ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

Published : Jul 19, 2024, 04:32 PM IST

ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭಾರೀ ಗೋಲ್ಮಾಲ್
ಮನೆಗಳನ್ನ ನಿರ್ಮಿಸಿದೇ ಕೋಟಿ ಕೋಟಿ ಹಣ ಲೂಟಿ
256 ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭ್ರಷ್ಟಾಚಾರ
 


ಪಿಎಂ ಆವಾಸ್‌ ಯೋಜನೆಯಲ್ಲಿ(PM Awas project) ಭಾರೀ ಅವ್ಯವಹಾರ ನಡೆದಿರುವ ಘಟನೆ ಕಲಬುರಗಿಯಲ್ಲಿ(Kalaburagi) ನಡೆದಿದೆ. ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ (Corrupt officials) ದರ್ಬಾರ್‌ ಜೋರಾಗಿದ್ದು, ಅಫಜಲಪುರದಲ್ಲಿ ಪಿಎಂ  ಆವಾಸ್ ಯೋಜನೆ ಹಳ್ಳ ಹಿಡಿದಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭಾರೀ ಗೋಲ್‌ಮಾಲ್‌ ಮಾಡಲಾಗಿದೆ. ಮನೆಗಳನ್ನ(Houses) ನಿರ್ಮಿಸಿದೇ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. 256 ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭ್ರಷ್ಟಾಚಾರ ನಡೆಸಲಾಗಿದೆ. 2019- 20ನೇ ಸಾಲಿನಲ್ಲಿ ನಕಲಿ ಫಲಾನುಭವಿಗಳ ಸೃಷ್ಟಿಸಿದ್ದು, ಒಂದೊಂದು ಮನೆಗೆ 1.5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟು 256 ಫಲಾನುಭವಿಗಳ ಹೆಸರಲ್ಲಿ 2 ಕೋಟಿ 65 ಲಕ್ಷ ಗುಳುಂ ಮಾಡಲಾಗಿದೆ. ಒಂದೇ ಒಂದೂ ಮನೆ ನಿರ್ಮಾಣ ಆಗದೆ ಹಣ ಗುಳುಂ ಮಾಡಲಾಗಿದ್ದು, ಪುರಸಭೆ ಅಧಿಕಾರಿಗಳು, ಮಧ್ಯವರ್ತಿಗಳಿಂದ ಹಣ ಲೂಟಿ ಮಾಡಲಾಗಿದೆ. ಕಲಬುರಗಿಯಲ್ಲಿ ಪಿಎಂ ಆವಾಸ್ ಯೋಜನೆಯೇ ಬುಡಮೇಲಾಗಿದೆ. ಲೋಕಾಯುಕ್ತ ತನಿಖೆಯಿಂದ ಅಕ್ರಮ ಬಯಲಾಗಿದ್ದು, ಮೂವರು ಮಧ್ಯವರ್ತಿಗಳ ವಿರುದ್ದ FIR ದಾಖಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್ ಭೂತಿ, ನಾಗು ಗುಣಾರಿ , ಮಹಾದೇವಪ್ಪ ವಿರುದ್ಧ FIR ದಾಖಲಿಸಲಾಗಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಹಣ ಲಪಟಾಯಿಸಿದ ಮೂವರು, ಹಣ ವಾಪಸ್ ಪಡೆಯಲು ಪುರಸಭೆ ಅಧಿಕಾರಿಗಳಿಂದ ಹರಸಾಹಸ ಪಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more