ಸೆಲ್ಪಿ ಬಿಚ್ಚಿಟ್ಟ ಸತ್ಯ: ಪ್ರೀತಿಸಿ ಮದುವೆಯಾದ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ!

ಸೆಲ್ಪಿ ಬಿಚ್ಚಿಟ್ಟ ಸತ್ಯ: ಪ್ರೀತಿಸಿ ಮದುವೆಯಾದ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ!

Published : Sep 01, 2021, 09:16 AM ISTUpdated : Sep 01, 2021, 10:50 AM IST

ಪ್ರೀತಿಸಿ ಮದುವೆಯಾದ ಗಂಡನನ್ನೇ ತನ್ನ ಪ್ರಿಯಕರನ ಜೊತೆಗೆ ಸೇರಿ ಕೊಲೆ ಮಾಡಿದ್ದಳು, ಆದರೆ ಅದನ್ನು ಆತ್ಮಹತ್ಯೆ ಎಂದು ನಂಬಿಸಿ ಪ್ರಿಯಕರನ ಜೊತೆಗೆ ಚಕ್ಕಂದವಾಡಿಕೊಂಡಿದ್ದವಳು, ಪ್ರಿಯಕರನೊಂದಿಗಿದ್ದ ಅದೊಂದು ಸೆಲ್ಪಿ ಪೋಟೋ ಆ ಇಬ್ಬರು ಕೊಲೆಗಟುಕರನ್ನು ಜೀವಾವಧಿ ಶಿಕ್ಷಯವರೆಗೆ ಕರೆದುಕೊಂಡು ಬಂದು ಬಿಟ್ಟಿದೆ.

ಕೋಲಾರ(ಸೆ.01): ತನ್ನ ಮಗನ ಕೊಲೆಯಿಂದ ಮನನೊಂದಿರುವ ವೃದ್ದೆ, ತನ್ನ ಮಗನ ಕೊಲೆ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನ್ಯಾಯಾಲಯದ ಎದುರು ನ್ಯಾಯಕ್ಕಾಗಿ ಶಬರಿಯಂತೆ ಕಾದಿರುವ ಈಕೆಯ ಹೆಸರು ವಾಸಗಿ. ಕೋಲಾರ ಜಿಲ್ಲೆ ಕೆಜಿಎಫ್ ನಗರ ನಿವಾಸಿ.ವಾಸಗಿಯವರ ಎರಡನೇ ಮಗ ಸೋಮನಾಥ್ 2016 ಮಾರ್ಚ್‌ನಲ್ಲಿ ತಾನು ಪ್ರೀತಿಸಿ ಮದುವೆಯಾಗಿದ್ದ. ತನ್ನ ಪತ್ನಿ ಅಶ್ವಿನಿ ಹಾಗೂ ಆಕೆಯ ಪ್ರಿಯಕರ ಸಂತೋಷ್ ಎಂಬಾತನಿಂದ ಕೊಲೆಯಾಗಿ ಹೋಗಿದ್ದ. 

ಅದನ್ನು ಅಷ್ಟಕ್ಕೇ ಬಿಡದ ಸೋಮವಾಥ್ ತಾಯಿ 60 ವರ್ಷದ ಆ ವೃದ್ದೆ ವಾಸಗಿ ತನ್ನ ಮಗನದ್ದು ಆತ್ಮಹತ್ಯೆಯಲ್ಲಾ, ಅದೊಂದು ಕೊಲೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಈ ವೇಳೆ ವೃದ್ದೆಯ ದೂರನ್ನು ಆಲಿಸಿದ ಕೆಜಿಎಫ್‌ನ ರಾಬರ್ಟ್ಸನ್ ಪೇಟೆ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ಮಾಡಲು ಶುರುಮಾಡಿದ್ದರು. ಈ ವೇಳೆ ಇಡೀ ಪ್ರಕರಣಕ್ಕೆ ಸಾಕ್ಷಿಯಾಗಿ ತಿರುವು ಕೊಟ್ಟಿದ್ದ ಅದೊಂದು ಸೆಲ್ಪಿ ಪೋಟೋ ಆಧಾರವಿಗಿಟ್ಟುಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಅದು ಆತ್ಮಹತ್ಯೆಯಲ್ಲಾ ಕೊಲೆ ಅನ್ನೋದನ್ನು ಸುಲಭವಾಗಿ ಆರೋಪಿತರಿಂದ ಬಾಯಿಬಿಡಿಸಿದ್ದರು. 

ಈ ವೇಳೆ ಸೋಮನಾಥನ ಕೊಲೆ ಮಾಡಿದ್ದ ಸೋಮನಾಥನ ಪತ್ನಿ ಅಶ್ವಿನಿ ಹಾಗೂ ಸಂತೋಷ್‌ನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕೊಲೆಗಾರರಾದ ಹಾಕಿದ್ದ ಅಶ್ವಿನಿ ಹಾಗೂ ಅವಳ ಪ್ರಿಯಕರ ಇಬ್ಬರಿಗೂ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ಕೋಲಾರದ ಎರಡನೇ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ಮಗನ ಸಾವಿನ ನ್ಯಾಯಕ್ಕಾಗಿ ಐದು ವರ್ಷಗಳ ಕಾಲ ಶಬರಿಯಂತೆ ನ್ಯಾಯಾಲಯಕ್ಕೆ ತಿರುಗಿದ್ದ ವೃದ್ದೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?