ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

Published : Sep 24, 2023, 11:04 AM IST

ತಂತ್ರಜ್ಞಾನವು ಅಭಿವೃದ್ಧಿ ಹೊಂದುತ್ತಿರೋದ್ರ ಜತೆಗೆ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ.  ಮೊಬೈಲ್ ಒಟಿಪಿಯಲ್ಲಿ ಇಷ್ಟು ದಿನ ವಂಚಿಸುತ್ತಿದ್ದ ಸೈಬರ್ ವಂಚಕರು ಇದೀಗ ಖತರ್ನಾಕ್ ಪ್ಲ್ಯಾನ್ ಮಾಡಿ ವಂಚನೆ ಹಾದಿಯನ್ನೇ ಬದಲಾಯಿಸಿದ್ದಾರೆ. 
 

ಹಲವಾರು ಕಾರಣಗಳನ್ನ ಹೇಳಿ ಮೊಬೈಲ್‌ಗೆ ಕಾಲ್ ಮಾಡಿ ಒಟಿಪಿ ಪಡೆದು ಹಣ ಲಪಟಾಯಿಸಿದ ಅದೆಷ್ಟೋ ಘಟನೆ ನಮ್ಮ ಕಣ್ಣ ಮುಂದಿದೆ. ಆದ್ರೆ ಇಲ್ಲಿ ಫೋನ್ ಬರೋದಿಲ್ಲ. ಇಲ್ಲಿ ಕೇವಲ ಬಯೋ ಮೆಟ್ರಿಕ್ ಥಂಬ್(Biometric Thumb) ನೀಡಿದ್ರೆ ಸಾಕು ನಿಮ್ಮ ಖಾತೆಯ ಹಣ ಢಮಾರ್ ಆಗೊತ್ತೆ ಹುಷಾರ್. ಅದೂ ಸರ್ಕಾರಿ ಕಚೇರಿಯಲ್ಲೇ ಈ ರೀತಿ ನಡೀತಾ ಇರೋದು ವಿಪರ್ಯಾಸ. ಅಕ್ಟೋಬರ್ 1 ರಿಂದ ಆಸ್ತಿ ನೋಂದಣಿ ಶುಲ್ಕ ಏರಿಕೆ ಆಗ್ತಿರೋದ್ರಿಂದ ಜನರು ಮುಗಿಬಿದ್ದು ಆಸ್ತಿ ನೊಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಖದೀಮರೂ ಕೂಡ ಫುಲ್ ಆ್ಯಕ್ಟೀವ್ ಆಗಿದ್ದು ಸರ್ಕಾರದ ಕಚೇರಿಯನ್ನೇ ಬಳಸಿಕೊಂಡಿದ್ದಾರೆ. ಆಸ್ತಿ ನೋಂದಣಿಗೆ ಆಧಾರ್ ಪಡೆಯಲು ರಿಜಿಸ್ಟ್ರಾರ್ ಕಚೇರಿಯಲ್ಲಿ 2 ಸಾಫ್ಟ್ವೇರ್ಗೆ(Kaveri 2 software) ಥಂಬ್ ನೀಡಬೇಕಾಗುತ್ತದೆ. ಹೀಗೇ ಬೆರಳಚ್ಚು ನೀಡಿದ ಬಳಿಕ ಕಂಪ್ಯೂಟರ್ನಲ್ಲಿ ಆಧಾರ್ ದಾಖಲೆಗಳು ಪಡೆದು ರಿಜಿಸ್ಟ್ರೇಷನ್ ಪ್ರೊಸೆಸ್ ಮುಂದುವರೆಯುತ್ತದೆ. ಆದರೆ ಮಂಗಳೂರಿನ(Mangaluru) ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೀಗೇ ಬೆರಳಚ್ಚು ನೀಡಿದ ಹಲವು ಜನರ ಖಾತೆಯಿಂದ ಲಕ್ಷ, ಲಕ್ಷ ಹಣ ವರ್ಗಾವಣೆ ಆಗಿದ್ದು ಜನರು ಕಂಗಾಲಾಗಿದ್ದಾರೆ.

ಇನ್ನ ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿದ್ದು, ಪೊಲೀಸರು ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ(sub registrar office) ಪರಿಶೀಲನೆ ನಡೆಸಿದ್ದಾರೆ. ಆದರೆ ಕಾವೇರಿ 2 ಸಾಫ್ಟ್ವೇರ್ನ ಎಲ್ಲಾ ಕಂಟ್ರೋಲ್ ಬೆಂಗಳೂರಿನಲ್ಲಿ ಇರೋ ಕಾರಣ ಪೊಲೀಸರಿಗೆ ಇಲ್ಲಿವರೆಗೂ ಏನೂ ಕ್ಲೂ ಸಿಕ್ಕಿಲ್ಲ. ಕಾವೇರಿ 2 ಸಾಫ್ಟ್ವೇರ್ ತರಾತುರಿಯಲ್ಲಿ ಜಾರಿಗೊಳಿಸಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ ಅಂತ ಹೇಳಲಾಗ್ತಿದೆ. ಸೈಬರ್ ವಂಚಕರು ಆಧಾರ್ ಸಕ್ರಿಯಗೊಳಿಸಿ ಪಾವತಿ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸುತ್ತಿರುವ ದೂರುಗಳು ಹೆಚ್ಚಾಗಿವೆ. ಸೈಬರ್ ವಂಚಕರು ತಮ್ಮ ವಂಚನಾ ಜಾಲಕ್ಕೆ ಹೊಸಹೊಸ ತಂತ್ರಗಾರಿಕೆ ಬಳಸುತ್ತಿದ್ದು, ಒಟಿಪಿ, ಸಿವಿವಿ, ಬ್ಯಾಂಕ್ ವಿವರ ಬೇಕಾಗಿಲ್ಲ. ಯಾವುದೇ ಪ್ರಕ್ರಿಯೆಗೆ ಫಿಂಗರ್ ಪ್ರಿಂಟ್ ನೀಡಿದರೆ ಅನಧಿಕೃತ ಬಯೋ ಮೆಟ್ರಿಕ್ ಸಾಧನ ಬಳಸಿ ಖಾತೆಗಳಿಂದ ಗರಿಷ್ಠ 10 ಸಾವಿರ ರೂ. ದೋಚುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಭಿಮಾನಿಗಳಿಗೋಸ್ಕರ ಕುಣಿದು ಕುಪ್ಪಳಿಸಿದ ರಾಜ್‌ಕುಮಾರನ ಕುವರ !

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more