ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

ಹಾಸನದಲ್ಲಿ ಶಿಕ್ಷಕಿ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗ್ಗೆ ಕಿಡ್ನಾಪ್, ರಾತ್ರಿ ಹೊತ್ತಿಗೆ ಆರೋಪಿಗಳು ಅಂದರ್

Published : Dec 01, 2023, 09:58 AM IST

ಆಕೆ ಖಾಸಗಿ ಶಾಲೆಯ ಶಿಕ್ಷಕಿ. ಎಂದಿನಂತೆ ಮನೆಯಿಂದ ಶಾಲೆಗೆ ಹೊರಟು ಹೋಗುತ್ತಿದ್ದಾಗ, ಇನ್ನೋವಾ ಕಾರಿನಲ್ಲಿ ಬಂದವರು ಕಿಡ್ನಾಪ್ ಮಾಡಿದ್ದರು. ಟೀಚರ್ ಕಿಡ್ನಾಪ್ ನಿಂದ ಇಡೀ ಏರಿಯಾ ಬೆಚ್ಚಿ ಬಿದ್ದಿತ್ತು. ಮಗಳ ಅಪಹರಣ ಸುದ್ದಿ ಹೆತ್ತವರ ಕಂಗಾಲಗಿಸಿತ್ತು. ಈ ಘಟನೆ ನಡೆದಿದ್ದು ಹಾಸನದ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ.

ಈ ಫೋಟೋದಲ್ಲಿರುವ ಈಕೆ ಅರ್ಪಿತಾ. ಖಾಸಗಿ ಶಾಲೆಯ ಶಿಕ್ಷಕಿ. ಹಾಸನ(Hassan) ಹೊರವಲಯದ ಬಿಟ್ಟಗೌಡನಹಳ್ಳಿಯ ಯುವತಿ. ಬೆಳಗ್ಗೆ 7:55 ಕ್ಕೆ ಶಾಲೆಗೆ ಹೋಗುತ್ತಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ನಾಲ್ವರು ಕಿಡ್ನಾಪ್( kidnap) ಮಾಡಿದ್ರು.ಕಿಡ್ನಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹಾಡಹಗಲೇ ಶಿಕ್ಷಕಿಯ ಕಿಡ್ನಾಪ್ನಿಂದ ಜನ ಬೆಚ್ಚಿಬಿದ್ದಿದ್ರು. ಇತ್ತ ಮಗಳ ಅಪಹರಣದಿಂದ ಹೆತ್ತವರು ಕಂಗಾಲಾಗಿ ಕೂತರು. ಮತ್ತೊಂದ್ಕಡೆ ಅಪಹರಣ ಸುದ್ದಿ ತಿಳಿಯುತ್ತಲೇ ಪೊಲೀಸರು ಮೂರು ತಂಡಗಳನ್ನು ರಚಿಸಿಕೊಂಡು ಕಿಡ್ನಾಪರ್ಸ್ ಬೇಟೆಗೆ ಇಳಿದರು. ಹಾಗೆ ಅಖಾಡಕ್ಕಿಳಿದ ಪೊಲೀಸರು ಸೂರ್ಯೋದಯ ವೇಳೆ ನಡೆದಿದ್ದ ಅಪಹರಣ ಪ್ರಕರಣವನ್ನು ಸೂರ್ಯಾಸ್ತದೊಳಗೆ ಭೇದಿಸಿದ್ದಾರೆ. ಕಿಡ್ನಾಪರ್ಸ್  ಬಂಧಿಸಿದ ಪೊಲೀಸರು ಶಿಕ್ಷಕ ಅರ್ಪಿತಾಳನ್ನು(Teacher) ರಕ್ಷಿಸಿ ಹಾಸನಕ್ಕೆ ಕರೆದು ತಂದಿದ್ದಾರೆ. ಅರ್ಪಿತಾ ಕಿಡ್ಯ್ನಾಪ್ ಆಗಿದೆ ಅನ್ನೋ ಸುದ್ದಿ ಹೊರ ಬಿದ್ದ ಬೆನ್ನಲ್ಲೇ  ಸಂಬಂಧಿಗಳು ಪೊಲೀಸರ ಎದುರು ಅದೊಂದು ಹೆಸರು ಹೇಳೀದ್ದರು. ರಾಮು ಎಂಬಾತನ ವಿರುದ್ಧ ದೂರು ನೀಡಿದ್ದರು. ರಾಮು, ಅರ್ಪಿತಾಳನ್ನು ಮದುವೆಯಾಗಲು ಕೇಳಿಸಿದ್ದನಂತೆ. ಆದರೆ ಅರ್ಪಿತಾ ಹಾಗೂ ಅರ್ಪಿತಾ ಮನೆಯವರು ಮದುವೆಗೆ ನಿರಾಕರಿಸಿದ್ದರು. ಹೀಗಾಗಿ ಪ್ಲಾನ್ ಮಾಡಿ ಸ್ನೇಹಿತರ ಸಹಾಯ ಪಡೆದು ಅರ್ಪಿತಾಳನ್ನು ಕಿಡ್ನ್ಯಾಪ್ ಮಾಡಿದ್ದ.. ದಕ್ಷಿಣ ಕನ್ಬಡ ಜಿಲ್ಲೆಯ ನೆಲ್ಯಾಡಿಯಲ್ಲಿ ಇನ್ನೋವಾ ಕಾರು ಪತ್ತೆ ಹಚ್ಚಿದ ಪೊಲೀಸರು ಅರ್ಪಿತಾಳನ್ನು ರಕ್ಷಿಸಿದ್ದಾರೆ. ಆರೋಪಿ ರಾಮು ಮತ್ತು ಆತನ ಸ್ನೇಹಿತರನ್ನು ಹಾಸನ ಬಡಾವಣೆ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆ ಜನರನ್ನ ಬೆಚ್ಚಿ ಬೀಳಿಸಿದ್ದ ಟೀಚರ್ ಕಿಡ್ನಾಪ್ ಕೇಸನ್ನು ಒಂದೇ ದಿನದಲ್ಲಿ ಭೇದಿಸಿದ ಪೊಲೀಸರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನು ಒಪ್ಪದ ಹುಡುಗಿಯ ಮದುವೆಯಾಗಲು ವಾಮಮಾರ್ಗ ಹಿಡಿದ ತಪ್ಪಿಗೆ ಕಿಡ್ನಾಪರ್ ರಾಮು ಮತ್ತು ಆತನ ಸ್ನೇಹಿತರು ಜೈಲು ಸೇರೋದು ಬಹುತೇಕ ಪಕ್ಕಾ ಆಗಿದೆ.

ಇದನ್ನೂ ವೀಕ್ಷಿಸಿ:  ಬ್ಯಾಡ್ ಮ್ಯಾನರ್ಸ್ ಯಶಸ್ವಿ ಪ್ರದರ್ಶನ..ಅಭಿಷೇಕ್ ಅಂಬರೀಶ್‌ ಮಂಡ್ಯ, ಮೈಸೂರು ವಿಜಯ ಯಾತ್ರೆ

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more