ರಾಜ್ಯಗಳ ಗಡಿಮೀರಿ ಪ್ರೀತಿಸಿ ಮದುವೆಯಾದವರು, ಮೊದಲ ರಾತ್ರಿಗೂ ಮುನ್ನವೇ ಮಸಣ ಸೇರಿದರು!

ರಾಜ್ಯಗಳ ಗಡಿಮೀರಿ ಪ್ರೀತಿಸಿ ಮದುವೆಯಾದವರು, ಮೊದಲ ರಾತ್ರಿಗೂ ಮುನ್ನವೇ ಮಸಣ ಸೇರಿದರು!

Published : Aug 09, 2024, 09:19 PM IST

ಕೋಲಾರದ ಯುವಕ ಹಾಗೂ ಆಂಧ್ರಪ್ರದೇಶದ ಯುವತಿ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿ ಮೊದಲ ರಾತ್ರಿಗೂ ಮುನ್ನವೇ ಮಸಣ ಸೇರಿದ್ದಾರೆ.

ಕೋಲಾರದ ಯುವಕ ಹಾಗೂ ಆಂಧ್ರಪ್ರದೇಶ ಯುವತಿ ಇಬ್ಬರೂ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆ ಮಾಡಿಕೊಂಡಿದ್ದರು. ಬೆಳಗ್ಗೆ ಮದುವೆ ಮಾಡಿಕೊಂಡ ಜೋಡಿಗೆ, ಗುರು ಹಿರಿಯರೆಲ್ಲಾ ನಿಂತು ನೂರು ಕಾಲ ಒಟ್ಟಿಗೆ ಬಾಳಿ ಬದುಕಿ ಅಂತ ಹಾರೈಸಿದ್ದಾರೆ. ಆ ವಧು ವರ ಕೂಡ ಸಂತೋಷದಿಂದ ಸಪ್ತಪದಿ ತುಳಿದಿದ್ದರು. ಆದರೆ, ಮದುವೆಯಾಗಿ ಕೆಲವು ಗಂಟೆಗಳ ನಂತರ ಮನೆಯಲ್ಲಿ ಇಬ್ಬರಿಗೂ ಮೊದಲ ರಾತ್ರಿ ಮಾಡಿಸಲು ಸಿದ್ಧತೆ ಮಾಡಲಾಗುತ್ತಿತ್ತು. ಇಬ್ಬರೂ ಜೋಡಿ ಮನೆಯವರಿಂದ ಪ್ರೇವೇಟ್ ಆಗಿ ಹೋಗಿ ಮಾತಾಡಬೇಕು ಅಂತ ಮನೆಯ ಕೋಣೆಯೊಳಗೆ ಸೇರಿಕೊಂಡಿದ್ದಾರೆ. ಆದರೆ, ಎಷ್ಟೇ ಹೊತ್ತು ಕಳೆದರೂ ಇಬ್ಬರೂ ಕೋಣೆಯಿಂದ ಹೊರಗೆ ಬರಲಿಲ್ಲ.

ಮದುವೆಯಾದ ನಂತರ ಸಂಜೆ ವೇಳೆ ಮಾತನಾಡಲು ಕೋಣೆಯೊಳಗೆ ಹೋದ ಜೋಡಿ ಹೊರಗೆ ಬಾರದ ಹಿನ್ನೆಲೆಯಲ್ಲಿ ಮನರಯವರು ಅಲ್ಲಿಗೆ ಹಗಿದ್ದಾರೆ. ಆದರೆ, ಕೋಣೆಯೊಳಗೆ ಗಾಯಗೊಂಡು ನರಳಾಡುವ ಶಬ್ದ ಕೇಳಿದೆ. ಇದೇನಿದು ಎಂದು ರೂಮಿನೊಳಗೆ ಹೋಗಿ ನೋಡಿದರೆ ಇಬ್ಬರೂ ನವದಂಪತಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಇನ್ನು ಕೂಡಲೇ ತರಾತುರಿಯಲ್ಲಿ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆ ತಲುಪುವಷ್ಟರಲ್ಲಿಯೇ ವಧು ಸಾವನ್ನಪ್ಪಿದ್ದಾಳೆ. ಇನ್ನು ವರನಿಗೆ ಒಂದು ದಿನ ಚಿಕಿತ್ಸೆ ನೀಡಿದರೂ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.  ಆದರೆ, ಇಬ್ಬರೂ ಕೋಣೆಯಲ್ಲಿದ್ದಾಗ ತಮಗೆ ತಾವೇ ಹರಿತವಾದ ಆಯುಧಗಳಿಂದ ಕೊಯ್ದುಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more