ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ:  ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ: ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

Published : Aug 17, 2023, 10:07 AM ISTUpdated : Aug 17, 2023, 10:10 AM IST

ಈ ಬೆಂಕಿ ದುರಂತ ನೆನಪಿದ್ಯಾ ? ಕಳೆದ 6 ದಿನದ ಹಿಂದೆ ಬಿಬಿಎಂಪಿ ಮುಖ್ಯ ಕಟ್ಟದಲ್ಲಿರುವ ಕ್ವಾಲಿಟಿ ಕಂಟ್ರೋಲ್ ಕಚೇರಿಯಲ್ಲಿ ದುರಂತ ಸಂಭವಿಸಿತ್ತು. ಇನ್ನೇನು ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸಿದ್ಧತೆಯಲ್ಲಿದ್ದ ಸಿಬ್ಬಂದಿಗಳಲ್ಲಿ 9 ಮಂದಿ ಸುಟ್ಟು ಗಾಯಗೊಂಡಿದ್ರು. ಗಾಯಾಳುಗಳು ಈಗಲೂ ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ.

ಬಿಬಿಎಂಪಿ ಗುತ್ತಿಗೆ ಬಿಲ್ ಬಾಕಿ ವಿಚಾರದಲ್ಲಿ ಕಮಿಷನ್ ಕದನ ನಡೆಯುತ್ತಿರುವ ಹೊತ್ತಲ್ಲೇ ಬಿಬಿಎಂಪಿ(BBMP) ಕಚೇರಿಯಲ್ಲಿ ನಡೆದ  ಬೆಂಕಿ ದುರಂತ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಬೆಂಕಿ ದುರಂತ(Fire incident) ಆಕಸ್ಮಿಕವೋ..? ಉದ್ದೇಶ ಪೂರ್ವಕವೋ ಅನ್ನೋ ಅನುಮಾನ ಈಗಲೂ ಕಾಡುತ್ತಿದೆ. ಆದ್ರೆ, ಮೇಲ್ನೋಟಕ್ಕೆ ಒಂದಿಷ್ಟು ಕಾರಣಗಳು ಗೋಚರಿಸುತ್ತಿವೆ. ಬಿಬಿಎಂಪಿ ಬೆಂಕಿ ಪ್ರಕರಣಕ್ಕೆ‌ ಬಿಬಿಎಂಪಿ ಮುಖ್ಯ ಆಯುಕ್ತರ ನಿರ್ಲಕ್ಷ್ಯ ಕಾರಣವಾಯ್ತಾ ಅನ್ನೋ ಅನುಮಾನ ಮೂಡಿದೆ. ಪ್ರಯೋಗಾಲಯಕ್ಕೆ ಬೇಕಾದ ಸೌಲಭ್ಯ ಒದಗಿಸದ ಬಿಬಿಎಂಪಿ ಮುಖ್ಯ ಇಂಜಿನಿಯರ್(BBMP Chief Engineer) ಪ್ರಹ್ಲಾದ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಿಬಿಎಂಪಿ ಗುಣನಿಯಂತ್ರಣ ವಿಭಾಗದಲ್ಲಿ ಅಗತ್ಯ ಸಲಕರಣೆ, ಮುಂಜಾಗ್ರತೆ ಭದ್ರತೆ ಇಲ್ಲದ್ದೇ ಬೆಂಕಿಗೆ ಅವಘಡಕ್ಕೆ ಕಾರಣ ಅನ್ನೋದು ಮೇಲ್ನೋಟಕ್ಕೆ ಕಾಣುತ್ತಿದೆ. ಸಿಬ್ಬಂದಿ, ಸಲಕರಣೆಗಾಗಿ 2022ರಲ್ಲೇ ಗುಣನಿಯಂತ್ರಣ ವಿಭಾಗದಿಂದ ಆಯುಕ್ತರಿಗೆ ಮನವಿ ಮಾಡಿದ್ರೂ ಪ್ರಯೋಜನವಾಗಿರಲಿಲ್ವಂತೆ. ಒಂದೆಡೆ ಬೆಂಕಿ ದುರಂತದ ತನಿಖೆ ಚುರುಕು ಪಡೆದರೆ, ಮತ್ತೊಂದೆಡೆ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ಚೀಫ್ ಇಂಜಿನಿಯರ್ ಶಿವಕುಮಾರ್, ಜ್ಯೋತಿ ಮತ್ತು ಇಇ ಕಿರಣ್ ಸ್ಥಿತಿ ಗಂಭೀರವಾಗಿದ್ದು, ಡಯಾಲಿಸಿಸ್ ಕೂಡ ಮಾಡಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಹಳೇ ಸಂಜೂ ಹೊಸ ಗೀತಾ: ರೊಮ್ಯಾಂಟಿಕ್ ಮೂಡ್‌ನಲ್ಲಿ ಕಿಟ್ಟಿ- ರಚ್ಚು ಡಾನ್ಸ್ !

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more