ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

ಆಸ್ತಿ ನೋಂದಣಿ ಮಾಡಿಸೋರೆ ಹುಷಾರ್ ! ಸರ್ಕಾರಿ ಕಚೇರಿಯಲ್ಲೇ ನಿಮ್ಮ ಖಾತೆಗೆ ಬೀಳುತ್ತೆ ಕನ್ನ..!

Published : Sep 24, 2023, 11:04 AM IST

ತಂತ್ರಜ್ಞಾನವು ಅಭಿವೃದ್ಧಿ ಹೊಂದುತ್ತಿರೋದ್ರ ಜತೆಗೆ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ.  ಮೊಬೈಲ್ ಒಟಿಪಿಯಲ್ಲಿ ಇಷ್ಟು ದಿನ ವಂಚಿಸುತ್ತಿದ್ದ ಸೈಬರ್ ವಂಚಕರು ಇದೀಗ ಖತರ್ನಾಕ್ ಪ್ಲ್ಯಾನ್ ಮಾಡಿ ವಂಚನೆ ಹಾದಿಯನ್ನೇ ಬದಲಾಯಿಸಿದ್ದಾರೆ. 
 

ಹಲವಾರು ಕಾರಣಗಳನ್ನ ಹೇಳಿ ಮೊಬೈಲ್‌ಗೆ ಕಾಲ್ ಮಾಡಿ ಒಟಿಪಿ ಪಡೆದು ಹಣ ಲಪಟಾಯಿಸಿದ ಅದೆಷ್ಟೋ ಘಟನೆ ನಮ್ಮ ಕಣ್ಣ ಮುಂದಿದೆ. ಆದ್ರೆ ಇಲ್ಲಿ ಫೋನ್ ಬರೋದಿಲ್ಲ. ಇಲ್ಲಿ ಕೇವಲ ಬಯೋ ಮೆಟ್ರಿಕ್ ಥಂಬ್(Biometric Thumb) ನೀಡಿದ್ರೆ ಸಾಕು ನಿಮ್ಮ ಖಾತೆಯ ಹಣ ಢಮಾರ್ ಆಗೊತ್ತೆ ಹುಷಾರ್. ಅದೂ ಸರ್ಕಾರಿ ಕಚೇರಿಯಲ್ಲೇ ಈ ರೀತಿ ನಡೀತಾ ಇರೋದು ವಿಪರ್ಯಾಸ. ಅಕ್ಟೋಬರ್ 1 ರಿಂದ ಆಸ್ತಿ ನೋಂದಣಿ ಶುಲ್ಕ ಏರಿಕೆ ಆಗ್ತಿರೋದ್ರಿಂದ ಜನರು ಮುಗಿಬಿದ್ದು ಆಸ್ತಿ ನೊಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಖದೀಮರೂ ಕೂಡ ಫುಲ್ ಆ್ಯಕ್ಟೀವ್ ಆಗಿದ್ದು ಸರ್ಕಾರದ ಕಚೇರಿಯನ್ನೇ ಬಳಸಿಕೊಂಡಿದ್ದಾರೆ. ಆಸ್ತಿ ನೋಂದಣಿಗೆ ಆಧಾರ್ ಪಡೆಯಲು ರಿಜಿಸ್ಟ್ರಾರ್ ಕಚೇರಿಯಲ್ಲಿ 2 ಸಾಫ್ಟ್ವೇರ್ಗೆ(Kaveri 2 software) ಥಂಬ್ ನೀಡಬೇಕಾಗುತ್ತದೆ. ಹೀಗೇ ಬೆರಳಚ್ಚು ನೀಡಿದ ಬಳಿಕ ಕಂಪ್ಯೂಟರ್ನಲ್ಲಿ ಆಧಾರ್ ದಾಖಲೆಗಳು ಪಡೆದು ರಿಜಿಸ್ಟ್ರೇಷನ್ ಪ್ರೊಸೆಸ್ ಮುಂದುವರೆಯುತ್ತದೆ. ಆದರೆ ಮಂಗಳೂರಿನ(Mangaluru) ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೀಗೇ ಬೆರಳಚ್ಚು ನೀಡಿದ ಹಲವು ಜನರ ಖಾತೆಯಿಂದ ಲಕ್ಷ, ಲಕ್ಷ ಹಣ ವರ್ಗಾವಣೆ ಆಗಿದ್ದು ಜನರು ಕಂಗಾಲಾಗಿದ್ದಾರೆ.

ಇನ್ನ ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿದ್ದು, ಪೊಲೀಸರು ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ(sub registrar office) ಪರಿಶೀಲನೆ ನಡೆಸಿದ್ದಾರೆ. ಆದರೆ ಕಾವೇರಿ 2 ಸಾಫ್ಟ್ವೇರ್ನ ಎಲ್ಲಾ ಕಂಟ್ರೋಲ್ ಬೆಂಗಳೂರಿನಲ್ಲಿ ಇರೋ ಕಾರಣ ಪೊಲೀಸರಿಗೆ ಇಲ್ಲಿವರೆಗೂ ಏನೂ ಕ್ಲೂ ಸಿಕ್ಕಿಲ್ಲ. ಕಾವೇರಿ 2 ಸಾಫ್ಟ್ವೇರ್ ತರಾತುರಿಯಲ್ಲಿ ಜಾರಿಗೊಳಿಸಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ ಅಂತ ಹೇಳಲಾಗ್ತಿದೆ. ಸೈಬರ್ ವಂಚಕರು ಆಧಾರ್ ಸಕ್ರಿಯಗೊಳಿಸಿ ಪಾವತಿ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಣ ಲಪಟಾಯಿಸುತ್ತಿರುವ ದೂರುಗಳು ಹೆಚ್ಚಾಗಿವೆ. ಸೈಬರ್ ವಂಚಕರು ತಮ್ಮ ವಂಚನಾ ಜಾಲಕ್ಕೆ ಹೊಸಹೊಸ ತಂತ್ರಗಾರಿಕೆ ಬಳಸುತ್ತಿದ್ದು, ಒಟಿಪಿ, ಸಿವಿವಿ, ಬ್ಯಾಂಕ್ ವಿವರ ಬೇಕಾಗಿಲ್ಲ. ಯಾವುದೇ ಪ್ರಕ್ರಿಯೆಗೆ ಫಿಂಗರ್ ಪ್ರಿಂಟ್ ನೀಡಿದರೆ ಅನಧಿಕೃತ ಬಯೋ ಮೆಟ್ರಿಕ್ ಸಾಧನ ಬಳಸಿ ಖಾತೆಗಳಿಂದ ಗರಿಷ್ಠ 10 ಸಾವಿರ ರೂ. ದೋಚುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಅಭಿಮಾನಿಗಳಿಗೋಸ್ಕರ ಕುಣಿದು ಕುಪ್ಪಳಿಸಿದ ರಾಜ್‌ಕುಮಾರನ ಕುವರ !

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more