KSRTC Transfer Scam; ಶ್ರೀರಾಮುಲು ವಿರುದ್ಧ ಬಹುದೊಡ್ಡ ಭ್ರಷ್ಟಾಚಾರ ಆರೋಪ!

KSRTC Transfer Scam; ಶ್ರೀರಾಮುಲು ವಿರುದ್ಧ ಬಹುದೊಡ್ಡ ಭ್ರಷ್ಟಾಚಾರ ಆರೋಪ!

Published : Aug 02, 2022, 11:16 AM IST

40% ಕಮಿಷನ್ ಆಯ್ತು. ಈಗ ಟ್ರಾನ್ಸ್‌ಫರ್‌ ದಂಧೆ ಆರೋಪ ಕೇಳಿಬಂದಿದೆ. ಲಕ್ಷ ಲಕ್ಷ ಪಡೆದು ಸರ್ಕಾರಿ ನೌಕರರ ವರ್ಗಾವಣೆ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ವಿರುದ್ಧ ಈ ಆರೋಪ ಕೇಳಿಬಂದಿದೆ.

ಬೆಂಗಳೂರು (ಆ.2): ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಾಲಿಗೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ಅಸ್ತ್ರವಾಗುತ್ತಾ ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಈಗಾಗಲೇ 40% ಕಮೀಷನ್ ದಂಧೆ ಎಂಬ ಆರೋಪ ಬಹಿರಂಗವಾಗಿರುವ ಸತ್ಯ.  ಇದೀಗ ಸಾರಿಗೆ ಸಚಿವ ಶ್ರೀರಾಮುಲು ವಿರುದ್ಧ ಬಹುದೊಡ್ಡ ಭಷ್ಟಾಚಾರ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ವರ್ಗಾವಣೆಗಾಗಿ ಭರ್ಜರಿ ಡೀಲ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಲಕ್ಷ ಲಕ್ಷ ಹಣ ಪಡೆದು ಕೆಎಸ್‌ಆರ್‌ಟಿಸಿ ನೌಕರರ ವರ್ಗಾವಣೆ ಮಾಡಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬುರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಮೂಲಕ ದೂರು ನೀಡಿದ್ದಾರೆ.

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರಲ್ಲೇ ಬಸ್ಸಿಗಾಗಿ ಪರದಾಟ

ಇನ್ನು ನಿನ್ನೆಯಷ್ಟೇ (ಆ.1) ಸಚಿವ  ಶ್ರೀರಾಮುಲು ಅವರು ಬಳ್ಳಾರಿ ನಗರದಲ್ಲಿ 27.25 ಎಕರೆ ಜಮೀನು ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು.  ಈ ಬಗ್ಗೆ ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಆಗ್ರಹಿಸಿದ್ದರು. ಹೀಗೆ ಒಂದಲ್ಲ ಒಂದು ಭ್ರಷ್ಟಾಚಾರ ಆರೋಪ ಶ್ರೀರಾಮುಲು ವಿರುದ್ಧ ಕೇಳಿಬರುತ್ತಿದೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more