ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ:  ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ: ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

Published : Aug 17, 2023, 10:07 AM ISTUpdated : Aug 17, 2023, 10:10 AM IST

ಈ ಬೆಂಕಿ ದುರಂತ ನೆನಪಿದ್ಯಾ ? ಕಳೆದ 6 ದಿನದ ಹಿಂದೆ ಬಿಬಿಎಂಪಿ ಮುಖ್ಯ ಕಟ್ಟದಲ್ಲಿರುವ ಕ್ವಾಲಿಟಿ ಕಂಟ್ರೋಲ್ ಕಚೇರಿಯಲ್ಲಿ ದುರಂತ ಸಂಭವಿಸಿತ್ತು. ಇನ್ನೇನು ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸಿದ್ಧತೆಯಲ್ಲಿದ್ದ ಸಿಬ್ಬಂದಿಗಳಲ್ಲಿ 9 ಮಂದಿ ಸುಟ್ಟು ಗಾಯಗೊಂಡಿದ್ರು. ಗಾಯಾಳುಗಳು ಈಗಲೂ ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ.

ಬಿಬಿಎಂಪಿ ಗುತ್ತಿಗೆ ಬಿಲ್ ಬಾಕಿ ವಿಚಾರದಲ್ಲಿ ಕಮಿಷನ್ ಕದನ ನಡೆಯುತ್ತಿರುವ ಹೊತ್ತಲ್ಲೇ ಬಿಬಿಎಂಪಿ(BBMP) ಕಚೇರಿಯಲ್ಲಿ ನಡೆದ  ಬೆಂಕಿ ದುರಂತ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಬೆಂಕಿ ದುರಂತ(Fire incident) ಆಕಸ್ಮಿಕವೋ..? ಉದ್ದೇಶ ಪೂರ್ವಕವೋ ಅನ್ನೋ ಅನುಮಾನ ಈಗಲೂ ಕಾಡುತ್ತಿದೆ. ಆದ್ರೆ, ಮೇಲ್ನೋಟಕ್ಕೆ ಒಂದಿಷ್ಟು ಕಾರಣಗಳು ಗೋಚರಿಸುತ್ತಿವೆ. ಬಿಬಿಎಂಪಿ ಬೆಂಕಿ ಪ್ರಕರಣಕ್ಕೆ‌ ಬಿಬಿಎಂಪಿ ಮುಖ್ಯ ಆಯುಕ್ತರ ನಿರ್ಲಕ್ಷ್ಯ ಕಾರಣವಾಯ್ತಾ ಅನ್ನೋ ಅನುಮಾನ ಮೂಡಿದೆ. ಪ್ರಯೋಗಾಲಯಕ್ಕೆ ಬೇಕಾದ ಸೌಲಭ್ಯ ಒದಗಿಸದ ಬಿಬಿಎಂಪಿ ಮುಖ್ಯ ಇಂಜಿನಿಯರ್(BBMP Chief Engineer) ಪ್ರಹ್ಲಾದ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಿಬಿಎಂಪಿ ಗುಣನಿಯಂತ್ರಣ ವಿಭಾಗದಲ್ಲಿ ಅಗತ್ಯ ಸಲಕರಣೆ, ಮುಂಜಾಗ್ರತೆ ಭದ್ರತೆ ಇಲ್ಲದ್ದೇ ಬೆಂಕಿಗೆ ಅವಘಡಕ್ಕೆ ಕಾರಣ ಅನ್ನೋದು ಮೇಲ್ನೋಟಕ್ಕೆ ಕಾಣುತ್ತಿದೆ. ಸಿಬ್ಬಂದಿ, ಸಲಕರಣೆಗಾಗಿ 2022ರಲ್ಲೇ ಗುಣನಿಯಂತ್ರಣ ವಿಭಾಗದಿಂದ ಆಯುಕ್ತರಿಗೆ ಮನವಿ ಮಾಡಿದ್ರೂ ಪ್ರಯೋಜನವಾಗಿರಲಿಲ್ವಂತೆ. ಒಂದೆಡೆ ಬೆಂಕಿ ದುರಂತದ ತನಿಖೆ ಚುರುಕು ಪಡೆದರೆ, ಮತ್ತೊಂದೆಡೆ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ಚೀಫ್ ಇಂಜಿನಿಯರ್ ಶಿವಕುಮಾರ್, ಜ್ಯೋತಿ ಮತ್ತು ಇಇ ಕಿರಣ್ ಸ್ಥಿತಿ ಗಂಭೀರವಾಗಿದ್ದು, ಡಯಾಲಿಸಿಸ್ ಕೂಡ ಮಾಡಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಹಳೇ ಸಂಜೂ ಹೊಸ ಗೀತಾ: ರೊಮ್ಯಾಂಟಿಕ್ ಮೂಡ್‌ನಲ್ಲಿ ಕಿಟ್ಟಿ- ರಚ್ಚು ಡಾನ್ಸ್ !

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more