ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ:  ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

ಕಮಿಷನ್ ಕೋಲಾಹಲದ ಮಧ್ಯೆ ಬಿಬಿಎಂಪಿ ಕಚೇರಿಗೆ ಬೆಂಕಿ: ಈ ದುರಂತಕ್ಕೆ ‘ಆ’ ಅಧಿಕಾರಿಯೇ ಕಾರಣನಾ..?

Published : Aug 17, 2023, 10:07 AM ISTUpdated : Aug 17, 2023, 10:10 AM IST

ಈ ಬೆಂಕಿ ದುರಂತ ನೆನಪಿದ್ಯಾ ? ಕಳೆದ 6 ದಿನದ ಹಿಂದೆ ಬಿಬಿಎಂಪಿ ಮುಖ್ಯ ಕಟ್ಟದಲ್ಲಿರುವ ಕ್ವಾಲಿಟಿ ಕಂಟ್ರೋಲ್ ಕಚೇರಿಯಲ್ಲಿ ದುರಂತ ಸಂಭವಿಸಿತ್ತು. ಇನ್ನೇನು ಕರ್ತವ್ಯ ಮುಗಿಸಿ ಮನೆಗೆ ತೆರಳುವ ಸಿದ್ಧತೆಯಲ್ಲಿದ್ದ ಸಿಬ್ಬಂದಿಗಳಲ್ಲಿ 9 ಮಂದಿ ಸುಟ್ಟು ಗಾಯಗೊಂಡಿದ್ರು. ಗಾಯಾಳುಗಳು ಈಗಲೂ ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ.

ಬಿಬಿಎಂಪಿ ಗುತ್ತಿಗೆ ಬಿಲ್ ಬಾಕಿ ವಿಚಾರದಲ್ಲಿ ಕಮಿಷನ್ ಕದನ ನಡೆಯುತ್ತಿರುವ ಹೊತ್ತಲ್ಲೇ ಬಿಬಿಎಂಪಿ(BBMP) ಕಚೇರಿಯಲ್ಲಿ ನಡೆದ  ಬೆಂಕಿ ದುರಂತ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಬೆಂಕಿ ದುರಂತ(Fire incident) ಆಕಸ್ಮಿಕವೋ..? ಉದ್ದೇಶ ಪೂರ್ವಕವೋ ಅನ್ನೋ ಅನುಮಾನ ಈಗಲೂ ಕಾಡುತ್ತಿದೆ. ಆದ್ರೆ, ಮೇಲ್ನೋಟಕ್ಕೆ ಒಂದಿಷ್ಟು ಕಾರಣಗಳು ಗೋಚರಿಸುತ್ತಿವೆ. ಬಿಬಿಎಂಪಿ ಬೆಂಕಿ ಪ್ರಕರಣಕ್ಕೆ‌ ಬಿಬಿಎಂಪಿ ಮುಖ್ಯ ಆಯುಕ್ತರ ನಿರ್ಲಕ್ಷ್ಯ ಕಾರಣವಾಯ್ತಾ ಅನ್ನೋ ಅನುಮಾನ ಮೂಡಿದೆ. ಪ್ರಯೋಗಾಲಯಕ್ಕೆ ಬೇಕಾದ ಸೌಲಭ್ಯ ಒದಗಿಸದ ಬಿಬಿಎಂಪಿ ಮುಖ್ಯ ಇಂಜಿನಿಯರ್(BBMP Chief Engineer) ಪ್ರಹ್ಲಾದ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಿಬಿಎಂಪಿ ಗುಣನಿಯಂತ್ರಣ ವಿಭಾಗದಲ್ಲಿ ಅಗತ್ಯ ಸಲಕರಣೆ, ಮುಂಜಾಗ್ರತೆ ಭದ್ರತೆ ಇಲ್ಲದ್ದೇ ಬೆಂಕಿಗೆ ಅವಘಡಕ್ಕೆ ಕಾರಣ ಅನ್ನೋದು ಮೇಲ್ನೋಟಕ್ಕೆ ಕಾಣುತ್ತಿದೆ. ಸಿಬ್ಬಂದಿ, ಸಲಕರಣೆಗಾಗಿ 2022ರಲ್ಲೇ ಗುಣನಿಯಂತ್ರಣ ವಿಭಾಗದಿಂದ ಆಯುಕ್ತರಿಗೆ ಮನವಿ ಮಾಡಿದ್ರೂ ಪ್ರಯೋಜನವಾಗಿರಲಿಲ್ವಂತೆ. ಒಂದೆಡೆ ಬೆಂಕಿ ದುರಂತದ ತನಿಖೆ ಚುರುಕು ಪಡೆದರೆ, ಮತ್ತೊಂದೆಡೆ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ಚೀಫ್ ಇಂಜಿನಿಯರ್ ಶಿವಕುಮಾರ್, ಜ್ಯೋತಿ ಮತ್ತು ಇಇ ಕಿರಣ್ ಸ್ಥಿತಿ ಗಂಭೀರವಾಗಿದ್ದು, ಡಯಾಲಿಸಿಸ್ ಕೂಡ ಮಾಡಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಹಳೇ ಸಂಜೂ ಹೊಸ ಗೀತಾ: ರೊಮ್ಯಾಂಟಿಕ್ ಮೂಡ್‌ನಲ್ಲಿ ಕಿಟ್ಟಿ- ರಚ್ಚು ಡಾನ್ಸ್ !

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more