Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Mangaluru: ಮಹಿಳೆ ಜೀವ ಉಳಿಸಿದ್ದ ಡ್ರೈವರ್‌ ವಿರುದ್ಧ ಕೇಸ್‌!

Published : Jun 22, 2023, 05:22 PM IST

ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.

ಉಳ್ಳಾಲ (ಜೂ.22): ಪಾದಚಾರಿ ಮಹಿಳೆಯನ್ನ ತನ್ನ ಚಾಣಾಕ್ಷತೆಯಿಂದ ರಕ್ಷಿಸಿ ಹೀರೋ ಆಗಿದ್ದ ಬಸ್‌ ಚಾಲಕನ ವಿರುದ್ಧ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು-ಮಂಜನಾಡಿ-ತೌಡುಗೋಳಿ ಮಾರ್ಗವಾಗಿ ಮುಡಿಪು ಕಡೆಗೆ ಸಂಚರಿಸುವ ಖಾಸಗಿ ಬಸ್ಸು ವೇಗವಾಗಿ ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಬರುತ್ತಿದ್ದಾಗ ಮಹಿಳೆಯೊಬ್ಬರು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದು, ಈ ಸಂದರ್ಭದಲ್ಲಿ ಚಾಲಕ ತ್ಯಾಗರಾಜ್‌ ಕೈರಂಗಳ ಸಮಯ ಪ್ರಜ್ಞೆಯಿಂದ ಮಹಿಳೆ ಕೂದಳೆಲೆಯ ಅಂತರದಲ್ಲಿ ಅಪಘಾತದಿಂದ ಪಾರಾಗಿದ್ದಾರೆ.

ಮಹಿಳೆಯನ್ನ ಅಪಘಾತದಿಂದ ಪಾರು ಮಾಡಿದ ಚಾಲಕನನ್ನು ಸ್ಥಳೀಯರು ಶ್ಲಾಘಿಸಿದ್ದು ಘಟನೆಯ ಸಿಸಿಟಿವಿ ದೃಶ್ಯ ಜಾಲ ತಾಣಗಳಲ್ಲಿ ವೈರಲ್‌ ಆಗಿ ಎಲ್ಲ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಸುದ್ದಿವಾಹಿನಿಗಳಲ್ಲಿ ಹೀರೋ ಆಗಿದ್ದ ಬಸ್ಸು ಚಾಲಕನ ವಿರುದ್ಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಕರ್ಕಷ ಹಾರ್ನ್,ಅಜಾಗರೂಕತೆ ಚಾಲನೆಯ ಕೇಸ್‌ ಜಡಿದದ್ದಲ್ಲದೆ , ಬಸ್ಸನ್ನು ವಶಕ್ಕೆ ಪಡೆದು ಕರ್ಕಷ ಹಾರ್ನನ್ನು ಕಿತ್ತೆಸೆದು ಬಳಿಕ ಬಸ್ಸನ್ನು ಬಿಟ್ಟು ಕಳಿಸಿದ್ದಾರೆ.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more