5 ವರ್ಷದ ಹಿಂದೆ ಬಿಹಾರದಿಂದ ಬಂದು ಗಾಂಜಾ ಮಾರಿ  3 ಕೋಟಿ, ಫ್ಲಾಟ್ ಮಾಡಿದ್ದವನ ಆಸ್ತಿ ಜಪ್ತಿ!

5 ವರ್ಷದ ಹಿಂದೆ ಬಿಹಾರದಿಂದ ಬಂದು ಗಾಂಜಾ ಮಾರಿ  3 ಕೋಟಿ, ಫ್ಲಾಟ್ ಮಾಡಿದ್ದವನ ಆಸ್ತಿ ಜಪ್ತಿ!

Published : Sep 05, 2021, 05:38 PM IST

*  ಉತ್ತರ ಭಾರತದಲ್ಲಿ ಡ್ರಗ್ಸ್‌ ದಂಧೆ ನಡೆಸುತ್ತಿದ್ದ ಅಂಜಯ್‌

* ಡ್ರಗ್ಸ್‌ ದಂಧೆ: 2009ರಲ್ಲಿ ಬಿಹಾರದಲ್ಲಿ 4 ವರ್ಷ ಜೈಲು

* ಜೈಲಿಂದ ಬಿಡುಗಡೆ ಬಳಿಕ ಕುಟುಂಬ ಸಮೇತ ಬೆಂಗಳೂರಿಗೆ

* ಇಲ್ಲೂ ಗಾಂಜಾ ವ್ಯಾಪಾರ ಮುಂದುವರಿಸಿದ್ದ ದಂಧೆಕೋರ

ಬೆಂಗಳೂರು(ಸೆ. 05)  ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಮಾದಕ ವಸ್ತು ಜಾಲದ ವಿರುದ್ಧ ದಾಳಿ ತೀವ್ರಗೊಳಿಸಿರುವ ಪೊಲೀಸರು, ಡ್ರಗ್ಸ್‌ ದಂಧೆಯಿಂದಲೇ ಪೆಡ್ಲರ್‌ವೊಬ್ಬ ಕೆಲವೇ ವರ್ಷಗಳ ಅಂತರದಲ್ಲಿ ಸಂಪಾದಿಸಿದ್ದ ಕೋಟಿಗಟ್ಟಲೆ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಮಾದಕ ವಸ್ತು ಸಾಗಣೆದಾರನಿಂದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡ ರಾಜ್ಯದ ಮೊದಲ ಪ್ರಕರಣ ಇದಾಗಿದೆ.

ಆನೇಕಲ್‌ ತಾಲೂಕಿನ ಬ್ಯಾಗಡದೇವನಹಳ್ಳಿ ನಿವಾಸಿ, ಬಿಹಾರ ಮೂಲದ ಅಂಜಯ್‌ ಕುಮಾರ್‌ ಸಿಂಗ್‌ (54) ಎಂಬಾತನಿಗೆ ಸೇರಿದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾಗಿರುವ ಆಸ್ತಿಯ ಸರ್ಕಾರಿ ಮಾರ್ಗಸೂಚಿ ದರ 1.68 ಕೋಟಿ ರು. ಇದೆ. ಇದರ ಮಾರುಕಟ್ಟೆಮೌಲ್ಯ 3 ಕೋಟಿ ರು.ಗಿಂತ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ 3 ನಿವೇಶನ ಹಾಗೂ 1 ಫ್ಲ್ಯಾಟ್‌ ಅನ್ನು ಈತ ಖರೀದಿ ಮಾಡಿದ್ದ. ಆದರೆ ಎಲ್ಲವನ್ನೂ ಪತ್ನಿ ಶೀಲಾದೇವಿ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೂರ್ಯ ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಈತನಿಂದ ಸ್ಕಾರ್ಪಿಯೋ ಕಾರನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಹೆಸರಿಗೆ ಮಾತ್ರ ಮಾಹಿತಿ ದಾರ.. ಮಾಡುತ್ತಿದ್ದುದ್ದೆಲ್ಲ ಬೇರೆ ಕೆಲಸ

ಆರೋಪಿ ಸಂಪೂರ್ಣವಾಗಿ ಡ್ರಗ್ಸ್‌ ದಂಧೆಯಿಂದಲೇ ಅಕ್ರಮವಾಗಿ ಚರಾಸ್ತಿ ಮತ್ತು ಸ್ಥಿರಾಸ್ತಿ ಖರೀದಿ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆರ್ಥಿಕ ವಂಚನೆ ತನಿಖಾ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

5 ವರ್ಷದ ಹಿಂದೆ ಕರ್ನಾಟಕಕ್ಕೆ: ಬಿಹಾರದ ಅಂಜಯ್‌ ಕುಮಾರ್‌ ಈ ಹಿಂದೆ ಬಿಹಾರ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಾದಕ ವಸ್ತು ಮಾರಾಟ ದಂಧೆಯಲ್ಲಿ ನಿರತನಾಗಿದ್ದ. 2009ರಲ್ಲಿ ಡ್ರಗ್ಸ್‌ ಸಾಗಣೆ ಪ್ರಕರಣದಲ್ಲಿ ಬಿಹಾರದಲ್ಲಿ 4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಜೈಲಿನಿಂದ ಹೊರಬಂದ ಬಳಿಕ ಕರ್ನಾಟಕಕ್ಕೆ ಕುಟುಂಬ ಸಮೇತ ಸ್ಥಳಾಂತರಗೊಂಡು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ನೆಲೆಸಿದ್ದ. ಒರಿಸ್ಸಾ ಹಾಗೂ ವಿಶಾಖಪಟ್ಟಣದಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಪೂರೈಕೆಗೆ ಜಾಲ ಸೃಷ್ಟಿಸಿಕೊಂಡಿದ್ದ. ಕಳೆದ ಐದು ವರ್ಷಗಳಿಂದ ಈ ಕೃತ್ಯದಲ್ಲಿ ಈತ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!