ಸೆಲ್ಪಿ ಬಿಚ್ಚಿಟ್ಟ ಸತ್ಯ: ಪ್ರೀತಿಸಿ ಮದುವೆಯಾದ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ!

ಸೆಲ್ಪಿ ಬಿಚ್ಚಿಟ್ಟ ಸತ್ಯ: ಪ್ರೀತಿಸಿ ಮದುವೆಯಾದ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ!

Published : Sep 01, 2021, 09:16 AM ISTUpdated : Sep 01, 2021, 10:50 AM IST

ಪ್ರೀತಿಸಿ ಮದುವೆಯಾದ ಗಂಡನನ್ನೇ ತನ್ನ ಪ್ರಿಯಕರನ ಜೊತೆಗೆ ಸೇರಿ ಕೊಲೆ ಮಾಡಿದ್ದಳು, ಆದರೆ ಅದನ್ನು ಆತ್ಮಹತ್ಯೆ ಎಂದು ನಂಬಿಸಿ ಪ್ರಿಯಕರನ ಜೊತೆಗೆ ಚಕ್ಕಂದವಾಡಿಕೊಂಡಿದ್ದವಳು, ಪ್ರಿಯಕರನೊಂದಿಗಿದ್ದ ಅದೊಂದು ಸೆಲ್ಪಿ ಪೋಟೋ ಆ ಇಬ್ಬರು ಕೊಲೆಗಟುಕರನ್ನು ಜೀವಾವಧಿ ಶಿಕ್ಷಯವರೆಗೆ ಕರೆದುಕೊಂಡು ಬಂದು ಬಿಟ್ಟಿದೆ.

ಕೋಲಾರ(ಸೆ.01): ತನ್ನ ಮಗನ ಕೊಲೆಯಿಂದ ಮನನೊಂದಿರುವ ವೃದ್ದೆ, ತನ್ನ ಮಗನ ಕೊಲೆ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನ್ಯಾಯಾಲಯದ ಎದುರು ನ್ಯಾಯಕ್ಕಾಗಿ ಶಬರಿಯಂತೆ ಕಾದಿರುವ ಈಕೆಯ ಹೆಸರು ವಾಸಗಿ. ಕೋಲಾರ ಜಿಲ್ಲೆ ಕೆಜಿಎಫ್ ನಗರ ನಿವಾಸಿ.ವಾಸಗಿಯವರ ಎರಡನೇ ಮಗ ಸೋಮನಾಥ್ 2016 ಮಾರ್ಚ್‌ನಲ್ಲಿ ತಾನು ಪ್ರೀತಿಸಿ ಮದುವೆಯಾಗಿದ್ದ. ತನ್ನ ಪತ್ನಿ ಅಶ್ವಿನಿ ಹಾಗೂ ಆಕೆಯ ಪ್ರಿಯಕರ ಸಂತೋಷ್ ಎಂಬಾತನಿಂದ ಕೊಲೆಯಾಗಿ ಹೋಗಿದ್ದ. 

ಅದನ್ನು ಅಷ್ಟಕ್ಕೇ ಬಿಡದ ಸೋಮವಾಥ್ ತಾಯಿ 60 ವರ್ಷದ ಆ ವೃದ್ದೆ ವಾಸಗಿ ತನ್ನ ಮಗನದ್ದು ಆತ್ಮಹತ್ಯೆಯಲ್ಲಾ, ಅದೊಂದು ಕೊಲೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಈ ವೇಳೆ ವೃದ್ದೆಯ ದೂರನ್ನು ಆಲಿಸಿದ ಕೆಜಿಎಫ್‌ನ ರಾಬರ್ಟ್ಸನ್ ಪೇಟೆ ಪೊಲೀಸರು ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ಮಾಡಲು ಶುರುಮಾಡಿದ್ದರು. ಈ ವೇಳೆ ಇಡೀ ಪ್ರಕರಣಕ್ಕೆ ಸಾಕ್ಷಿಯಾಗಿ ತಿರುವು ಕೊಟ್ಟಿದ್ದ ಅದೊಂದು ಸೆಲ್ಪಿ ಪೋಟೋ ಆಧಾರವಿಗಿಟ್ಟುಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಅದು ಆತ್ಮಹತ್ಯೆಯಲ್ಲಾ ಕೊಲೆ ಅನ್ನೋದನ್ನು ಸುಲಭವಾಗಿ ಆರೋಪಿತರಿಂದ ಬಾಯಿಬಿಡಿಸಿದ್ದರು. 

ಈ ವೇಳೆ ಸೋಮನಾಥನ ಕೊಲೆ ಮಾಡಿದ್ದ ಸೋಮನಾಥನ ಪತ್ನಿ ಅಶ್ವಿನಿ ಹಾಗೂ ಸಂತೋಷ್‌ನನ್ನು ಬಂಧಿಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕೊಲೆಗಾರರಾದ ಹಾಕಿದ್ದ ಅಶ್ವಿನಿ ಹಾಗೂ ಅವಳ ಪ್ರಿಯಕರ ಇಬ್ಬರಿಗೂ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ಕೋಲಾರದ ಎರಡನೇ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ಮಗನ ಸಾವಿನ ನ್ಯಾಯಕ್ಕಾಗಿ ಐದು ವರ್ಷಗಳ ಕಾಲ ಶಬರಿಯಂತೆ ನ್ಯಾಯಾಲಯಕ್ಕೆ ತಿರುಗಿದ್ದ ವೃದ್ದೆಗೆ ಕೊನೆಗೂ ನ್ಯಾಯ ಸಿಕ್ಕಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!