‘ಒನ್ ಇಂಡಿಯಾ ಒನ್ ಕಾರ್ಡ್’ ಹೆಸರಲ್ಲಿ ವಂಚನೆ: ಖದೀಮರ ಜಾಲ ಪತ್ತೆ ಹಚ್ಚಿದ ವಿಜಯಪುರ ಪೊಲೀಸರು..!

‘ಒನ್ ಇಂಡಿಯಾ ಒನ್ ಕಾರ್ಡ್’ ಹೆಸರಲ್ಲಿ ವಂಚನೆ: ಖದೀಮರ ಜಾಲ ಪತ್ತೆ ಹಚ್ಚಿದ ವಿಜಯಪುರ ಪೊಲೀಸರು..!

Published : Aug 13, 2023, 11:02 AM IST

ವಿಜಯಪುರದಲ್ಲಿ ಸೈಬರ್ ಕಳ್ಳರ ಹಾವಳಿ ದಿನೇ ದಿನೇ ಜಾಸ್ತಿಯಾಗಿದೆ. ಇದೀಗ ಕೇಂದ್ರ ಸರ್ಕಾರದ ಯೋಜನೆಯನ್ನೇ ದುರ್ಬಳಕೆ ಮಾಡಿಕೊಂಡು ಜನರಿಗೆ ವಂಚನೆ ಎಸಗಲಾಗಿದೆ. ಒನ್ ನೇಷನ್ ಒನ್ ಕಾರ್ಡ್ ಹೆಸರಲ್ಲಿ ಜನರಿಗೆ ಮಹಾದೋಖ ಮಾಡಿದವನು ಪೊಲೀಸರ ಅತಿಥಿಯಾಗಿದ್ದಾನೆ.
 

ಕೇಂದ್ರ ಸರ್ಕಾರದ ಮಹತ್ವದ  ಒನ್‌ ನೇಶನ್‌ ಒನ್‌ ಕಾರ್ಡ ಯೋಜನೆ(One Nation One Card scheme) ಬಗ್ಗೆ ಈಗಾಗಲೇ ಗೊತ್ತೆ ಇದೆ. ದೇಶದ ಜನರ ಅನುಕೂಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ(PM Modi) ಮಾರ್ಚ್‌ 2019ಕ್ಕೆ ಈ ಯೋಜನೆ ಲಾಂಚ್‌ ಮಾಡಿದ್ರು. ಕೇಂದ್ರದ ಯೋಜನೆಯ ಹೆಸರನ್ನೇ ಬಳಸಿಕೊಂಡು ಆಸಾಮಿಯೊಬ್ಬ ಭಾರಿ ವಂಚನೆ(Fraud) ಮಾಡಿದ್ದಾನೆ. ಆದ್ರೆ ವಿಜಯಪುರ ಪೊಲೀಸರು ಖತರ್ನಾಕ್ ಕಿಲಾಡಿಯ ಹೆಡೆಮುರಿಕಟ್ಟಿದ್ದಾರೆ. ಆಂಧ್ರ ಮೂಲದ ಆಸಾಮಿಯೊಬ್ಬ ಕೇಂದ್ರ ಸರ್ಕಾರದ ಯೋಜನೆಯ ಹೆಸರಲ್ಲಿ ರಾಜ್ಯದ ಮೂಲೆ-ಮೂಲೆಯಲ್ಲೂ ಹಣ ಸುಲಿದು ಮಹಾ ವಂಚನೆ ಮಾಡಿದ್ದಾನೆ. ಮೂಲತಃ ಆಂಧ್ರದ ಅನಂತಪುರ ಜಿಲ್ಲೆಯ ಸುಧೀರ್‌ ಬಾಬು ರೆಡ್ಡಿ ಎಂಬಾತನೇ ಈ ಖತರ್ನಾಕ್‌ ಆಸಾಮಿ. ಕೇಂದ್ರ ಸಾರಿಗೆ ಪಾವತಿಗಾಗಿ ಒನ್‌ ನೇಶನ್‌ ಒನ್‌ ಕಾರ್ಡ್‌ ಜಾರಿಗೆ ತಂದಿದ್ರೆ, ಇದನ್ನ ಸುಧೀರ್‌ ರೆಡ್ಡಿ ರಾಜ್ಯದಲ್ಲಿ ಬೇರೆಯದ್ದೆ ರೀತಿಯಲ್ಲಿ ಪರಿಚಯಿಸಿದ್ದ. ಒನ್‌ ನೇಶನ್‌ ಒನ್‌ ಕಾರ್ಡ್‌ ತಯಾರಿಕೆಗೆ ಕೇಂದ್ರದಿಂದ ನನಗೆ ಕರ್ನಾಟಕ ರಾಜ್ಯದ ಟೆಂಡರ್‌ ಸಿಕ್ಕಿದೆ ಎಂದು ಜನರನ್ನ ನಂಬಿಸಿದ್ದ. ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌, ರೇಶನ್‌ ಕಾರ್ಡ್‌, ಆರೋಗ್ಯ ಕಾರ್ಡಗಳನ್ನ ಸೇರಿಸಿ ಒಂದೇ ಕಾರ್ಡ್‌ ಆಗಿ ರೂಪಿಸಿ ಒನ್‌ ನೇಶನ್‌ ಒನ್‌ ಕಾರ್ಡಗಳನ್ನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ: ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more