ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

ಸಿಲಿಕಾನ್‌ ಸಿಟಿಯಲ್ಲಿ ಹನಿಟ್ರ್ಯಾಪ್‌ ದಂಧೆ: ಟೆಲಿಗ್ರಾಂ ಮೂಲಕ ಯುವಕರಿಗೆ ಖೆಡ್ಡಾ..!

Published : Aug 01, 2023, 10:55 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ಹನಿಟ್ರಾಪ್ ದಂಧೆ ಶುರುವಾಗಿದೆ. ಟೆಲಿಗ್ರಾಂ ಮೂಲಕ ಯುವಕರನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ, ಹುಡುಗಿ ಮತ್ತು ಆಕೆಯ ಗ್ಯಾಂಗ್‌ನನ್ನು ಪುಟ್ಟೇನಹಳ್ಳಿ ಪೊಲೀಸರ ಬಂಧಿಸಿದ್ದಾರೆ.

ಸೌಂದರ್ಯವನ್ನೇ ಬಂಡವಾಳ ಮಾಡ್ಕೊಳ್ಳೋ ಕೆಲವರು ಹೇಗೆಲ್ಲಾ ಬೆದರಿಕೆ ಹಾಕಿ ಹಣ ಮಾಡ್ತಿದ್ದಾರೆ ಅನ್ನೋದಕ್ಕೆ ಈ ಸ್ಟೋರಿ ತಾಜಾ ಉದಾಹರಣೆಯಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರ ಬಲೆಗೆ ಹನಿಗ್ಯಾಂಗ್(Honey gang) ಬಿದ್ದಿದೆ. ಇಂಥದೊಂದು ಶಾಕಿಂಗ್ ಘಟನೆ ವರದಿಯಾಗಿರೋದು ಬೆಂಗಳೂರಿನ(Bengaluru) ಪುಟ್ಟೇನಹಳ್ಳಿಯಲ್ಲಿ. ಇಲ್ಲಿನ ವಿನಾಯಕ ನಗರದ ಮನೆಯೊಂದರಲ್ಲಿ ನದೀಮ್, ಅಬ್ದುಲ್ ಖಾದರ್, ಶರಣಪ್ರಕಾಶ್ ಬಳಿಗೇರ, ಎಂಬುವವರು ಮುಂಬಯಿ ಮೂಲದ ಮಾಡಲ್ ಒಬ್ಬಳ ಪೋಟೋ ಇರುವ ಡಿಪಿ ಬಳಸಿ ಟೆಲಿಗ್ರಾಂನಲ್ಲಿ(Telegram) ಚಾಟ್ ಶುರು ಮಾಡ್ತಾರೆ. ನನ್ನ ಗಂಡ ದುಬೈನಲ್ಲಿದ್ದಾನೆ. ನಾನು ಒಬ್ಬಳೇ ಮನೆಯಲ್ಲಿ ಇದೀನಿ ಅಂತಾ ಯುವಕರನ್ನು(Youths) ಖೆಡ್ಡಾಗೆ  ಬೀಳಿಸ್ತಾರೆ. ಯಾವಾಗ ಬಕ್ರ ಬೋನಿಗೆ ಬಿತ್ತು ಅಂತಾ ಗೊತ್ತಾಗುತ್ತೋ, ಆಗ ಮುಂಬಯಿನಿಂದ ಮಾಡಲ್ ಮೆಹರ್ ಅಲಿಯಾಸ್ ನೇಹಾ ಬೆಂಗಳೂರಿಗೆ ಎಂಟ್ರಿ ಕೊಡ್ತಾಳೆ. ಈ ಬೆಡಗಿ ಮೋಹಕ್ಕೆ ಸಿಲುಕಿದ ವ್ಯಕ್ತಿ ಮನೆಯೊಳಗೆ ಬಂದ ಕೆಲವೇ ನಿಮಿಷಗಳಲ್ಲಿ ಮೂವರು ಪುರುಷರ ಗ್ಯಾಂಗ್ ಕೂಡ ರೂಮ್ ಒಳಗೆ ಎಂಟ್ರಿಯಾಗ್ತಾರೆ. ಏಕಾಏಕಿ ಆ ವ್ಯಕ್ತಿಯನ್ನು ಬೆದರಿಸ್ತಾರೆ. ಅದೇ ಯುವತಿಯ ಜೊತೆಗೆ ಬೆತ್ತಲೆಯಾಗಿ ನಿಲ್ಲಿಸಿ ಪೋಟೋಸ್ ತಗೋತಾರೆ.  ಚಿನ್ನಾಭರಣ, ಮೊಬೈಲ್, ಪರ್ಸ್ ಎಲ್ಲಾ‌ ಕಸಿದುಕೊಂಡು ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡ್ತಾರೆ. ಒಂದು ವೇಳೆ ಯುವಕನ ಬಳಿ ಹಣವಿಲ್ಲಾ ಅಂತಾ ಗೊತ್ತಾದ್ರೆ, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡುತ್ತಾರೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ರಾಜ್ಯದಲ್ಲಿ ದುನಿಯಾ ಮತ್ತಷ್ಟು ದುಬಾರಿ: ಹಾಲು, ಹೋಟೆಲ್ ಶಾಕ್..ಹೆದ್ದಾರಿಗೆ ಹೊಸ ರೂಲ್ಸ್

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more