ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

ನಡುರಸ್ತೆಯಲ್ಲೇ ಚಿಕ್ಕಪ್ಪನಿಗೆ ಬೆಂಕಿ ಹಚ್ಚಿದ ಮಕ್ಕಳು.. ಪೆಟ್ರೋಲ್ ಹಾಕಿ ಸುಟ್ಟುಹಾಕಿದ ಕ್ರೂರಿಗಳು !

Published : Dec 04, 2023, 10:10 AM IST

ಬೈಕ್‌ನಲ್ಲಿ ತೆರಳುತ್ತಿದ್ದ ಚಿಕ್ಕಪ್ಪನನ್ನ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ದಹನ ಮಾಡಿದ ಅಣ್ಣ ಹಾಗೂ ಆತನ ಮಗನ ದುಷ್ಕೃತ್ಯವೊಂದು ಶಿವಮೊಗ್ಗದ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ಇಂತಹ ಹೀನ ಕೃತ್ಯ ಎಸಗಿದ ದುಷ್ಟರ ವಿರುದ್ಧ ಸಾರ್ವತ್ರಿಕವಾಗಿ ಆಕ್ರೋಶ ವ್ಯಕ್ತವಾಗಿದೆ.

ಎತ್ತಿ ಆಡಿಸಿದವನನ್ನೇ ಬೆಂಕಿ ಹಚ್ಚಿ ಕೊಂದ ಪಾಪಿಗಲ ಕಥೆ ಇದು. ಸಂಬಂಧಗಳಿಗೆ ಬೆಲೆ ಇಲ್ಲದಂತೆ ಮಾಡಿದ ದುಷ್ಕೃತ್ಯವಿದು. ಮಕ್ಕಳ ಸಮಾನರಾದವರ ದುಷ್ಕೃತ್ಯಕ್ಕೆ ಚಿಕ್ಕಪ್ಪನೊಬ್ಬ ಸಜೀವ ದಹನವಾದ ಘಟನೆ ಶಿವಮೊಗ್ಗ(Shivamogga) ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ ಸಜೀವ ದಹನವಾಗಿದ್ದಾರೆ.‌ ದೊಡ್ಡಪ್ಪನ ಮಕ್ಕಳೇ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯಿಂದ ಗ್ರಾಮಕ್ಕೆ ಗ್ರಾಮವೇ ದಿಗ್ಭ್ರಮೆಗೊಂಡಿದೆ. ನೀರಿನ ಮೋಟಾರ್ ಕೆಟ್ಟ ಕಾರಣ ನಿನ್ನೆ ಬೆಳಿಗ್ಗೆ ಮೋಟಾರ್ ಬದಲಾಯಿಸಲು ಮಹೇಶಪ್ಪ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಇದೇ ವೇಳೆ ಮನೆಯಿಂದ 50 ಸಾವಿರ ರೂಪಾಯಿಯನ್ನೂ ಇಟ್ಟುಕೊಂಡು ಹೊರಟಿದ್ದರು. ಈ ವೇಳೆ ಮತ್ತೋಡು ಕ್ರಾಸ್ ಬಳಿ ಮಹೇಶಪ್ಪನ ಸ್ವಂತ ಅಣ್ಣ ಕುಮಾರಪ್ಪ, ಆತನ ಮಗ ಕಾರ್ತಿಕ್ ಹಾಡಹಗಲೇ ಅಡ್ಡಗಟ್ಟಿದ್ದಾರೆ.  ಪೆಟ್ರೋಲ್(Petrol) ಎರಚಿ ಬೆಂಕಿ(Fire) ಹಚ್ಚಿ ಮಹೇಶಪ್ಪನನ್ನ ಜೀವಂತವಾಗಿ ಸುಟ್ಟಿದ್ದಾರೆ.ಮಹೇಶಪ್ಪಗೆ ಬೆಳಲಕಟ್ಟೆಯಲ್ಲಿ 3 ಎಕರೆ ಜಮೀನು ಇದೆ. ಈ ಜಮೀನಿನ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಕುಮಾರಪ್ಪ ಅವರ ಮಗ ಕಾರ್ತಿಕ್ ಮತ್ತು ಮಹೇಶಪ್ಪ ನಡುವೆ ಜಮೀನಿನ ವಿಚಾರದಲ್ಲಿ ಮನಸ್ತಾಪವಿತ್ತು. ಈ ಮನಸ್ತಾಪವೇ ಮಹೇಶಪ್ಪನವರನ್ನ ಜೀವಂತ ಸುಡಲು ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾಯುವ ಮೊದಲು ಮಹೇಶಪ್ಪ ಹೇಳಿಕೆ ನೀಡಿದ್ದಾರೆ. ಮೊಬೈಲ್ ವಿಡಿಯೋ ಹೇಳಿಕೆಯನ್ನು ಸ್ಥಳೀಯರು ಪೊಲೀಸರಿಗೆ ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more