Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Published : Jun 22, 2023, 05:22 PM IST

ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.

ಉಳ್ಳಾಲ (ಜೂ.22): ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು-ಮಂಜನಾಡಿ-ತೌಡುಗೋಳಿ ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುವ ಖಾಸಗಿ ಬಸ್ಸು ವೇಗವಾಗಿ ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಬರುತ್ತಿದ್ದಾಗ ಮಹಿಳೆಯೊಬ್ಬರು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದು, ಈ ಸಂದರ್ಭದಲ್ಲಿ ಚಾಲಕ ತ್ಯಾಗರಾಜ್‌ ಕೈರಂಗಳ ಸಮಯ ಪ್ರಜ್ಞೆಯಿಂದ ಮಹಿಳೆ ಕೂದಳೆಲೆಯ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ.

ಮಹಿಳೆಯನ್ನ ಅಪಘಾತದಿಂದ ಪಾರು ಮಾಡಿದ ಚಾಲಕನನ್ನು ಸ್ಥಳೀಯರು ಶ್ಲಾಘಿಸಿದ್ದು ಘಟನೆಯ ಸಿಸಿಟಿವಿ ದೃಶ್ಯ ಜಾಲ ತಾಣಗಳಲ್ಲಿ ವೈರಲ್‌ ಆಗಿ ಎಲ್ಲ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಸುದ್ದಿವಾಹಿನಿಗಳಲ್ಲಿ ಹೀರೋ ಆಗಿದ್ದ ಬಸ್ಸು ಚಾಲಕನ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಕರ್ಕಷ ಹಾರ್ನ್,ಅಜಾಗರೂಕತೆ ಚಾಲನೆಯ ಕೇಸ್‌ ಜಡಿದದ್ದಲ್ಲದೆ , ಬಸ್ಸನ್ನು ವಶಕ್ಕೆ ಪಡೆದು ಕರ್ಕಷ ಹಾರ್ನನ್ನು ಕಿತ್ತೆಸೆದು ಬಳಿಕ ಬಸ್ಸನ್ನು ಬಿಟ್ಟು ಕಳಿಸಿದ್ದಾರೆ.
 

23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
Read more