‘ಒನ್ ಇಂಡಿಯಾ ಒನ್ ಕಾರ್ಡ್’ ಹೆಸರಲ್ಲಿ ವಂಚನೆ: ಖದೀಮರ ಜಾಲ ಪತ್ತೆ ಹಚ್ಚಿದ ವಿಜಯಪುರ ಪೊಲೀಸರು..!

‘ಒನ್ ಇಂಡಿಯಾ ಒನ್ ಕಾರ್ಡ್’ ಹೆಸರಲ್ಲಿ ವಂಚನೆ: ಖದೀಮರ ಜಾಲ ಪತ್ತೆ ಹಚ್ಚಿದ ವಿಜಯಪುರ ಪೊಲೀಸರು..!

Published : Aug 13, 2023, 11:02 AM IST

ವಿಜಯಪುರದಲ್ಲಿ ಸೈಬರ್ ಕಳ್ಳರ ಹಾವಳಿ ದಿನೇ ದಿನೇ ಜಾಸ್ತಿಯಾಗಿದೆ. ಇದೀಗ ಕೇಂದ್ರ ಸರ್ಕಾರದ ಯೋಜನೆಯನ್ನೇ ದುರ್ಬಳಕೆ ಮಾಡಿಕೊಂಡು ಜನರಿಗೆ ವಂಚನೆ ಎಸಗಲಾಗಿದೆ. ಒನ್ ನೇಷನ್ ಒನ್ ಕಾರ್ಡ್ ಹೆಸರಲ್ಲಿ ಜನರಿಗೆ ಮಹಾದೋಖ ಮಾಡಿದವನು ಪೊಲೀಸರ ಅತಿಥಿಯಾಗಿದ್ದಾನೆ.
 

ಕೇಂದ್ರ ಸರ್ಕಾರದ ಮಹತ್ವದ  ಒನ್‌ ನೇಶನ್‌ ಒನ್‌ ಕಾರ್ಡ ಯೋಜನೆ(One Nation One Card scheme) ಬಗ್ಗೆ ಈಗಾಗಲೇ ಗೊತ್ತೆ ಇದೆ. ದೇಶದ ಜನರ ಅನುಕೂಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ(PM Modi) ಮಾರ್ಚ್‌ 2019ಕ್ಕೆ ಈ ಯೋಜನೆ ಲಾಂಚ್‌ ಮಾಡಿದ್ರು. ಕೇಂದ್ರದ ಯೋಜನೆಯ ಹೆಸರನ್ನೇ ಬಳಸಿಕೊಂಡು ಆಸಾಮಿಯೊಬ್ಬ ಭಾರಿ ವಂಚನೆ(Fraud) ಮಾಡಿದ್ದಾನೆ. ಆದ್ರೆ ವಿಜಯಪುರ ಪೊಲೀಸರು ಖತರ್ನಾಕ್ ಕಿಲಾಡಿಯ ಹೆಡೆಮುರಿಕಟ್ಟಿದ್ದಾರೆ. ಆಂಧ್ರ ಮೂಲದ ಆಸಾಮಿಯೊಬ್ಬ ಕೇಂದ್ರ ಸರ್ಕಾರದ ಯೋಜನೆಯ ಹೆಸರಲ್ಲಿ ರಾಜ್ಯದ ಮೂಲೆ-ಮೂಲೆಯಲ್ಲೂ ಹಣ ಸುಲಿದು ಮಹಾ ವಂಚನೆ ಮಾಡಿದ್ದಾನೆ. ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಸುಧೀರ್‌ ಬಾಬು ರೆಡ್ಡಿ ಎಂಬಾತನೇ ಈ ಖತರ್ನಾಕ್‌ ಆಸಾಮಿ. ಕೇಂದ್ರ ಸಾರಿಗೆ ಪಾವತಿಗಾಗಿ ಒನ್‌ ನೇಶನ್‌ ಒನ್‌ ಕಾರ್ಡ್‌ ಜಾರಿಗೆ ತಂದಿದ್ರೆ, ಇದನ್ನ ಸುಧೀರ್‌ ರೆಡ್ಡಿ ರಾಜ್ಯದಲ್ಲಿ ಬೇರೆಯದ್ದೆ ರೀತಿಯಲ್ಲಿ ಪರಿಚಯಿಸಿದ್ದ. ಒನ್‌ ನೇಶನ್‌ ಒನ್‌ ಕಾರ್ಡ್‌ ತಯಾರಿಕೆಗೆ ಕೇಂದ್ರದಿಂದ ನನಗೆ ಕರ್ನಾಟಕ ರಾಜ್ಯದ ಟೆಂಡರ್‌ ಸಿಕ್ಕಿದೆ ಎಂದು ಜನರನ್ನ ನಂಬಿಸಿದ್ದ. ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌, ರೇಶನ್‌ ಕಾರ್ಡ್‌, ಆರೋಗ್ಯ ಕಾರ್ಡಗಳನ್ನ ಸೇರಿಸಿ ಒಂದೇ ಕಾರ್ಡ್‌ ಆಗಿ ರೂಪಿಸಿ ಒನ್‌ ನೇಶನ್‌ ಒನ್‌ ಕಾರ್ಡಗಳನ್ನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ: ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more