ಸಚಿವ ಜಮೀರ್‌ಗೆ ಶುರುವಾಯ್ತು ಅಕ್ರಮ ಆಸ್ತಿ ಸಂಕಷ್ಟ: ಎಫ್ಐಆರ್ ರದ್ದಿಗೆ ಹೈಕೋರ್ಟ್ ನಿರಾಕರಣೆ

ಸಚಿವ ಜಮೀರ್‌ಗೆ ಶುರುವಾಯ್ತು ಅಕ್ರಮ ಆಸ್ತಿ ಸಂಕಷ್ಟ: ಎಫ್ಐಆರ್ ರದ್ದಿಗೆ ಹೈಕೋರ್ಟ್ ನಿರಾಕರಣೆ

Published : Nov 20, 2023, 10:44 AM ISTUpdated : Nov 20, 2023, 10:46 AM IST

ಕಾಂಗ್ರೆಸ್‌ನ ಮತ್ತೊಬ್ಬ ಸಚಿವನಿಗೆ ಅಕ್ರಮ ಆಸ್ತಿ ಸಂಕಷ್ಟ ಎದುರಾಗಿದೆ. ಜಮೀರ್‌ ಲೋಕಾಯುಕ್ತದಲ್ಲಿ ದಾಖಲಾಗಿದ್ದ FIR ರದ್ದು ಮಾಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಎರಡು ಕಡೆ ವಾದ ಆಲಿಸಿದ ಹೈಕೋರ್ಟ್ ಎಫ್ಐಆರ್ ರದ್ದು ಮಾಡಲು ನಿರಾಕರಿಸಿದ್ದು, ಜಮೀರ್ ಅಹಮ್ಮದ್‌ಗೆ ಸಂಕಷ್ಟ ಶುರುವಾಗಿದೆ.
 

ಕಾಂಗ್ರೆಸ್ ಸಚಿವ ಜಮೀರ್ ಅಹಮ್ಮದ್‌ಗೆ(Zameer Ahmed Khan) ಸಂಕಷ್ಟ ಶುರುವಾಗಿದೆ. ಅಕ್ರಮ ಆಸ್ತಿಗಳಿಕೆಯೇ ಕುತ್ತು ತಂದಿದೆ. 2022ರ ಫೆಬ್ರವರಿಯಲ್ಲಿ ACB ಅಧಿಕಾರಿಗಳು ಜಮೀರ್ ಮನೆ ದಾಳಿ(Raid) ನಡೆಸಿದ್ರು. ಈ ವೇಳೆ 80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಅಂತಾ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿತ್ತು. ACB ಅಧಿಕಾರಿಗಳೇ ಜಮೀರ್ ವಿರುದ್ಧ FIR ದಾಖಲಿಸಿದ್ರು. ಎಫ್ಐಆರ್ ರದ್ದು ಕೋರಿ ಜಮೀರ್ ಹೈಕೋರ್ಟ್(Highcourt) ಮೆಟ್ಟಿಲೇರಿದ್ದರು.  ಪ್ರಾಥಮಿಕ ತನಿಖೆಯನ್ನೇ ಮಾಡದೆ ಜಮೀರ್ ಮೇಲೆ FIR ದಾಖಲಿಸಿದ್ದಾಗಿ ವಾದಿಸಿದ ಜಮೀರ್ ಪರ ವಕೀಲರು, ಎಫ್ಐಆರ್ ರದ್ದು ಮಾಡುವಂತೆ ಮನವಿ ಮಾಡಿದ್ರು. ಇದಕ್ಕೆ ಲೋಕಾಯುಕ್ತ ಪರ ವಕೀಲರು ಪ್ರತಿವಾದ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠ ಜಮೀರ್  ಅರ್ಜಿಯನ್ನು  ವಜಾಗೊಳಿಸಿದ್ದು, ಸಚಿವರಿಗೆ ಸಂಕಷ್ಟ ತಂದಿಟ್ಟಿದೆ.

IMA ವಂಚನೆ ಕೇಸ್‌ ತನಿಖೆ ಮಾಡಿದ್ದ ED ಅಧಿಕಾರಿಗಳು..ಮನ್ಸೂರ್‌ಖಾನ್‌ನಿಂದ ಜಮೀರ್ 9.38 ಕೋಟಿ ಹಣ ಪಡೆದಿದ್ದಾರೆ ಅನ್ನೋ ವಿಷಯ ಬಯಲಾಗಿತ್ತು. ಬಳಿಕ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜನಪ್ರತಿನಿಧಿ ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಿದ್ರು. ನಂತ್ರ ಜಮೀರ್ ಶಾಸಕರಾಗಿದ್ರಿಂದ ಕೇಸ್‌ನ್ನು ACBಗೆ ವರ್ಗಾವಣೆ ಮಾಡಲಾಗಿತ್ತು..ಫೆಬ್ರವರಿಯಲ್ಲಿ ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳು ಜಮೀರ್ ಮನೆ ಮೇಲೆ ದಾಳಿ ಮಾಡಿದ್ರು. ಈ ವೇಳೆ 80.44 ಕೋಟಿ ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿರೋದು ಬೆಳಕಿಗೆ ಬಂದಿತ್ತು. ಬಳಿಕ 2022ರ ಮೇ ತಿಂಗಳಲ್ಲಿ ACB ಟೀಂ FIR ದಾಖಲಿಸಿದ್ರು.ನಂತ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ACB ರದ್ದುಮಾಡಿ ಲೋಕಾಯುಕ್ತ ನೇಮಕವಾಗಿತ್ತು..ಇಲ್ಲಿಗೆ ಕೇಸ್ ಕೂಡ ವರ್ಗಾವಣೆ ಆಗಿತ್ತು. ಹೈಕೋರ್ಟ್ ಅರ್ಜಿ ವಜಾಗೊಳಿಸಿದ್ರಿಂದ ಜಮೀರ್ ಲೋಕಾಯುಕ್ತ ತನಿಖೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇದನ್ನೂ ವೀಕ್ಷಿಸಿ:  ಅಧಿಕಾರಿಗಳ ನಿರ್ಲಕ್ಷ್ಯ..ಅರ್ಧಕ್ಕೆ ನಿಂತ ಮನೆ ಕಾಮಗಾರಿ: ಗುಡಿಸಲುಗಳಲ್ಲೇ ದಿನದೂಡುತ್ತಿರುವ ಆದಿವಾಸಿ ಕುಟುಂಬ

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more