ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

Published : Dec 04, 2023, 10:10 AM IST

ಬೈಕ್‌ನಲ್ಲಿ ತೆರಳುತ್ತಿದ್ದ ಚಿಕ್ಕಪ್ಪನನ್ನ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ದಹನ ಮಾಡಿದ ಅಣ್ಣ ಹಾಗೂ ಆತನ ಮಗನ ದುಷ್ಕೃತ್ಯವೊಂದು ಶಿವಮೊಗ್ಗದ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ಇಂತಹ ಹೀನ ಕೃತ್ಯ ಎಸಗಿದ ದುಷ್ಟರ ವಿರುದ್ಧ ಸಾರ್ವತ್ರಿಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಎತ್ತಿ ಆಡಿಸಿದವನನ್ನೇ ಬೆಂಕಿ ಹಚ್ಚಿ ಕೊಂದ ಪಾಪಿಗಲ ಕಥೆ ಇದು. ಸಂಬಂಧಗಳಿಗೆ ಬೆಲೆ ಇಲ್ಲದಂತೆ ಮಾಡಿದ ದುಷ್ಕೃತ್ಯವಿದು. ಮಕ್ಕಳ ಸಮಾನರಾದವರ ದುಷ್ಕೃತ್ಯಕ್ಕೆ ಚಿಕ್ಕಪ್ಪನೊಬ್ಬ ಸಜೀವ ದಹನವಾದ ಘಟನೆ ಶಿವಮೊಗ್ಗ(Shivamogga) ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ ಸಜೀವ ದಹನವಾಗಿದ್ದಾರೆ.‌ ದೊಡ್ಡಪ್ಪನ ಮಕ್ಕಳೇ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯಿಂದ ಗ್ರಾಮಕ್ಕೆ ಗ್ರಾಮವೇ ದಿಗ್ಭ್ರಮೆಗೊಂಡಿದೆ. ನೀರಿನ ಮೋಟಾರ್ ಕೆಟ್ಟ ಕಾರಣ ನಿನ್ನೆ ಬೆಳಿಗ್ಗೆ ಮೋಟಾರ್ ಬದಲಾಯಿಸಲು ಮಹೇಶಪ್ಪ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಇದೇ ವೇಳೆ ಮನೆಯಿಂದ 50 ಸಾವಿರ ರೂಪಾಯಿಯನ್ನೂ ಇಟ್ಟುಕೊಂಡು ಹೊರಟಿದ್ದರು. ಈ ವೇಳೆ ಮತ್ತೋಡು ಕ್ರಾಸ್ ಬಳಿ ಮಹೇಶಪ್ಪನ ಸ್ವಂತ ಅಣ್ಣ ಕುಮಾರಪ್ಪ, ಆತನ ಮಗ ಕಾರ್ತಿಕ್ ಹಾಡಹಗಲೇ ಅಡ್ಡಗಟ್ಟಿದ್ದಾರೆ.  ಪೆಟ್ರೋಲ್(Petrol) ಎರಚಿ ಬೆಂಕಿ(Fire) ಹಚ್ಚಿ ಮಹೇಶಪ್ಪನನ್ನ ಜೀವಂತವಾಗಿ ಸುಟ್ಟಿದ್ದಾರೆ.ಮಹೇಶಪ್ಪಗೆ ಬೆಳಲಕಟ್ಟೆಯಲ್ಲಿ 3 ಎಕರೆ ಜಮೀನು ಇದೆ. ಈ ಜಮೀನಿನ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕುಮಾರಪ್ಪ ಅವರ ಮಗ ಕಾರ್ತಿಕ್ ಮತ್ತು ಮಹೇಶಪ್ಪ ನಡುವೆ ಜಮೀನಿನ ವಿಚಾರದಲ್ಲಿ ಮನಸ್ತಾಪವಿತ್ತು. ಈ ಮನಸ್ತಾಪವೇ ಮಹೇಶಪ್ಪನವರನ್ನ ಜೀವಂತ ಸುಡಲು ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾಯುವ ಮೊದಲು ಮಹೇಶಪ್ಪ ಹೇಳಿಕೆ ನೀಡಿದ್ದಾರೆ. ಮೊಬೈಲ್ ವಿಡಿಯೋ ಹೇಳಿಕೆಯನ್ನು ಸ್ಥಳೀಯರು ಪೊಲೀಸರಿಗೆ ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more