ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

Published : Dec 04, 2023, 10:10 AM IST

ಬೈಕ್‌ನಲ್ಲಿ ತೆರಳುತ್ತಿದ್ದ ಚಿಕ್ಕಪ್ಪನನ್ನ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ದಹನ ಮಾಡಿದ ಅಣ್ಣ ಹಾಗೂ ಆತನ ಮಗನ ದುಷ್ಕೃತ್ಯವೊಂದು ಶಿವಮೊಗ್ಗದ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ಇಂತಹ ಹೀನ ಕೃತ್ಯ ಎಸಗಿದ ದುಷ್ಟರ ವಿರುದ್ಧ ಸಾರ್ವತ್ರಿಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಎತ್ತಿ ಆಡಿಸಿದವನನ್ನೇ ಬೆಂಕಿ ಹಚ್ಚಿ ಕೊಂದ ಪಾಪಿಗಲ ಕಥೆ ಇದು. ಸಂಬಂಧಗಳಿಗೆ ಬೆಲೆ ಇಲ್ಲದಂತೆ ಮಾಡಿದ ದುಷ್ಕೃತ್ಯವಿದು. ಮಕ್ಕಳ ಸಮಾನರಾದವರ ದುಷ್ಕೃತ್ಯಕ್ಕೆ ಚಿಕ್ಕಪ್ಪನೊಬ್ಬ ಸಜೀವ ದಹನವಾದ ಘಟನೆ ಶಿವಮೊಗ್ಗ(Shivamogga) ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ ಸಜೀವ ದಹನವಾಗಿದ್ದಾರೆ.‌ ದೊಡ್ಡಪ್ಪನ ಮಕ್ಕಳೇ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯಿಂದ ಗ್ರಾಮಕ್ಕೆ ಗ್ರಾಮವೇ ದಿಗ್ಭ್ರಮೆಗೊಂಡಿದೆ. ನೀರಿನ ಮೋಟಾರ್ ಕೆಟ್ಟ ಕಾರಣ ನಿನ್ನೆ ಬೆಳಿಗ್ಗೆ ಮೋಟಾರ್ ಬದಲಾಯಿಸಲು ಮಹೇಶಪ್ಪ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಇದೇ ವೇಳೆ ಮನೆಯಿಂದ 50 ಸಾವಿರ ರೂಪಾಯಿಯನ್ನೂ ಇಟ್ಟುಕೊಂಡು ಹೊರಟಿದ್ದರು. ಈ ವೇಳೆ ಮತ್ತೋಡು ಕ್ರಾಸ್ ಬಳಿ ಮಹೇಶಪ್ಪನ ಸ್ವಂತ ಅಣ್ಣ ಕುಮಾರಪ್ಪ, ಆತನ ಮಗ ಕಾರ್ತಿಕ್ ಹಾಡಹಗಲೇ ಅಡ್ಡಗಟ್ಟಿದ್ದಾರೆ.  ಪೆಟ್ರೋಲ್(Petrol) ಎರಚಿ ಬೆಂಕಿ(Fire) ಹಚ್ಚಿ ಮಹೇಶಪ್ಪನನ್ನ ಜೀವಂತವಾಗಿ ಸುಟ್ಟಿದ್ದಾರೆ.ಮಹೇಶಪ್ಪಗೆ ಬೆಳಲಕಟ್ಟೆಯಲ್ಲಿ 3 ಎಕರೆ ಜಮೀನು ಇದೆ. ಈ ಜಮೀನಿನ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕುಮಾರಪ್ಪ ಅವರ ಮಗ ಕಾರ್ತಿಕ್ ಮತ್ತು ಮಹೇಶಪ್ಪ ನಡುವೆ ಜಮೀನಿನ ವಿಚಾರದಲ್ಲಿ ಮನಸ್ತಾಪವಿತ್ತು. ಈ ಮನಸ್ತಾಪವೇ ಮಹೇಶಪ್ಪನವರನ್ನ ಜೀವಂತ ಸುಡಲು ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾಯುವ ಮೊದಲು ಮಹೇಶಪ್ಪ ಹೇಳಿಕೆ ನೀಡಿದ್ದಾರೆ. ಮೊಬೈಲ್ ವಿಡಿಯೋ ಹೇಳಿಕೆಯನ್ನು ಸ್ಥಳೀಯರು ಪೊಲೀಸರಿಗೆ ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more