Jan 23, 2022, 10:01 AM IST
ಬೆಂಗಳೂರು(ಜ.23): ಲೈಂಗಿಕ ಕಿರುಕುಳದ ಆರೋಪವನ್ನ ಎದುರಿಸುತ್ತಿರವ ಇನ್ಸ್ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಮತ್ತೊಂದು ಆರೋಪವೊಂದು ಕೇಳಿ ಬಂದಿದೆ. ಹೌದು, ಭೂಮಾಫಿಯಾಗೆ ಹೆಣ್ಣೂರು ಠಾಣೆಯ ಇನ್ಸ್ಪೆಕ್ಟರ್ ವಸಂತ್ ಕುಮಾರ್ ಸಾಥ್ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಾಪರ್ಟಿ ವಿಚಾರವಾಗಿ ದುಷ್ಕರ್ಮಿಗಳು ಗಲಾಟೆ ಮಾಡಿ ಮನೆಗೆ ನುಗ್ಗಿ ದಾಂಧಲೆ ಮಾಡಿದ್ರೂ ಕೂಡ ಅವರ ವಿರುದ್ಧ ಇನ್ಸ್ಪೆಕ್ಟರ್ ವಸಂತ್ ಕುಮಾರ್ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಲಾಗಿದೆ. ದೂರು ಕೊಟ್ಟರೂ ವಸಂತ್ ಕುಮಾರ್ ಎಫ್ಐಆರ್ ದಾಖಲಿಸಿಕೊಂಡಿಲ್ಲ ಅಂತ ವಾಣಿ ಮತ್ತು ವರ್ಲಮತಿ ಎಂಬುವರು ಇನ್ಸ್ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಗಂಭೀರವಾದ ಆರೋಪವನ್ನ ಮಾಡಿದ್ದಾರೆ.