ಅಕ್ರಮ ಮರಳು ದಂಧೆ ಹಿಂದಿರೋದು ಯಾರು? ರಾತ್ರಿಯಾದ್ರೆ ಜೆಸಿಬಿ,ಟ್ರ್ಯಾಕ್ಟರ್, ಲಾರಿಗಳದ್ದೇ ಸದ್ದು..!

ಅಕ್ರಮ ಮರಳು ದಂಧೆ ಹಿಂದಿರೋದು ಯಾರು? ರಾತ್ರಿಯಾದ್ರೆ ಜೆಸಿಬಿ,ಟ್ರ್ಯಾಕ್ಟರ್, ಲಾರಿಗಳದ್ದೇ ಸದ್ದು..!

Published : May 29, 2024, 02:15 PM ISTUpdated : May 29, 2024, 02:16 PM IST

ಭೀಮಾತೀರದಲ್ಲಿ ಅಕ್ರಮ ಮರಳು ದಂಧೆ ಮತ್ತೆ ಶುರುವಾಗಿದೆ. ವಿಜಯಪುರದಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಇದನ್ನು ಪ್ರಶ್ನೆ ಮಾಡಿದ ಪತ್ರಕರ್ತರಿನಿಗೆ ಪೊಲೀಸರು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. 
 

ಭೀಮಾತೀರದಲ್ಲಿ (Bheemateera) ಅಕ್ರಮ ಮರಳು ದಂಧೆ (Illegal sand mining) ಮತ್ತೆ ಶುರುವಾಗಿದೆ. ವಿಜಯಪುರದಲ್ಲಿ(Vijayapura) ಎಗ್ಗಿಲ್ಲದೆ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ರಾತ್ರಿಯಾದರೇ ಜೆಸಿಬಿ, ಟ್ರಾಕ್ಟರ್, ಲಾರಿಗಳ ಸದ್ದು ಜೋರಾಗಿದೆ. ಸಿಂದಗಿಯ ಭೀಮಾತೀರದ ಬಗಲೂರು, ಶಂಬೆವಾಡ, ಶಿರಸಗಿ ಸುತ್ತಮುತ್ತ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ ಈ ಅಕ್ರಮ ಕಣ್ಣೆದುರಿಗೇ ನಡೆಯುತ್ತಿದ್ರೂ ಪೊಲೀಸರು ಸುಮ್ಮನೆ ಕೂತಿದ್ದಾರೆ ಎನ್ನಲಾಗಿದೆ.

ರಾತ್ರಿ 10 ಗಂಟೆಗೆ ಈ ಅಕ್ರಮ ಮರಳು ದಂಧೆ ಶುರುವಾಗುತ್ತದೆ. ಬೆಳಗ್ಗಿನ ಜಾವ 5 ಗಂಟೆ ವರೆಗೂ ಮರಳು ಸಾಗಾಟ ಪ್ರಕ್ರಿಯೆ ನಡೆಯಲಿದ್ದು, ಬಗಲೂರು, ಶಂಬೆವಾಡಿ, ಶಿರಸಗಿ ಗ್ರಾಮಸ್ಥರುಈ ದಂಧೆಯಿಂದ ಬೇಸತ್ತಿದ್ದಾರೆ. ಇನ್ನು ಈ ಅಕ್ರಮ ಮರಳು ದಂಧೆ ಹಿಂದಿರೋದು ಯಾರು?, ಅಕ್ರಮಕ್ಕೆ‌ ಕುಮ್ಮಕ್ಕು ಕೊಡ್ತಿರೋದು ಯಾರು? ಅನ್ನೋ ಪ್ರಶ್ನೆ ಮಾಡಿದ್ರೆ  ಸಿಂದಗಿ ಪೊಲೀಸರದ್ದೇ ಶ್ರೀರಕ್ಷೆ ಎಂದು ಆರೋಪ ಮಾಡಲಾಗುತ್ತಿದೆ. ಯಾಕೆಂದರೆ ಈ ಅಕ್ರಮ ದಂಧೆಯ ವರದಿ ಮಾಡಿದ ಪತ್ರಕರ್ತನೇ ಕಿಡ್ನಾಪ್ ಮಾಡಿದ್ದಾರೆ. ಸಿಂದಗಿಯ ಸ್ಥಳೀಯ ಪತ್ರಕರ್ತ ಗುಂಡು ಕುಲಕರ್ಣಿ (Gundu Kulkarni) ಕಿಡ್ನಾಪ್ ಆದವರು.

ಸಿಪಿಐ ನಾನಾಗೌಡ ಪಾಟೀಲ್ (CPI Nanagowda Patil), ಸಿಬ್ಬಂದಿ ಸುರೇಶ್ ಕೊಂಡಿಯಿಂದ ಕಿಡ್ನಾಪ್ ಮಾಡಲಾಗಿದೆ ಎನ್ನಲಾಗಿದ್ದು, ಭೀಮಾತೀರದ ಘತ್ತರಗಿ ಬ್ರಿಡ್ಜ್ ಬಳಿ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಹಣೆಗೆ ಬಂದೂಕಿಟ್ಟು ಸಿಪಿಐ ನಾನಾಗೌಡ ಪಾಟೀಲ್ ಬೆದರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಮಹಾ ಸಂಗ್ರಮದಲ್ಲಿ ಈ ಬಾರಿ ಯಾರಿಗೆ ಗೆಲುವು? ಈ ಪಕ್ಷ ಇಷ್ಟೇ ಸ್ಥಾನ ಗೆಲ್ಲಲಿದೆ ಎಂದ ಸಟ್ಟಾ ಬಜಾರ್!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!