Online Dating Fraud : ಆನ್ ಲೈನ್ ಮಾಯಾಂಗನೆ ವಿಡಿಯೋ ಚಾಟಿಂಗ್ ಮೋಹ, ಲಕ್ಷ ಲಕ್ಷ ಕಳಕೊಂಡ ಚಿಕ್ಕಮಗಳೂರು ಟೆಕ್ಕಿ!

Online Dating Fraud : ಆನ್ ಲೈನ್ ಮಾಯಾಂಗನೆ ವಿಡಿಯೋ ಚಾಟಿಂಗ್ ಮೋಹ, ಲಕ್ಷ ಲಕ್ಷ ಕಳಕೊಂಡ ಚಿಕ್ಕಮಗಳೂರು ಟೆಕ್ಕಿ!

Published : Feb 26, 2022, 12:32 PM ISTUpdated : Feb 26, 2022, 12:35 PM IST

* ಹುಡುಗಿ ಮೋಹಕ್ಕೆ ಬಿದ್ದು ಹತ್ತು ಲಕ್ಷ ನಾಮ!"
* ಮಾಯದ ಪ್ರೀತಿಗೆ ಬಿದ್ದು ಹಣ ಕಳೆದುಕೊಂಡ ಯುವಕ
* ಆನ್‌ಲೈನ್‌ನಲ್ಲಿ ಹುಟ್ಟಿದ ಪ್ರೀತಿ ನಂಬಿ ಮೋಸ
* ಡೇಟಿಂಗ್ ನೆಪದಲ್ಲಿ ದುಡ್ಡು ಪೀಕಿರೋ ಮಾಯಾಂಗನೆ
* 10 ಲಕ್ಷಕ್ಕೂ ಹೆಚ್ಚು ದುಡ್ಡು ಕಳೆದುಕೊಂಡಿರೋ ಯುವಕ

ಚಿಕ್ಕಮಗಳೂರು(ಫೆ.  26)  ಪ್ರೀತಿ (Love) ಕುರುಡು, ಪ್ರೇಮಕ್ಕೆ ಕಣ್ಣಿಲ್ಲ ಅಂತಾರೆ... ಪ್ರೀತಿಹುಟ್ಬೇಕಾದ್ರೆ ಯಾವ್ದೇ ಜಾತಿ, ಧರ್ಮ, ವಯಸ್ಸನ್ನ ನೋಡಲ್ಲ ಅನ್ನೋ ಮಾತು ಸಹಜ. ಆದ್ರೆ ಒಬ್ಬರ ಮುಖ ಒಬ್ಬರು ನೇರವಾಗಿ ನೋಡದೆ ಆನ್ ಲೈನ್ ನಲ್ಲಿ (Online) ಹುಟ್ಟಿದ ಪ್ರೀತಿಯಿಂದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡು ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ.. ಅರೇ ಇದೇನಿದು ಎಲ್ಲಾ ಗೊತ್ತಿದ್ರೂ ಕೂಡಾ 10 ರೂ. ಕೊಡದ ಈ ಕಾಲದಲ್ಲಿ ಮುಖ ನೋಡದೇ ಲಕ್ಷಾಂತರ ರೂ. ಕಳೆದುಕೊಂಡಿದ್ದಾದ್ರೂ ಹೇಗೆ ಅಂತೀರಾ ಹಾಗಾದ್ರೆ ಈ ಕುರಿತು ಒಂದು ವರದಿ ಇಲ್ಲಿದೆ.

