Suvarna Fir: ಮದುವೆಯಾದ ಬಳಿಕ ಮಾಜಿ ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ!

Suvarna Fir: ಮದುವೆಯಾದ ಬಳಿಕ ಮಾಜಿ ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ!

Published : Jul 23, 2022, 04:08 PM ISTUpdated : Jul 23, 2022, 04:12 PM IST

ತಾನು ಇಷ್ಟಪಟ್ಟಿದ್ದ ಯುವತಿಯ ಮದುವೆಗೆ ಆಕೆಯ ಮನೆಯವರು ಒಪ್ಪದ್ದಕ್ಕೆ ವಿವಾಹಿತ ಪಾಗಲ್‌ ಪ್ರೇಮಿಯೋರ್ವ ಮನೆಗೆ ನುಗ್ಗಿ ಅವಳ ರುಂಡ ಕಡಿದು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಸಮೀಪದ ಕನ್ನಿಬೊರಯ್ಯನಹಟ್ಟಿಯಲ್ಲಿ  ನಡೆದಿದೆ.
 

ತಾನು ಇಷ್ಟಪಟ್ಟಿದ್ದ ಯುವತಿಯ ಮದುವೆಗೆ ಆಕೆಯ ಮನೆಯವರು ಒಪ್ಪದ್ದಕ್ಕೆ ವಿವಾಹಿತ ಪಾಗಲ್‌ ಪ್ರೇಮಿಯೋರ್ವ ಮನೆಗೆ ನುಗ್ಗಿ ಅವಳ ರುಂಡ ಕಡಿದು ಪೊಲೀಸ್‌ ಠಾಣೆಗೆ ತಂದು ಶರಣಾದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಸಮೀಪದ ಕನ್ನಿಬೊರಯ್ಯನಹಟ್ಟಿಯಲ್ಲಿ  ನಡೆದಿದೆ.

ಕನ್ನಿಬೋರಯ್ಯನ ಹಟ್ಟಿ ಗ್ರಾಮದ ಚೇರ್ಮನ್‌ ಬಸಣ್ಣ ಪುತ್ರಿ ನಿರ್ಮಲಾ(23) ಕೊಲೆಯಾದವಳು. ಅದೇ ಗ್ರಾಮದ ಭೋಜರಾಜ ಕೊಲೆಗಾರ. ಇವರು ಸಂಬಂಧಿಕರೂ ಆಗಿದ್ದರು. ಯುವತಿ ಬಿಎಸ್‌ಸಿ ನರ್ಸಿಂಗ್‌ ಕೊನೆಯ ವರ್ಷ ಓದುತ್ತಿದ್ದಳು. ಭೋಜರಾಜ ಅವರದ್ದೇ ಟ್ರ್ಯಾಕ್ಟರ್‌ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 2-3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರ ಮದುವೆಗೆ ಯುವತಿ ಮನೆಯವರು ಒಪ್ಪಿರಲಿಲ್ಲ. ಹೀಗಾಗಿ ಎರಡು ತಿಂಗಳ ಹಿಂದಷ್ಟೇ ಆತ ಬೇರೊಬ್ಬಳೊಂದಿಗೆ ವಿವಾಹವಾಗಿದ್ದ. ನಿರ್ಮಲಾ 3 ದಿನದ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದಳು. ನಿರ್ಮಲಾ ಪೋಷಕರು ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ 11.30ಕ್ಕೆ ಲಾಂಗ್‌ ಹಿಡಿದುಕೊಂಡು ಮನೆಗೆ ನುಗ್ಗಿದ ಭೋಜರಾಜ, ನಿರ್ಮಲಾಳ ರುಂಡ ಕಡಿದು, ಅದನ್ನು ಬೈಕ್‌ ಮೇಲಿಸಿ 10 ಕಿ.ಮೀ. ದೂರದ ಹೊಸಹಳ್ಳಿ ಠಾಣೆಗೆ ತಂದು, ಪೊಲೀಸರಿಗೆ ಶರಣಾಗಿದ್ದಾನೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!