ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

Published : Jun 24, 2023, 12:36 PM IST

ಹೆಂಡತಿಯ ಮೇಲೆ ಅನುಮಾನ ಪಟ್ಟ ಗಂಡನೊಬ್ಬ ನಡುರಸ್ತೆಯಲ್ಲೇ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಗಂಡನ ಕುಡಿತ ಬಿಡಿಸಲು ಹೋಗಿ ಹೆಂಡತಿ ಚಾಕು ಇರಿತಕ್ಕೆ ಒಳಗಾದ ಅಮಾನವೀಯ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ. ಇಬ್ಬರು ಪ್ರೀತಿಸಿ ಮದುವೆಯಾಗಿದ್ದು, ದಿವಾಕರ್‌ ಕುಡಿತ ಬಿಡಿಸಲು ಆಕೆ ಆತನನ್ನು ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದರು. ಅಲ್ಲಿಂದ ಬಂದ ಬಳಿಕ ಪತಿರಾಯ ನಡುರಸ್ತೆಯಲ್ಲೇ ನಿಖಿತಾಗೆ ಚಾಕುವಿನಿಂದ ಐದು ಬಾರಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ. ದಿವಾಕರ್‌ ಈ ಕೃತ್ಯಕ್ಕೆ ಆತನ ಸ್ನೇಹಿತನ ಸಹಾಯ ಸಹ ಸಿಕ್ಕಿದೆ. ಪತ್ನಿಯ ಮೇಲೆ ಅನುಮಾನ ಪಟ್ಟಿದ್ದ ಗಂಡ ಕೊಲೆ ಮಾಡಲು ನಿರ್ಧರಿಸಿ, ದಾರಿಯಲ್ಲಿ ಅಪಘಾತ ಮಾಡುವ ರೀತಿ ಮಾಡುತ್ತಾರೆ. ಆಕೆ ಬಿದ್ದ ನಂತರ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಸದ್ಯ ಇಬ್ಬರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ವೀಕ್ಷಿಸಿ: Adipurush: ಆದಿಪುರುಷ್ ಟಿಕೆಟ್ ಬೆಲೆಯಲ್ಲಿ ಇಳಿಕೆ: ಆದ್ರೂ ಸಿನಿಮಾ ನೋಡಲು ಬಾರದ ಜನ!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more