ಅಕ್ರಮ ಮರಳು ದಂಧೆ ಹಿಂದಿರೋದು ಯಾರು? ರಾತ್ರಿಯಾದ್ರೆ ಜೆಸಿಬಿ,ಟ್ರ್ಯಾಕ್ಟರ್, ಲಾರಿಗಳದ್ದೇ ಸದ್ದು..!

ಅಕ್ರಮ ಮರಳು ದಂಧೆ ಹಿಂದಿರೋದು ಯಾರು? ರಾತ್ರಿಯಾದ್ರೆ ಜೆಸಿಬಿ,ಟ್ರ್ಯಾಕ್ಟರ್, ಲಾರಿಗಳದ್ದೇ ಸದ್ದು..!

Published : May 29, 2024, 02:15 PM ISTUpdated : May 29, 2024, 02:16 PM IST

ಭೀಮಾತೀರದಲ್ಲಿ ಅಕ್ರಮ ಮರಳು ದಂಧೆ ಮತ್ತೆ ಶುರುವಾಗಿದೆ. ವಿಜಯಪುರದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಇದನ್ನು ಪ್ರಶ್ನೆ ಮಾಡಿದ ಪತ್ರಕರ್ತರಿನಿಗೆ ಪೊಲೀಸರು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. 
 

ಭೀಮಾತೀರದಲ್ಲಿ (Bheemateera) ಅಕ್ರಮ ಮರಳು ದಂಧೆ (Illegal sand mining) ಮತ್ತೆ ಶುರುವಾಗಿದೆ. ವಿಜಯಪುರದಲ್ಲಿ(Vijayapura) ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ರಾತ್ರಿಯಾದರೇ ಜೆಸಿಬಿ, ಟ್ರಾಕ್ಟರ್, ಲಾರಿಗಳ ಸದ್ದು ಜೋರಾಗಿದೆ. ಸಿಂದಗಿಯ ಭೀಮಾತೀರದ ಬಗಲೂರು, ಶಂಬೆವಾಡ, ಶಿರಸಗಿ ಸುತ್ತಮುತ್ತ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ ಈ ಅಕ್ರಮ ಕಣ್ಣೆದುರಿಗೇ ನಡೆಯುತ್ತಿದ್ರೂ ಪೊಲೀಸರು ಸುಮ್ಮನೆ ಕೂತಿದ್ದಾರೆ ಎನ್ನಲಾಗಿದೆ.

ರಾತ್ರಿ 10 ಗಂಟೆಗೆ ಈ ಅಕ್ರಮ ಮರಳು ದಂಧೆ ಶುರುವಾಗುತ್ತದೆ. ಬೆಳಗ್ಗಿನ ಜಾವ 5 ಗಂಟೆ ವರೆಗೂ ಮರಳು ಸಾಗಾಟ ಪ್ರಕ್ರಿಯೆ ನಡೆಯಲಿದ್ದು, ಬಗಲೂರು, ಶಂಬೆವಾಡಿ, ಶಿರಸಗಿ ಗ್ರಾಮಸ್ಥರುಈ ದಂಧೆಯಿಂದ ಬೇಸತ್ತಿದ್ದಾರೆ. ಇನ್ನು ಈ ಅಕ್ರಮ ಮರಳು ದಂಧೆ ಹಿಂದಿರೋದು ಯಾರು?, ಅಕ್ರಮಕ್ಕೆ‌ ಕುಮ್ಮಕ್ಕು ಕೊಡ್ತಿರೋದು ಯಾರು? ಅನ್ನೋ ಪ್ರಶ್ನೆ ಮಾಡಿದ್ರೆ  ಸಿಂದಗಿ ಪೊಲೀಸರದ್ದೇ ಶ್ರೀರಕ್ಷೆ ಎಂದು ಆರೋಪ ಮಾಡಲಾಗುತ್ತಿದೆ. ಯಾಕೆಂದರೆ ಈ ಅಕ್ರಮ ದಂಧೆಯ ವರದಿ ಮಾಡಿದ ಪತ್ರಕರ್ತನೇ ಕಿಡ್ನಾಪ್ ಮಾಡಿದ್ದಾರೆ. ಸಿಂದಗಿಯ ಸ್ಥಳೀಯ ಪತ್ರಕರ್ತ ಗುಂಡು ಕುಲಕರ್ಣಿ (Gundu Kulkarni) ಕಿಡ್ನಾಪ್ ಆದವರು.

ಸಿಪಿಐ ನಾನಾಗೌಡ ಪಾಟೀಲ್ (CPI Nanagowda Patil), ಸಿಬ್ಬಂದಿ ಸುರೇಶ್ ಕೊಂಡಿಯಿಂದ ಕಿಡ್ನಾಪ್ ಮಾಡಲಾಗಿದೆ ಎನ್ನಲಾಗಿದ್ದು, ಭೀಮಾತೀರದ ಘತ್ತರಗಿ ಬ್ರಿಡ್ಜ್ ಬಳಿ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಹಣೆಗೆ ಬಂದೂಕಿಟ್ಟು ಸಿಪಿಐ ನಾನಾಗೌಡ ಪಾಟೀಲ್ ಬೆದರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಮಹಾ ಸಂಗ್ರಮದಲ್ಲಿ ಈ ಬಾರಿ ಯಾರಿಗೆ ಗೆಲುವು? ಈ ಪಕ್ಷ ಇಷ್ಟೇ ಸ್ಥಾನ ಗೆಲ್ಲಲಿದೆ ಎಂದ ಸಟ್ಟಾ ಬಜಾರ್!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!