ಆದಿಲ್‌ ಸಾವು ಪ್ರಕರಣ: ನನ್ನ ಗಂಡ ಲೋಕಲ್ ಪೊಲೀಸರಿಗೆ ಪ್ರತಿ ತಿಂಗಳು ಮಾಮೂಲು ನೀಡ್ತಿದ್ದ ಎಂದ ಪತ್ನಿ!

ಆದಿಲ್‌ ಸಾವು ಪ್ರಕರಣ: ನನ್ನ ಗಂಡ ಲೋಕಲ್ ಪೊಲೀಸರಿಗೆ ಪ್ರತಿ ತಿಂಗಳು ಮಾಮೂಲು ನೀಡ್ತಿದ್ದ ಎಂದ ಪತ್ನಿ!

Published : May 26, 2024, 05:37 PM ISTUpdated : May 26, 2024, 05:43 PM IST

ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ ಸಂಬಂಧ ಹೊಸ ವಿಷಯ ಬೆಳಕಿಗೆ ಬಂದಿದೆ. ಈ ಮೂಲಕ ಚನ್ನಗಿರಿಯಲ್ಲಿ ಬೇರು ಬಿಟ್ಟಿದಿಯಾ ಮಟ್ಕಾ ದಂಧೆ ಎನ್ನುವ ಪ್ರಶ್ನೆ ಕಾಡತೊಡಗಿದೆ. ಯಾಕೆಂದರೆ ಆದಿಲ್ ಸಾವಿನ ಸುತ್ತಾ ಮಟ್ಕಾ ದಂಧೆಯ ಜಾಡು ಕಂಡುಬರುತ್ತಿದೆ. ಆದಿಲ್ ಮಟ್ಕಾ ದಂಧೆ ಬಗ್ಗೆ ಪತ್ನಿ ಹೀನಾಬಾನು ಒಪ್ಪಿಕೊಂಡಿದ್ದಾರೆ.  

ಚನ್ನಗಿರಿಯಲ್ಲಿ(Channagiri) ಲಾಕಪ್ ಡೆತ್ (Lockup Death) ಆರೋಪ ಸಂಬಂಧ ಇದೀಗ ಚನ್ನಗಿರಿ ಧಗಧಗ ಉರಿಯುತ್ತಿದೆ. ಅಲ್ಲದೆ ಈ ವೇಳೆ ಚನ್ನಗಿರಿಯಲ್ಲಿ ಬೇರು ಬಿಟ್ಟಿದಿಯಾ ಮಟ್ಕಾ ದಂಧೆ ಎನ್ನುವ ಪ್ರಶ್ನೆ ಕಾಡತೊಡಗಿದೆ. ಯಾಕೆಂದರೆ ಆದಿಲ್ (Adil) ಸಾವಿನ ಸುತ್ತಾ ಮಟ್ಕಾ ದಂಧೆಯ ಜಾಡು ಕಂಡುಬರುತ್ತಿದೆ. ಆತನ ಸಾವಿಗೆ ಮಟ್ಕಾ ದಂಧೆಯೆ ಕಾರಣವಾಯ್ತಾ ಅನ್ನೋ ಪ್ರಶ್ನೆ ಮೂಡಿದ್ದು, ಆದಿಲ್ ಮಟ್ಕಾ ದಂಧೆ ಬಗ್ಗೆ ಪತ್ನಿ ಹೀನಾಬಾನು ಒಪ್ಪಿಕೊಂಡಿದ್ದಾರೆ. ಅಲ್ಲದೆ  ಚನ್ನಗಿರಿ ಪೊಲೀಸರಿಗೆ ಮಟ್ಕಾ ಕಮಿಷನ್‌ನಲ್ಲಿ ಪಾಲನ್ನೂ ಸಹ ನೀಡಲಾಗುತ್ತಿತ್ತಂತೆ. ನನ್ನ ಗಂಡ ಲೋಕಲ್ ಪೊಲೀಸರಿಗೆ ಪ್ರತಿ ತಿಂಗಳು ಮಾಮೂಲು ನೀಡ್ತಿದ್ದ, ಈ ತಿಂಗಳು ಮಾಮೂಲು ನೀಡಿಲ್ಲ ಎಂದು ಕರೆದುಕೊಂಡು ಹೋಗಿದ್ರು, ಆದ್ರೆ ನನ್ನ ಗಂಡನನ್ನೇ ಕೊಂದು ಬಿಟ್ಟಿದ್ದಾರೆ ಎಂದು ಹೀನಾಬಾನು ಅಳಲು ತೋಡಿಕೊಂಡಿದ್ದಾರೆ. 

ಇನ್ನುಯ ಚನ್ನಗಿರಿಯಲ್ಲಿ ಯಾವುದೇ ಮಟ್ಕಾ ದಂಧೆ (Matka Gang) ಇಲ್ಲ ಎಂದು ‘ಕೈ’ ಶಾಸಕ ಹೇಳಿಕೆ ನೀಡಿದ್ದಾರೆ. ಆದರೆ ಈ ಹಿಂದೆ ಆದಿಲ್ ಮೇಲೆಯೇ 3 ಬಾರಿ ಮಟ್ಕಾ ಕೇಸ್ ದಾಖಲಾಗಿದೆ. ಆದಿಲ್ ಸಾವಿನ ಬಳಿಕ ಚನ್ನಗಿರಿಯಲ್ಲಿ ಮಟ್ಕಾ ದಂಧೆ ಗುಟ್ಟು ರಟ್ಟಾಗಿದ್ದು,  ಮಟ್ಕಾ ದಂಧೆಗೆ ಡಿವೈಎಸ್‌ಪಿ, ಸರ್ಕಲ್ ಇನ್‌ಸ್ಪೆಕ್ಟರ್‌ ತಲೆದಂಡವಾಗಿದ್ದು, ಮಟ್ಕಾ ವಿರುದ್ಧ ಚನ್ನಗಿರಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ವೀಕ್ಷಿಸಿ:  ಕರ್ನಾಟಕ ಬಿಹಾರ ಆಗುತ್ತಿದೆ ಎಂದ ವಿಜಯೇಂದ್ರ: 27 ಜನರ ಸಾವಿಗೆ ಹೊಣೆ ಯಾರು ಎಂದ ಪರಮೇಶ್ವರ್‌?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!