ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

Published : Sep 24, 2023, 11:04 AM IST

ತಂತ್ರಜ್ಞಾನವು ಅಭಿವೃದ್ಧಿ ಹೊಂದುತ್ತಿರೋದ್ರ ಜತೆಗೆ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ.  ಮೊಬೈಲ್ ಒಟಿಪಿಯಲ್ಲಿ ಇಷ್ಟು ದಿನ ವಂಚಿಸುತ್ತಿದ್ದ ಸೈಬರ್ ವಂಚಕರು ಇದೀಗ ಖತರ್ನಾಕ್ ಪ್ಲ್ಯಾನ್ ಮಾಡಿ ವಂಚನೆ ಹಾದಿಯನ್ನೇ ಬದಲಾಯಿಸಿದ್ದಾರೆ. 
 

ಹಲವಾರು ಕಾರಣಗಳನ್ನ ಹೇಳಿ ಮೊಬೈಲ್‌ಗೆ ಕಾಲ್ ಮಾಡಿ ಒಟಿಪಿ ಪಡೆದು ಹಣ ಲಪಟಾಯಿಸಿದ ಅದೆಷ್ಟೋ ಘಟನೆ ನಮ್ಮ ಕಣ್ಣ ಮುಂದಿದೆ. ಆದ್ರೆ ಇಲ್ಲಿ ಫೋನ್ ಬರೋದಿಲ್ಲ. ಇಲ್ಲಿ ಕೇವಲ ಬಯೋ ಮೆಟ್ರಿಕ್ ಥಂಬ್(Biometric Thumb) ನೀಡಿದ್ರೆ ಸಾಕು ನಿಮ್ಮ ಖಾತೆಯ ಹಣ ಢಮಾರ್ ಆಗೊತ್ತೆ ಹುಷಾರ್. ಅದೂ ಸರ್ಕಾರಿ ಕಚೇರಿಯಲ್ಲೇ ಈ ರೀತಿ ನಡೀತಾ ಇರೋದು ವಿಪರ್ಯಾಸ. ಅಕ್ಟೋಬರ್ 1 ರಿಂದ ಆಸ್ತಿ ನೋಂದಣಿ ಶುಲ್ಕ ಏರಿಕೆ ಆಗ್ತಿರೋದ್ರಿಂದ ಜನರು ಮುಗಿಬಿದ್ದು ಆಸ್ತಿ ನೊಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಖದೀಮರೂ ಕೂಡ ಫುಲ್ ಆ್ಯಕ್ಟೀವ್ ಆಗಿದ್ದು ಸರ್ಕಾರದ ಕಚೇರಿಯನ್ನೇ ಬಳಸಿಕೊಂಡಿದ್ದಾರೆ. ಆಸ್ತಿ ನೋಂದಣಿಗೆ ಆಧಾರ್ ಪಡೆಯಲು ರಿಜಿಸ್ಟ್ರಾರ್ ಕಚೇರಿಯಲ್ಲಿ 2 ಸಾಫ್ಟ್ವೇರ್ಗೆ(Kaveri 2 software) ಥಂಬ್ ನೀಡಬೇಕಾಗುತ್ತದೆ. ಹೀಗೇ ಬೆರಳಚ್ಚು ನೀಡಿದ ಬಳಿಕ ಕಂಪ್ಯೂಟರ್ನಲ್ಲಿ ಆಧಾರ್ ದಾಖಲೆಗಳು ಪಡೆದು ರಿಜಿಸ್ಟ್ರೇಷನ್ ಪ್ರೊಸೆಸ್ ಮುಂದುವರೆಯುತ್ತದೆ. ಆದರೆ ಮಂಗಳೂರಿನ(Mangaluru) ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೀಗೇ ಬೆರಳಚ್ಚು ನೀಡಿದ ಹಲವು ಜನರ ಖಾತೆಯಿಂದ ಲಕ್ಷ, ಲಕ್ಷ ಹಣ ವರ್ಗಾವಣೆ ಆಗಿದ್ದು ಜನರು ಕಂಗಾಲಾಗಿದ್ದಾರೆ.

ಇನ್ನ ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿದ್ದು, ಪೊಲೀಸರು ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ(sub registrar office) ಪರಿಶೀಲನೆ ನಡೆಸಿದ್ದಾರೆ. ಆದರೆ ಕಾವೇರಿ 2 ಸಾಫ್ಟ್ವೇರ್ನ ಎಲ್ಲಾ ಕಂಟ್ರೋಲ್ ಬೆಂಗಳೂರಿನಲ್ಲಿ ಇರೋ ಕಾರಣ ಪೊಲೀಸರಿಗೆ ಇಲ್ಲಿವರೆಗೂ ಏನೂ ಕ್ಲೂ ಸಿಕ್ಕಿಲ್ಲ. ಕಾವೇರಿ 2 ಸಾಫ್ಟ್ವೇರ್ ತರಾತುರಿಯಲ್ಲಿ ಜಾರಿಗೊಳಿಸಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ ಅಂತ ಹೇಳಲಾಗ್ತಿದೆ. ಸೈಬರ್ ವಂಚಕರು ಆಧಾರ್ ಸಕ್ರಿಯಗೊಳಿಸಿ ಪಾವತಿ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸುತ್ತಿರುವ ದೂರುಗಳು ಹೆಚ್ಚಾಗಿವೆ. ಸೈಬರ್ ವಂಚಕರು ತಮ್ಮ ವಂಚನಾ ಜಾಲಕ್ಕೆ ಹೊಸಹೊಸ ತಂತ್ರಗಾರಿಕೆ ಬಳಸುತ್ತಿದ್ದು, ಒಟಿಪಿ, ಸಿವಿವಿ, ಬ್ಯಾಂಕ್ ವಿವರ ಬೇಕಾಗಿಲ್ಲ. ಯಾವುದೇ ಪ್ರಕ್ರಿಯೆಗೆ ಫಿಂಗರ್ ಪ್ರಿಂಟ್ ನೀಡಿದರೆ ಅನಧಿಕೃತ ಬಯೋ ಮೆಟ್ರಿಕ್ ಸಾಧನ ಬಳಸಿ ಖಾತೆಗಳಿಂದ ಗರಿಷ್ಠ 10 ಸಾವಿರ ರೂ. ದೋಚುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಭಿಮಾನಿಗಳಿಗೋಸ್ಕರ ಕುಣಿದು ಕುಪ್ಪಳಿಸಿದ ರಾಜ್‌ಕುಮಾರನ ಕುವರ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more