ತಂದೆ ಸಾವಿನ ಬಳಿಕ ಮಗನ ಕೊಲೆ ರಹಸ್ಯ ಬಯಲು;  ‘ದೃಶ್ಯ’ ಚಿತ್ರ ನೆನಪಿಸುವ ತಂದೆಯ ಮರ್ಡರ್ ಮಿಸ್ಟರಿ

ತಂದೆ ಸಾವಿನ ಬಳಿಕ ಮಗನ ಕೊಲೆ ರಹಸ್ಯ ಬಯಲು; ‘ದೃಶ್ಯ’ ಚಿತ್ರ ನೆನಪಿಸುವ ತಂದೆಯ ಮರ್ಡರ್ ಮಿಸ್ಟರಿ

Published : Aug 14, 2025, 12:55 PM IST
ಹಾಸನ ಜಿಲ್ಲೆಯಲ್ಲಿ ತಂದೆಯೊಬ್ಬ ಮಗನನ್ನು ಕೊಂದು ಮನೆಯ ಹಿತ್ತಲಿನಲ್ಲಿ ಹೂತಿಟ್ಟ ಘಟನೆ ಬೆಳಕಿಗೆ ಬಂದಿದೆ. ಮಗನ ಅಂತ್ಯಕ್ರಿಯೆಗೆ ಸಂಬಂಧಿಕರು ಒತ್ತಾಯಿಸಿದಾಗ ಕಿರಿಯ ಮಗ ಸತ್ಯ ಬಾಯ್ಬಿಟ್ಟಿದ್ದಾನೆ.

ದೃಶ್ಯ ಕನ್ನಡದ ಕ್ರೈಂ ಥ್ರಿಲ್ಲರ್​ ಚಿತ್ರ. ಈ ಚಿತ್ರವನ್ನೇ ನೆನಪಿಸೋ ಕೊಲೆವೊಂದು ಹಾಸನ ಜಿಲ್ಲೆಯಲ್ಲಿ ನಡೆದಿದೆ. ತಂದೆ ಮಗನನ್ನ ಕೊಂದು ಹೂತು ಹಾಕಿದ್ದಾನೆ. ಆತನ ಸಾವಿನ ಬಳಿಕ ಈ ಮರ್ಡರ್ ಮಿಸ್ಟ್ರಿ ಬಯಲಾಗಿದೆ. ಮೃತ ಗಂಗಾಧರ್​​ ಹತ್ತು ದಿನಗಳ ಹಿಂದೆ ಮೃತಪಡುತ್ತಿದ್ದಂತೆ ಸಂಬಂಧಿಕರು ಹಿರಿಯ ಮಗ ರಘುನನ್ನ ಅಂತ್ಯಸಂಸ್ಕಾರಕ್ಕೆ ಕರೆಸುವಂತೆ ಸಂಬಂಧಿಕರು ಒತ್ತಾಯಿಸಿದ್ರು. ತಮ್ಮ ರೂಪೇಶ್​​​​​​​ ಅಣ್ಣನ ಮೊಬೈಲ್​ ಸ್ವಿಚ್ಡ್​ ಆಫ್​​​​​ ಆಗಿದೆ ಅಂತ ಹೇಳಿ ಬೇರೆ ನಂಬರ್​​ ಕೊಟ್ಟಿದ್ದ. ಆದ್ರೆ ಇಷ್ಟಕ್ಕೆ ಸುಮ್ಮನಾಗದ ಸಂಬಂಧಿಕರು ಹಾಲು ಬಿಡೋ 3ನೇ ದಿನಕ್ಕಾದ್ರೂ ರಘನನ್ನು ಕರೆಸಲೇಬೇಕೆಂದು ರೂಪೇಶ್​​ಗೆ ಒತ್ತಡ ಹಾಕಿದ್ದಾರೆ. ಆಗ ರೂಪೇಶ್​​ ಬೇರೆ ದಾರಿಯಿಲ್ಲದೇ ಸತ್ಯ ಬಾಯ್ಬಿಟ್ಟಿದ್ದಾನೆ. ರಘು ನಾಪತ್ತೆ ಆಗಿಲ್ಲ. ಆಗಸ್ಟ್​ 14, 2023 ರಂದು ತಂದೆನೇ ಅಣ್ಣನನ್ನ ಕೊಲೆ ಮಾಡಿದ್ದಾರೆ ಎಂದು ರೂಪೇಶ್​ ಹೇಳಿದ್ದಾನೆ. 32 ವರ್ಷದ ಮೃತ ರಘುಗೆ ಮದುವೆ ಆಗಿದ್ದು 5 ವರ್ಷದ ಮಗುವಿದೆ. ಹೆಂಡತಿಗೆ ವಿಚ್ಛೇದನ ನೀಡಿದ್ದಾರೆ. ಕುಡಿತದ ಚಟಕ್ಕೆ ಬಿದ್ದ ರಘು ತಂದೆಗೆ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದನಂತೆ. ಇದರಿಂದ ಬೇಸತ್ತ ತಂದೆ ಮಗನನ್ನ ಕೊಲೆ ಮಾಡಿದ್ದಾರೆ. ಈ ಸುದ್ದಿ ಯಾರಿಗೂ ಗೊತ್ತಾಗಬಾರದು ಅಂತ ತನ್ನ ಮನೆಯ ಹಿಂಭಾಗದಲ್ಲಿ ಇರುವ ಇಂಗು ಗುಂಡಿಯಲ್ಲಿ ಶವ ಹೂತು ಹಾಕಿದ್ದಾನೆ. ಕಿರಿಯ ಮಗ ರೂಪೇಶ್​​ಗೆ ಈ ವಿಚಾರ ಯಾರಿಗೂ ಹೇಳಬೇಡ ಎಂದು ಬೆದರಿಕೆ ಹಾಕಿದ್ದಾನೆ. ಹೀಗಾಗಿ ಈ ಸುದ್ದಿಯನ್ನ ಯಾರ ಬಳಿಯೂ ಹೇಳಿಲ್ಲ ಅಂತ ಸ್ವಲ್ಪ ಬುದ್ಧಿಮಾಂದ್ಯನಾದ ರೂಪೇಶ್​ ಸಂಬಂಧಿಕರ ಬಳಿ ಹೇಳಿಕೊಂಡಿದ್ದಾನೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more