ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

Published : Sep 24, 2023, 11:04 AM IST

ತಂತ್ರಜ್ಞಾನವು ಅಭಿವೃದ್ಧಿ ಹೊಂದುತ್ತಿರೋದ್ರ ಜತೆಗೆ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ.  ಮೊಬೈಲ್ ಒಟಿಪಿಯಲ್ಲಿ ಇಷ್ಟು ದಿನ ವಂಚಿಸುತ್ತಿದ್ದ ಸೈಬರ್ ವಂಚಕರು ಇದೀಗ ಖತರ್ನಾಕ್ ಪ್ಲ್ಯಾನ್ ಮಾಡಿ ವಂಚನೆ ಹಾದಿಯನ್ನೇ ಬದಲಾಯಿಸಿದ್ದಾರೆ. 
 

ಹಲವಾರು ಕಾರಣಗಳನ್ನ ಹೇಳಿ ಮೊಬೈಲ್‌ಗೆ ಕಾಲ್ ಮಾಡಿ ಒಟಿಪಿ ಪಡೆದು ಹಣ ಲಪಟಾಯಿಸಿದ ಅದೆಷ್ಟೋ ಘಟನೆ ನಮ್ಮ ಕಣ್ಣ ಮುಂದಿದೆ. ಆದ್ರೆ ಇಲ್ಲಿ ಫೋನ್ ಬರೋದಿಲ್ಲ. ಇಲ್ಲಿ ಕೇವಲ ಬಯೋ ಮೆಟ್ರಿಕ್ ಥಂಬ್(Biometric Thumb) ನೀಡಿದ್ರೆ ಸಾಕು ನಿಮ್ಮ ಖಾತೆಯ ಹಣ ಢಮಾರ್ ಆಗೊತ್ತೆ ಹುಷಾರ್. ಅದೂ ಸರ್ಕಾರಿ ಕಚೇರಿಯಲ್ಲೇ ಈ ರೀತಿ ನಡೀತಾ ಇರೋದು ವಿಪರ್ಯಾಸ. ಅಕ್ಟೋಬರ್ 1 ರಿಂದ ಆಸ್ತಿ ನೋಂದಣಿ ಶುಲ್ಕ ಏರಿಕೆ ಆಗ್ತಿರೋದ್ರಿಂದ ಜನರು ಮುಗಿಬಿದ್ದು ಆಸ್ತಿ ನೊಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಖದೀಮರೂ ಕೂಡ ಫುಲ್ ಆ್ಯಕ್ಟೀವ್ ಆಗಿದ್ದು ಸರ್ಕಾರದ ಕಚೇರಿಯನ್ನೇ ಬಳಸಿಕೊಂಡಿದ್ದಾರೆ. ಆಸ್ತಿ ನೋಂದಣಿಗೆ ಆಧಾರ್ ಪಡೆಯಲು ರಿಜಿಸ್ಟ್ರಾರ್ ಕಚೇರಿಯಲ್ಲಿ 2 ಸಾಫ್ಟ್ವೇರ್ಗೆ(Kaveri 2 software) ಥಂಬ್ ನೀಡಬೇಕಾಗುತ್ತದೆ. ಹೀಗೇ ಬೆರಳಚ್ಚು ನೀಡಿದ ಬಳಿಕ ಕಂಪ್ಯೂಟರ್ನಲ್ಲಿ ಆಧಾರ್ ದಾಖಲೆಗಳು ಪಡೆದು ರಿಜಿಸ್ಟ್ರೇಷನ್ ಪ್ರೊಸೆಸ್ ಮುಂದುವರೆಯುತ್ತದೆ. ಆದರೆ ಮಂಗಳೂರಿನ(Mangaluru) ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೀಗೇ ಬೆರಳಚ್ಚು ನೀಡಿದ ಹಲವು ಜನರ ಖಾತೆಯಿಂದ ಲಕ್ಷ, ಲಕ್ಷ ಹಣ ವರ್ಗಾವಣೆ ಆಗಿದ್ದು ಜನರು ಕಂಗಾಲಾಗಿದ್ದಾರೆ.

ಇನ್ನ ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿದ್ದು, ಪೊಲೀಸರು ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ(sub registrar office) ಪರಿಶೀಲನೆ ನಡೆಸಿದ್ದಾರೆ. ಆದರೆ ಕಾವೇರಿ 2 ಸಾಫ್ಟ್ವೇರ್ನ ಎಲ್ಲಾ ಕಂಟ್ರೋಲ್ ಬೆಂಗಳೂರಿನಲ್ಲಿ ಇರೋ ಕಾರಣ ಪೊಲೀಸರಿಗೆ ಇಲ್ಲಿವರೆಗೂ ಏನೂ ಕ್ಲೂ ಸಿಕ್ಕಿಲ್ಲ. ಕಾವೇರಿ 2 ಸಾಫ್ಟ್ವೇರ್ ತರಾತುರಿಯಲ್ಲಿ ಜಾರಿಗೊಳಿಸಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ ಅಂತ ಹೇಳಲಾಗ್ತಿದೆ. ಸೈಬರ್ ವಂಚಕರು ಆಧಾರ್ ಸಕ್ರಿಯಗೊಳಿಸಿ ಪಾವತಿ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸುತ್ತಿರುವ ದೂರುಗಳು ಹೆಚ್ಚಾಗಿವೆ. ಸೈಬರ್ ವಂಚಕರು ತಮ್ಮ ವಂಚನಾ ಜಾಲಕ್ಕೆ ಹೊಸಹೊಸ ತಂತ್ರಗಾರಿಕೆ ಬಳಸುತ್ತಿದ್ದು, ಒಟಿಪಿ, ಸಿವಿವಿ, ಬ್ಯಾಂಕ್ ವಿವರ ಬೇಕಾಗಿಲ್ಲ. ಯಾವುದೇ ಪ್ರಕ್ರಿಯೆಗೆ ಫಿಂಗರ್ ಪ್ರಿಂಟ್ ನೀಡಿದರೆ ಅನಧಿಕೃತ ಬಯೋ ಮೆಟ್ರಿಕ್ ಸಾಧನ ಬಳಸಿ ಖಾತೆಗಳಿಂದ ಗರಿಷ್ಠ 10 ಸಾವಿರ ರೂ. ದೋಚುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಭಿಮಾನಿಗಳಿಗೋಸ್ಕರ ಕುಣಿದು ಕುಪ್ಪಳಿಸಿದ ರಾಜ್‌ಕುಮಾರನ ಕುವರ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more