ಆನ್ಲೈನ್ ಪ್ರೀತಿಯ ಜಾಲಕ್ಕೆ ಬಿದ್ದ ಯುವಕನೋರ್ವ ಹುಡುಗಿಯ ಮುಖವನ್ನೂ ನೋಡದೆ ಕೇಳಿ ಕೇಳಿದಷ್ಟು ಹಣವನ್ನು ಹಾಕಿ ಈಗ ಹಿಂಗು ತಿಂದ ಮಂಗನಂತಾಗಿ ನ್ಯಾಯಕ್ಕಾಗಿ ಪೊಲೀಸರ (Karnataka Police) ಬಳಿ ಮೊರೆಯಿಟ್ಟಿರೋ ಘಟನೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ತಂತ್ರಜ್ಞಾನ ಬೆಳಿಯೋ ವೇಗಕ್ಕಿಂತ ಡಬ್ಬಲ್ ಸ್ಪೀಡ್ ನಲ್ಲಿ ಸೈಬರ್ ಅಪರಾಧಗಳೂ ಕೂಡಾ ಹೆಚ್ಚಾಗ್ತಾನೆ ಇವೆ. ಇವನ್ನ ತಡೆಯೋಕೆ ಅಂತಾ ಪೊಲೀಸ್ ಇಲಾಖೆ ಎಷ್ಟೆಲ್ಲ ಕಷ್ಟ ಪಡ್ತಿದೆ ಆದ್ರೂ ಕೂಡಾ ಇಂತಾ ಎಜುಕೇಟೆಡ್ ಫೂಲ್ ಗಳು ಸ್ಮಾರ್ಟ್ ವರ್ಕ್ ನೆಪದಲ್ಲಿ ಮೋಸ ಹೋಗ್ತಿದ್ದಾರೆ ಅನ್ನೋದಕ್ಕೆ ಈ ಘಟನೆ ಸಾಕ್ಷಿಯಾಗಿದೆ.. ಫೇಸ್ ಬುಕ್ (Facebook) ನೊಡುವಾಗ ಅಲ್ಲಿ ಬರುವ ಶೈನಿ ಆಫ್ ಕ್ವೀನ್ ಆನ್ ಲೈನ್ ಡೇಟ್ ಅಪ್ಲಿಕೇಷನ್ ನಿಂದರ್ ಪರಿಚಯವಾದ ಹುಡುಗಿ ಯುವಕನ ಬಳಿ ಬರೋಬ್ಬರಿ 10 ಲಕ್ಷಕ್ಕೂ ಹೆಚ್ಚು ಹಣ ಪೀಕಿದ್ದಾಳೆಂದು ಯುವಕ ನಗರದ ಸೈಬರ್ (Cyber Crime) ಠಾಣೆಯ ಕದ ತಟ್ಟಿದ್ದಾನೆ.

Blackmail: ಚಾಟಿಂಗ್ ರುಚಿ ಹತ್ತಿಸಿ ವೈದ್ಯನ ಬಳಿ ಲಕ್ಷ ಲಕ್ಷ ಪೀಕಿದ ಆಂಟಿಯರು!

ಚಿಕ್ಕಮಗಳೂರು (Chikkamagaluru) ಮೂಲದ ಯುವಕ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲ್ಸ ಮಾಡ್ತಿದ್ದ. ಈ ಯುವಕ ಸದ್ಯ ವರ್ಕ್ ಫ್ರಮ್ ಹೋಮ್ ನಲ್ಲಿದ್ದಾನೆ..ಫೇಸ್ ಬುಕ್ ನಲ್ಲಿ ಸಿಕ್ಕಿದ ಶೈನಿ ಅಪ್ಲಿಕೇಷನ್‌ ಲಿಂಕ್‌ನಿಂದ ಯುವತಿಯೊಬ್ಬಳ ಪರಿಚಯವಾಗಿದೆ, ಕ್ರಮೇಣ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಚಾಲಾಕಿ ಐನಾತಿ ಹುಡುಗಿ ಮನಸೋ ಇಚ್ಛೆ ಹಣ ಕಿತ್ತಿದ್ದಾಳೆ. ಕೊನೆಗೆ ಈ ಯುವಕನ ಅಕೌಂಟ್ ಬ್ಲಾಕ್ ಮಾಡಿರೋದು ಕನ್ಫರ್ಮ್ ಆಗ್ತಿದ್ದಂತೆ ಯುವಕ ದಾರಿ ಕಾಣದೆ ಚಿಕ್ಕಮಗಳೂರಿನ ಸೈಬರ್ ಅಪರಾಧ ವಿಭಾಗದ ಪೊಲೀಸರ ಬಳಿ ಬಂದು ನ್ಯಾಯ ಕೊಡಿಸಿ ನ್ಯಾಯದ ಜೊತೆ ಕಳೆದುಕೊಂಡಿರೋ ಹಣವನ್ನೂ ವಾಪಸ್ ಕೊಡ್ಸಿ ಎಂದು ದುಂಬಾಲು ಬಿದ್ದಿದ್ದಾನೆ.

 

 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more