ಮಕ್ಕಳು ಶಾಲೆಗೆ ಹೋಗಿದ್ದಾರಾ.. ಪೋಷಕರೇ ಎಚ್ಚರ ! ಅಪಹರಣಕಾರರ ಪತ್ತೆ ಹಚ್ಚದ ಖಾಕಿ !

ಮಕ್ಕಳು ಶಾಲೆಗೆ ಹೋಗಿದ್ದಾರಾ.. ಪೋಷಕರೇ ಎಚ್ಚರ ! ಅಪಹರಣಕಾರರ ಪತ್ತೆ ಹಚ್ಚದ ಖಾಕಿ !

Published : Sep 12, 2023, 10:19 AM IST

ಆತ 9ನೇ ಕ್ಲಾಸ್ ಬಾಲಕ, ಶಾಲೆ ಅರ್ಧಕ್ಕೆ ಮುಗಿಸಿಕೊಂಡು ಒಂಟಿಯಾಗಿ ಮನೆ ಕಡೆಗೆ ಹೊರಟಿದ್ದ. ದಾರಿಯಲ್ಲಿ ಕುಳಿತ ಯಾರೋ ಅಪರಿಚಿತರು ಬಾಲಕನಿಗೆ ಚಾಕಲೇಟ್ ಕೊಡುವೆ ಬಾ ಅಂತ ಕರೆದರಂತೆ. ಆದ್ರೆ ಬಾಲಕ ಅವರ ಬಳಿ ಹೋಗಲಿಲ್ಲ. ಅದಕ್ಕೆ ಅವರು ಏನು ಮಾಡಿದ್ರು ಗೊತ್ತಾ ಈ ಸ್ಟೋರಿ ನೋಡಿ. 
 

ಪೋಷಕರೇ.. ನಿಮ್ಮ ಮಕ್ಕಳು ಶಾಲೆಗೆ ಹೋಗ್ತಿದ್ದಾರಾ..? ಶಾಲೆಗಷ್ಟೇ ಅಲ್ಲ ಮನೆಯಿಂದ ಮಕ್ಕಳು ಹೊರ ಹೋದರೆ ಮರಳಿ ಮನೆ ಸೇರೋವರೆಗೂ ನಿಗಾ ಇಟ್ಟಿರಿ.. ಹೌದು ರಾಯಚೂರಿನಲ್ಲಿ(Raichur) ನಡೆದ ಘಟನೆಯೊಂದು ಈಗ ಪೋಷಕರನ್ನು ಎಚ್ಚರಿಸುವಂತಾಗಿದೆ. ಈ ಬಾಲಕನ ಹೆಸರು ಅಮಾನ್. 9ನೇ ತರಗತಿ ವಿದ್ಯಾರ್ಥಿ.. ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಈತ ಸೆಪ್ಟೆಂಬರ್ 6ರಂದು ಮಧ್ಯಾಹ್ನ 2ಗಂಟೆ ಸುಮಾರಿಗೆ ಶಾಲೆಯಿಂದ(School) ಮನೆ ಕಡೆ ಬರುತ್ತಿದ್ದ. ಮಾರ್ಗ ಮಧ್ಯೆ ಅಪರಿಚಿತರ ಗ್ಯಾಂಗೊಂದು ಅಮಾನ್‌ಗೆ ಚಾಕಲೇಟ್ ಆಸೆ ತೋರಿಸಿದೆ. ಆದ್ರೆ, ಅದಕ್ಕೆಲ್ಲ ಬಾಲಕ(Boy) ಸೊಪ್ಪು ಹಾಕದಿದ್ದಾಗ ಹಿಂಬದಿಯಿಂದ ಮುಖಕ್ಕೆ ಬಟ್ಟೆಯಿಂದ ಮುಚ್ಚಿ ಪ್ರಜ್ಞೆ ತಪ್ಪಿಸಿ ವಾಹನದಲ್ಲಿ ಅಪಹರಿಸಿದ್ದಾರೆ. ಬಳಿಕ ತಿಂಥಣಿ ಬ್ರಿಜ್ ಬಳಿ ಕಾರು ಬದಲಾಯಿಸಿ, ದೇವದುರ್ಗ ತಾಲೂಕಿನ ಜಾಲಹಳ್ಳಿಗೆ  ಬಾಲಕನನ್ನು ಕರೆದೊಯ್ದಿದ್ದಾರೆ. ಅಷ್ಟೊತ್ತಿಗೆ ಬಾಲಕನಿಗೆ ಪ್ರಜ್ಞೆ ಬಂದಿದೆ. ಆದರೂ ತುಟಿ ಪಿಟಿಕ್ ಎನ್ನದ ಬಾಲಕ ಕಾರ್ನಲ್ಲಿ ಯಾರು ಇಲ್ಲದ ವೇಳೆ ಸಿನಿಮೀಯ ರೀತಿಯಲ್ಲಿ ಎಸ್ಕೇಪಾಗಿದ್ದಾನೆ. ಇತ್ತ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರಿಗೆ ಸಂಜೆ ಒಂದು ಫೋನ್ ಕಾಲ್ ಬರುತ್ತೆ. ಸಂಜೆ ವೇಳೆ ಜಾಲಹಳ್ಳಿಯಿಂದ ಬಾಲಕ ಅಮಾನ್ ಪೋಷಕರಿಗೆ ಫೋನ್ ಮಾಡಿ ವಿಷ್ಯ ತಿಳಿಸಿದ್ದಾನೆ. ಕೂಡಲೇ ಪೋಷಕರು ಬಂದು ಮಗನನ್ನು ಕರೆದುಕೊಂಡು ಹೋಗಿದ್ದಾರೆ. ತನ್ನ ಚಾಣಾಕ್ಷತನದಿಂದ ಬಾಲಕ ಅಪಹರಣಕಾರರಿಂದ(Kidnappers) ತಪ್ಪಿಸಿಕೊಂಡು ಬಂದಿದ್ದಾನೆ. ಈ ಘಟನೆ ಈಗ ಹಟ್ಟಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರನ್ನೂ ಬೆಚ್ಚಿ ಬೀಳಿಸಿದೆ. ಇನ್ನು ಘಟನೆ ನಡೆದು 5 ದಿನಗಳು ಕಳೆದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ, ಅಪಹರಣಕಾರರ ಸುಳಿವಿಲ್ಲ. ಹೀಗಾಗಿ ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಕೂಡ ಭಯಪಡುವ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದ ಹಾಲು ಮಹಾರಾಷ್ಟ್ರದ ಪಾಲು: ಸೈಲೆಂಟಾಗಿ ಕರುನಾಡ ಗಡಿಗೆ ‘ಮಹಾ’ ಡೈರಿಗಳ ಎಂಟ್ರಿ !

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more