ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

Published : May 28, 2024, 10:50 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಆತ್ಮಹತ್ಯೆ ಪ್ರಕರಣ
ನನ್ನ ಸಾವಿಗೆ ನಿಗಮದ ಅಧಿಕಾರಿಗಳು ಕಾರಣ ಎಂದು ಡೆತ್ ನೋಟ್ 
ಡೆತ್ ನೋಟ್  ಬರೆದಿಟ್ಟು ಸೂಪರಿಂಡೆಂಟ್ ಚಂದ್ರಶೇಖರ್ ಆತ್ಮಹತ್ಯೆ 
 

ಶಿವಮೊಗ್ಗದ (Shivamogga) ಮಹರ್ಷಿ ವಾಲ್ಮೀಕಿ ನಿಗಮದಲ್ಲಿ(Maharshi Valmiki Nigam) 80-85 ಕೋಟಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಇಲಾಖೆ ಸಚಿವರ ಸೂಚನೆ ಮೇರೆಗೆ  ಹಣ ವರ್ಗಾವಣೆ ಮಾಡಲಾಗಿದೆಯಂತೆ. ಹಣ ವರ್ಗಾವಣೆಗೆ ಬೇಸತ್ತು ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ(Officer Suicide) ಮಾಡಿಕೊಂಡಿದ್ದು, ನಿಗಮದಲ್ಲಿ ಲೂಟಿ ಸಹಿಸಲಾಗದೆ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ವಾಲ್ಮೀಕಿ ನಿಗಮದ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಅಧಿಕಾರಿಗಳ ವಿರುದ್ಧ ಜಾಮೀನು ರಹಿತ ಸೆಕ್ಷನ್‌ನನ್ನು ಪೊಲೀಸರು ಹಾಕಿದ್ದಾರೆ. ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ ಅಕೌಂಟ್ ಆಫೀಸರ್ ಪರಶುರಾಮ್, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶುಚಿಸ್ಮಿತ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 306 ಅನ್ವಯ ಎಫ್ ಐ ಆರ್ ದಾಖಲು. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಪತ್ನಿ ಕವಿತಾ ನೀಡಿದ ದೂರಿನ ಮೇರೆಗೆ ಹಾಗೂ ಡೆತ್ ನೋಟ್ ಆಧರಿಸಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಇಲಾಖೆ ಸಚಿವರು ಅಧಿಕಾರಿಗಳಿಗೆ ಮೌಖಿಕ ಸೂಚನೆ  ನೀಡಿದ್ದಾರೆ. ಅಧಿಕಾರಿಗಳು 80 ರಿಂದ 85 ಕೋಟಿ ಹಗರಣ ಮಾಡಿದ್ದಾರೆಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಾನು ಈ ಹಗರಣದಲ್ಲಿ ಭಾಗಿಯಾಗಿಲ್ಲ ಆದರೆ ತನ್ನನ್ನು ಸಿಲುಕಿಸುವ ಯತ್ನ ಮಾಡಲಾಗಿದೆ ಎಂಬ ಭಯದಿಂದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ನಲ್ಲಿ ಉಪ ಖಾತೆ ತೆರೆದು ಅವ್ಯವಹಾರ ಮಾಡಲಾಗಿದೆ. ಈ ಹಗರಣದಲ್ಲಿ ನನ್ನ ಪಾತ್ರವಿಲ್ಲ , ಅವಮಾನ ಮಾಡಲಾಗುತ್ತಿದೆ  ಎಂದು ಡೆತ್‌ನೋಟ್‌ನಲ್ಲಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ಬೆದರಿಕೆ? ಗಲಾಟೆ ತಡೆಯಲು ಮುಂದಾದವರ ಮೇಲೂ ಹಲ್ಲೆ?

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more