುಗೆ ಸೂಚನೆ. ಪುತ್ರನನ್ನು ಬಿಡದಿದ್ದಾಗ ಸಿದ್ದವ್ವಳ ಮನೆಗೆ ಹೋಗಿದ್ದ ರಾಜು-ದುರ್ಗವ್ವ. ಪುತ್ರನನ್ನು ಕಳುಹಿಸಿ ರಾಜು , ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ನೀಡಲಾಗಿತ್ತು.  ಮರುದಿನ‌ ಮತ್ತೆ ರಾಜುನನ್ನು ಬಿಟ್ಟು ಬಸವರಾಜ್‌, ದುರ್ಗವ್ವಗೆ  ಗೃಹಬಂಧನದಲ್ಲಿ ಇಡಲಾಗಿತ್ತು. ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದವ್ವಳ ವಿರುದ್ಧ  ದೂರು ದಾಖಲಿಸಿಕೊಳ್ಳದೇ ಪೊಲೀಸರು ಸತಾಯಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more