ಯಾದಗಿರಿ ರೈತರಿಗೆ 2.5 ಕೋಟಿ ಪಂಗನಾಮ: ಹತ್ತಿ ಖರೀದಿಸಿ..150 ಅನ್ನದಾತರಿಗೆ ಮೋಸ

ಯಾದಗಿರಿ ರೈತರಿಗೆ 2.5 ಕೋಟಿ ಪಂಗನಾಮ: ಹತ್ತಿ ಖರೀದಿಸಿ..150 ಅನ್ನದಾತರಿಗೆ ಮೋಸ

Published : Oct 12, 2023, 11:12 AM IST

ಯಾದರಿಗಿ ರೈತರು ಬರಗಾಲವಿದ್ರೂ ಒಳ್ಳೇಯ ಹತ್ತಿ ಬೆಲೆ ಬೆಳೆದಿದ್ರು.ಈ ಬಾರಿ ಲಾಭ ಬರುತ್ತೆ ಅಂತಾ ಬೆಳೆಯನ್ನು ಮಾರಿದ್ರು..ಆದ್ರೆ 150 ರೈತರ ಬಳಿ ಹತ್ತಿ ಖರೀದಿಸಿದ ಮಾಲೀಕ ಮಾರುತಿ 2.5 ಕೋಟಿ ಹಣ ನೀಡದೇ ಕುಟುಂಬ ಸಮೇತ ಎಸ್ಕೇಪ್ ಆಗಿದ್ದಾನೆ.
 

ರೈತ ಅಂದ್ರೆ ಮುಗ್ದ..ಯಾರಿಗೂ ಕೇಡನ್ನ ಬಯಸದ ವ್ಯಕ್ತಿತ್ವ..ಆದ್ರೆ ಕಷ್ಟಪಟ್ಟು ದುಡಿಯುವ ಅನ್ನದಾತನಿಗೆ ಮಾಲೀಕನೊರ್ವ ಕೋಟಿ ಕೋಟಿ ಪಂಗನಾಮ ಹಾಕಿದ್ದಾನೆ. ಯಾದಗಿರಿ ಜಿಲ್ಲೆಯ ರಾಮಸಮುದ್ರ ಗ್ರಾಮದ ವಿಶ್ವರಾಧ್ಯ ಟ್ರೇಡರ್ಸ್ ಮಾಲೀಕ ಮಾರುತಿ ಬಲಕಲ್ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ.  ತನ್ನ ಬಣ್ಣದ ಮಾತಿನಿಂದ ರೈತರಿಗೆ(Farmers) ಹಣವಿಲ್ಲದ ಖಾತೆಯ ಚೆಕ್ ನೀಡಿ ಪರಾರಿಯಾಗಿದ್ದಾನೆ. ರಾಮಸಮುದ್ರ ಗ್ರಾಮದ ಮಾರುತಿ ಬಲಕಲ್ ಎಂಬ ವ್ಯಕ್ತಿ 2022ರಲ್ಲಿ ಹಲವು ರೈತರಿಂದ ಹತ್ತಿ ಖರೀದಿ ಮಾಡಿದ್ದ.. ಸೂಕ್ತ ಸಮಯಕ್ಕೆ ಹಣವನ್ನು ನೀಡಿದ್ದ. ಇದನ್ನೇ ನಂಬಿದ ಅನ್ನದಾತರು ಮಾರುತಿ ಅಂದ್ರೆ ಸಕಾಲಕ್ಕೆ ಹಣ(money) ನೀಡುವ ನಂಬಿಕೆಗೆ ಅರ್ಹ ಅಂತಾ ಅಂದುಕೊಂಡಿದ್ರು. ಅದೇ ಕಾರಣಕ್ಕೆ ಈ ಬಾರಿಯೂ ಆತನಿಗೆ ಹತ್ತಿ ಮಾರಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಹತ್ತಿ ಕ್ವಿಂಟಾಲ್‌ಗೆ 8ರಿಂದ 9ಸಾವಿರ ರೇಟ್ ಇತ್ತು.. ಆಗ ಮಾರುತಿ 150ಕ್ಕೂ ಹೆಚ್ಚು ರೈತರಿಂದ ಹತ್ತಿ ಖರೀದಿಸಿದ್ದಾನೆ. ಹತ್ತಿ ಖರಿದಿ ಮಾಡುವಾಗ ಹಣ ನೀಡಿರಲಿಲ್ಲ. ಇವತ್ತಲ್ಲ ನಾಳೆ ದುಡ್ಡು ಕೊಡ್ತಾನೆ ಅಂತಾ ರೈತರು ಸುಮ್ನಿನಿದ್ರು..ಆದ್ರೆ ಅಸಾಮಿ ಹಣವನ್ನೇ ಕೊಡಲಿಲ್ಲ. ಆಗ ರೈತರು ಪೊಲೀಸರಿಗೆ ದೂರು ನೀಡಿದ್ರು. ಆ ಬಳಿಕ ಸೆಪ್ಟೆಂಬರ್‌ನಲ್ಲಿ ಚೆಕ್ ಕೊಟ್ಟಿದ್ದಾನೆ. ಆದ್ರೆ ಅಕೌಂಟ್‌ನಲ್ಲಿ ಹಣವಿಲ್ಲದ ಕಾರಣ ರೈತರಿಗೆ ಕೊಟ್ಟ ಚೆಕ್‌ ಬೌನ್ಸ್(Check Bounce) ಆಗಿದೆ. ಇತ್ತ  ಮಾರುತಿ ಹುಡುಕೋಕೆ ಹೋದ್ರೆ ಆತ ಕುಟುಂಬ ಸಮೇತ ಎಸ್ಕೇಪ್ ಆಗಿದ್ದಾನೆ. ಮಳೆ ಕೊರತೆ ನಡುವೆಯೂ ಒಂದಿಷ್ಟು ಒಳ್ಳೆ ಬೆಳೆ ಬಂದಿತ್ತು. ಭೂ ತಾಯಿ ಕೈ ಬಿಡಲಿಲ್ಲ ಎಂದು ಬಂದ ಒಳ್ಳೆ ಫಸಲನ್ನೆಲ್ಲಾ ಮಾರಿದ್ದಾರೆ. ಆದ್ರೆ ಈಗ ಬೆಳೆಯೂ ಇಲ್ಲ..ಹಣವೂ ಇಲ್ಲದ ಪರಿಸ್ಥಿತಿ ಯಾದಗಿರಿ ರೈತರದ್ದು. ಜಿಲ್ಲೆಯ ಹಾಲಗೇರಾ, ಜೀನಕೇರಾ, ತಾಂಡಾಗಳು, ಹಳಿಗೇರಾ, ಕುರಕುಂದ ಸೇರಿದಂತೆ ಅನೇಕ ಗ್ರಾಮದ ರೈತರ ಬಳಿ ಹತ್ತಿ ಖರೀದಿಸಿ 2.5 ಕೋಟಿಯಷ್ಟು ಮೋಸ ಮಾಡಿದ್ದಾನೆ.

ಇದನ್ನೂ ವೀಕ್ಷಿಸಿ:  7 ವಿವಿ ಕುಲಪತಿಗಳಿಗೆ 7 ತಿಂಗಳಿನಿಂದ ಸಿಕ್ಕಿಲ್ಲ ಸಂಬಳ..! ಹೊಸ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರದ ನಿರ್ಲಕ್ಷ್ಯವೇಕೆ..?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more